Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...