Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...