Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...