Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...