Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...