Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್...

ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಡಿ.ಜೆ. ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಹಿಂದೂ ವಿರೋಧಿ ಪೊಸ್ಟ್ ಒಂದಕ್ಕೆ ಉತ್ತರಿಸಿದ್ದರು, ಆದರೆ ಆ ಹಿಂದೂ ವಿರೋಧಿ ಪೋಸ್ಟ್ ಅನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಈ ವಾರ ಬೆಂಗಳೂರಿನ ಹಿಂಸಾಚಾರಕ್ಕೆ ಕಾರಣವಾದ ಪಿ ನವೀನ್ ಕುಮಾರ್ ಎನ್ನುವವರು ತಮ್ಮ ಫೇಸ್‌ಬುಕ್ ಪೋಸ್ಟ್ ನಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದು, ಹಿಂದೂ ದೇವತೆಯ ಬಗ್ಗೆ ಮುಸ್ಲಿಂ ವ್ಯಕ್ತಿಯೊಬ್ಬರು ಮಾಡಿದ ಅವಹೇಳನಕಾರಿ ಪೋಸ್ಟ್‌ಗೆ ಉತ್ತರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ ಪ್ರಕಾರ, ನವೀನ್ ಕುಮಾರ್ ಅವರ ಪೋಸ್ಟ್ ಅನ್ನು ಗುರಿ ಮಾಡಿ ಟೀಕಿಸಿದವರು, ಮುಸ್ಲಿಂ ವ್ಯಕ್ತಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ನಿರ್ಲಕ್ಷಿಸಲಾಗಿದೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಇವುಗಳಲ್ಲಿ ಯಾವುದೂ ನಿಜವಲ್ಲ ಎಂದು ಕಂಡುಬಂದಿದೆ ಮತ್ತು ಫೋಟೊಶಾಪ್ ಮಾಡಿದ ಫೋಟೊವನ್ನು ಹರಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗಲಭೆಯಲ್ಲಿ ಮೂರು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಬಶೀರ್ ಅಡ್ಯಾರ್ ಎಂಬ ವ್ಯಕ್ತಿಯು ಹಿಂದೂ ದೇವತೆ ಲಕ್ಷ್ಮಿಯನ್ನು ಅವಮಾನಿಸುವ ಮೂಲಕ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅದರೊಳಗೆ ತಂದು ಆ ಫೋಟೋ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ನಲ್ಲಿ ಲಕ್ಷ್ಮಿ ದೇವಿಯ ಬಗ್ಗೆ ಪ್ರಸಿದ್ಧ ಕವಿತೆಯ ಅವಹೇಳನಕಾರಿ ಆವೃತ್ತಿಯೂ ಇದೆ.

ಹಾಗಾಗಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ  ಸೋದರಳಿಯ 34 ವರ್ಷದ ನವೀನ್ ಈ ಪೋಸ್ಟ್ ಗೆ ಪ್ರವಾದಿ ಮೊಹಮ್ಮದ್ ಅವರ ಅವಹೇಳನಕಾರಿ ವ್ಯಂಗ್ಯಚಿತ್ರದೊಂದಿಗೆ ಉತ್ತರಿಸಿದ್ದರು ಎಂದು ಸಮರ್ಥಿಸಲಾಗಿದೆ.

ಇದೆ ರೀತಿಯ ಪೋಸ್ಟ್ ಗಳನ್ನು ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ ಅವುಗಳು ತೀರಾ ಅವಹೇಳನಕಾರಿಯಾಗಿರುವುದರಿಂದ ಇಲ್ಲಿ ಪ್ರಕಟಿಸಲಾಗುವುದಿಲ್ಲ.

ಫ್ಯಾಕ್ಟ್ ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ನ ಸ್ಕ್ರೀನ್‌ಶಾಟ್ ನಿಜವಲ್ಲ. ಅದರಲ್ಲಿ ಎಡಿಟ್ ಮಾಡಿರುವುದು ಕಂಡುಬಂದಿದೆ.

ವಾಸ್ತವದಲ್ಲಿ ಒಂದು ಪೋಸ್ಟ್‌ನ ನಂತರ ಕೆಳಗಿನ ಚಿತ್ರದಲ್ಲಿ ಇರುವಂತೆ ಕಾಮೆಂಟ್‌ಗಳು ಕಾಣಿಸಿಕೊಳ್ಳುವ ಮೊದಲು ತುಸು ಅಂತರದ ಜೊತೆಗೆ ಕಾಮೆಂಟ್‌ಗಳು, ಲೈಕ್‍ಗಳು ಮತ್ತು ಶೇರ್ ಗಳು ಎಂದು ಕಾಣುತ್ತದೆ.

ಇದಲ್ಲದೆ, ಕನ್ನಡದಲ್ಲಿ ಕೀವರ್ಡ್ ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಿದಾಗ, ಬಶೀರ್ ಅಡ್ಯಾರ್ ಪೋಸ್ಟ್ ಅನ್ನು ಹಂಚಿದ ಹಲವಾರು ಬಳಕೆದಾರರನ್ನು ಕಾಣಬಹುದಾಗಿದೆ. ಆದರೆ ಅದು ಜೂನ್ 2018 ರಲ್ಲಿ ಮಾಡಿದ ಪೋಸ್ಟ್ ಗಳಾಗಿದೆ.

ಈ ಪೋಸ್ಟ್ ಗಳು ಬಶೀರ್ ಅಡ್ಯಾರ್ ಎಂಬ ವ್ಯಕ್ತಿ ಲಕ್ಷ್ಮಿ ದೇವತೆ ಮತ್ತು ಪ್ರಧಾನಿ ಮೋದಿ ಬಗ್ಗೆ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಮತ್ತು ಭಕ್ತಿಗೀತೆಯ ಸಾಹಿತ್ಯವನ್ನು ಅಶ್ಲೀಲವಾಗಿ ತಿರುಚಿದ್ದಾನೆ ಎಂದು ಪೋಸ್ಟ್‌ಗಳು ತಿಳಿಸಿವೆ.

ಇದರ ಆರ್ಕೈವ್ ಗೆ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಕನ್ನಡದಲ್ಲಿ ಬಶೀರ್ ಅಡ್ಯಾರ್ ಎಂದು ಗೂಗಲ್‌ನಲ್ಲಿ ಹುಡುಕಿದಾಗ, ಜೂನ್ 17, 2018 ರ ಕನ್ನಡ ದಿನಪತ್ರಿಕೆ ಪ್ರಜಾವಾಣಿ ದಿನಪತ್ರಿಕೆಯ ವರದಿಯನ್ನು ನೋಡಬಹುದಾಗಿದೆ.

ಅದರಲ್ಲಿ 2018 ರ ಜೂನ್‌ನಲ್ಲಿ ಬಶೀರ್ ಅಡ್ಯಾರ್ ಎಂಬ ಪ್ರೊಫೈಲ್‌ನಿಂದ ಅಪ್‌ಲೋಡ್ ಮಾಡಿದ ಈ ಅವಹೇಳನಕಾರಿ ಪೋಸ್ಟ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಅದೇ ಖಾತೆಯು ಛತ್ರಪತಿ ಶಿವಾಜಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದೆ ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಜೂನ್ 2018 ರ ದಿ ಹಿಂದೂ ಲೇಖನವೊಂದರ ಪ್ರಕಾರ, ಮಂಗಳೂರಿನ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿದ್ದಾರೆ ಮತ್ತು ಬಶೀರ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಲ್ಲದೆ ಇದೆ ಹೇಳಿಕೆಯನ್ನು ಮಂಗಳೂರು ಟೈಮ್ಸ್ ಆಫ್ ಇಂಡಿಯಾದ ಪತ್ರಕರ್ತರ ಟ್ವೀಟ್ ನಲ್ಲಿ ಕೂಡಾ ಕಾಣಬಹುದಾಗಿದೆ.

ಆದ್ದರಿಂದ, ಹಿಂದೂ ದೇವತೆಗಳ ಬಗ್ಗೆ ಈ ಅವಹೇಳನಕಾರಿ ಪೋಸ್ಟ್ ಮಾಡಿದ್ದು ನಿಜವಾಗಿದ್ದರೂ, ಅದು ಇತ್ತೀಚಿನದಲ್ಲ ಅದು ಜೂನ್ 2018 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ. ಇದಲ್ಲದೆ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಖಾತೆಯ ಯಾವುದೇ ಕುರುಹು ಕೂಡಾ ಸಿಗಲಿಲ್ಲ. ಅದು ಹಿಂದೂವೊಬ್ಬರ ಪೋಸ್ಟ್ ಆಗಿದ್ದು ಬಶೀರ್ ಎಂಬ ಹೆಸರಿನಲ್ಲಿ ತೆರೆಯಲಾಗಿದೆ ಎಂಬ ಆರೋಪ ಕೂಡ ಇದೆ.

ಆದ್ದರಿಂದ ಫೇಸ್‌ಬುಕ್‌ನಲ್ಲಿ ಅಸ್ತಿತ್ವದಲ್ಲಿರದ ಪೋಸ್ಟ್‌ಗೆ ನವೀನ್ ಉತ್ತರಿಸಿರುವ ಸಾಧ್ಯತೆಯೆ ಇಲ್ಲ. ಇದು ಸುಳ್ಳು ಪ್ರಚಾರ ಮಾಡುವ ಸಲುವಾಗಿ 2018 ರ ಫೇಸ್‌ಬುಕ್ ಪೋಸ್ಟ್‌ನ ಫೋಟೋವನ್ನು ಡಾಕ್ಟರೇಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.


ಓದಿ: ಫ್ಯಾಕ್ಟ್‌‌ಚೆಕ್: ಹರಿಯಾಣ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆದಿದ್ದು ನಿಜವೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...