Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...