Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆಯನ್ನು ಖಂಡಿಸಿರುವ ಮುಸ್ಲಿಂ ಸಂಘಟನೆಗಳು, ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರ ಶೈಲಿಯಲ್ಲ ಎಂದು ಹೇಳಿದ್ದು ಸಮಸ್ಯೆಯನ್ನು ಕಾನೂನು ಮೂಲಕ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಎನ್ನಲಾದ ನವೀನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಘರ್ಷಣೆಯಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದು, 110 ಜನರನ್ನು ಬಂಧಿಸಲಾಗಿದೆ.

ಘಟನೆಯ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯಾದರ್ಶಿ ಮೌಲಾನಾ ಶಾಪಿ ಸಅದಿ, “ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಂಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ ಎಂದು ಆಗ್ರಹಿಸಿರುವ ಅವರು, ಕಾನೂನು ಕೈಗೆತ್ತಿಕೊಳ್ಳುವುದು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವುದನ್ನು ಖಂಡಿಸಿದ್ದಾರೆ. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು ಎಂದಿರುವ ಅವರು ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಜಮಾತೆ ಇಸ್ಲಾಮಿ ಹಿಂದ್ ನ ರಾಜ್ಯಾಧ್ಯಕ್ಷ ಡಾ.ಬೆಲಗಾಮಿ ಪ್ರವಾದಿಯನ್ನು ನಿಂದನೆ ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಸಿದೆ. ಶಾಂತಿ ಸ್ಥಾಪನೆಗೆ ನಾವು ಕಟಿಬದ್ದರಾಗಿದ್ದೇವೆ, ಪೊಲೀಸರು ನಿಷ್ಪಕ್ಷವಾಗಿ ಕೆಲಸ ಮಾಡಬೇಕು ಅಲ್ಲದೆ ಮಾಧ್ಯಮಗಳು ಕೂಡಾ ಇದನ್ನು ಪ್ರಚೋದನೆ ಮಾಡಬಾರದು, ಸಂವೇಶನಶೀಲವಾಗಿ ವರದಿ ಮಾಡಬೇಕು. ಮುಸ್ಲಿಂ ಯುವಕರು ಶಾಂತಿಯಿಂದ ವರ್ತಿಸಬೇಕು ಯಾರು ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

DJ Halli incident. Kannada statement of Dr. Belgami Muhammad Saad, State President, Jamaat e Islami Hind Karnataka.

Posted by Jamaat-e-Islami Hind Karnataka on Wednesday, August 12, 2020

ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಇದರ ಅಬ್ದುಲ್ ಖಾದಿರ್‍, “ಪ್ರವಾದಿ ಮೊಹಮ್ಮದ್‌ರ ಅವಹೇಳನವನ್ನು ಸಾಮಾನ್ಯವಾಗಿ ಯಾವ ಮುಸ್ಲಿಂ ಕೂಡಾ ಸಹಿಸಿಕೊಳ್ಳುವುದಿಲ್ಲ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಕೂಡಾ ತುಸು ತಡಮಾಡಿದ್ದಾರೆ, ಇದು ಸೇರಿರುವ ಜನರಿಗೆ ಇನ್ನಷ್ಟು ಕೋಪ ಉಂಟು ಮಾಡಿದೆ ಎನ್ನಲಾಗುತ್ತಿದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪೇ ಆಗಿದೆ. ಏನೇ ಸಮಸ್ಯೆಗಳಿದ್ದರು ಕಾನೂನಿನ ಮೂಲಕವೆ ಬಗೆಹರಿಸಬೇಕು. ಈಗ ಪ್ರವಾದಿಯನ್ನು ಅವಹೇಳನ ಮಾಡಿದ ವ್ಯಕ್ತಿಯನ್ನು ಶಿಕ್ಷಿಸುವುದರ ಜೊತೆಗೆ ಗಲಭೇಕೋರರನ್ನು ಕೂಡಾ ಪತ್ತೆ ಹಚ್ಚಿ ಶಿಕ್ಷಿಸಬೇಕಾಗಿದೆ, ಈ ಹೆಸರಲ್ಲಿ ಅಮಾಯಕರು ಬಲಿಯಾಗದಿರಲಿ” ಎಂದು ಹೇಳಿದ್ದಾರೆ.

ಅಲ್‌ಅನ್ಸಾರ್‍ ವಾರಪತ್ರಿಕೆಯ ಸಂಪಾದಕ ಕೆ. ಎಂ. ಸಿದ್ದೀಕ್ ಮೋಂಟುಗೋಳಿ ಮಾತನಾಡಿ, ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿಯುವುದೂ ಪ್ರವಾದಿ ನಿಂದನೆಯೆ ಆಗಿದೆ ಎಂದು ಹೇಳಿದ್ದಾರೆ.

ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿದವರು ಮಾಡಿದ್ದು ಕೂಡ ಪ್ರವಾದಿ ನಿಂದನೆಯೆ?

Posted by Km Siddeeq on Wednesday, August 12, 2020

“ಮುಸ್ಲಿಮರು ಅತ್ಯಂತ ಗೌರವಿಸುವ ಪ್ರವಾದಿಗಳನ್ನು ನಿಂದಿಸಿ ಜಾಲತಾಣಗಳಲ್ಲಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪ್ರಜಾಸತ್ತಾತ್ಮಕ ಹೋರಾಟ ನಡೆಸುವುದು ಬಿಟ್ಟು ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಳಿದಿರುವುದನ್ನು ಸಮುದಾಯ ಎಂದೂ ಕ್ಷಮಿಸುವುದಿಲ್ಲ. ಪ್ರವಾದಿಯ ನಿಂದನೆ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಸೈದ್ಧಾಂತಿಕವಾಗಿ ಅವರ ಸಿದ್ಧಾಂತಗಳನ್ನು ಎದುರಿಸಲಾಗದವರು ಮಾತ್ರ ನಿಂದನೆಗಿಳಿಯುತ್ತಾರೆ. ಮುಸ್ಲಿಮರನ್ನು ಪ್ರಚೋದಿಸಿ ಅವರನ್ನು ಸಂಘರ್ಷಕ್ಕೆ ಹಚ್ಚುವ ಷಡ್ಯಂತ್ರ ನಡೆಯುತ್ತಲೇ ಇದೆ. ಇದನ್ನರಿತು ಸಮುದಾಯ ಸಂಯಮದಿಂದ ವರ್ತಿಸಬೇಕು. ಇದೀಗ ಮಾಧ್ಯಮಗಳು ಕೂಡ ಹಸಿದ ನಾಯಿಗೆ ಎಲುಬು ಸಿಕ್ಕಂತೆ ಸಂಭ್ರಮಿಸಿ ಪ್ರಕರಣವನ್ನು ದೀರ್ಘಕಾಲ ಜೀವಂತವಿಡಲು ಪ್ರಯತ್ನಿಸುತ್ತಿರುವುದು ವಿಷಾದನೀಯ” ಎಂದು ಸಿದ್ದೀಕ್ ಹೇಳಿದ್ದಾರೆ.

ಪ್ರವಾದಿ ನಿಂದನೆಯ ಫೇಸ್‌ಬುಕ್ ಪೋಸ್ಟ್ ಹಾಗೂ ಹಿಂಸಾಚಾರಗಳೆರಡೂ ಖಂಡನಾರ್ಹ ಎಂದಿರುವ ಸುನ್ನಿ ಸ್ಟೂಡೆಂಟ್ ಫಡರೇಷನ್ (ಎಸ್ಸೆಸ್ಸೆಫ್) ಕರ್ನಾಟಕ ರಾಜ್ಯ ಸಮಿತಿ, “ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಪೋಸ್ಟ್ ಹಂಚುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾರೇ ಆದರೂ ಶಿಕ್ಷಾರ್ಹರು. ಅದೇ ರೀತಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರಕ್ಕಿಳಿಯುವುದು ಕೂಡ ವಿಶ್ವ ಪ್ರವಾದಿಯವರ ಬೋಧನೆಗೆ ಮಸಿಬಳಿಯುವ ಪ್ರಯತ್ನವಾಗಿದೆ”‌ ಎಂದು ಅಭಿಪಪ್ರಾಯ ಪಟ್ಟಿದೆ.

“ಯಾವುದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು‌ ಎಂದು ಎಸ್ಸೆಸ್ಸೆಫ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಹಿಂದೆಯೂ ಕೆಲವು ದುಷ್ಕರ್ಮಿಗಳು ಅನಗತ್ಯವಾಗಿ ಪ್ರವಾದಿಯವರನ್ನು ಅವಮಾನಕರವಾಗಿ ಚರ್ಚೆಗೆ ಎಳೆದು ತರುವ ಪ್ರಯತ್ನವನ್ನು ಮಾಡಿದ್ದರು. ಅಂತಹ ದುಷ್ಕರ್ಮಿಗಳ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ಖೇದಕರ‌. ಇನ್ನು ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ರಾಜ್ಯ ಗೃಹ ಇಲಾಖೆಯು ಎಚ್ಚರ ವಹಿಸಬೇಕು” ಎಂದು ಎಸ್ಸೆಸ್ಸೆಫ್ ಪ್ರಕಟನೆಯಲ್ಲಿ ಆಗ್ರಹಿಸಿದೆ.

ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್(ಎಸ್‌ಐಒ), ” ಕೋಟ್ಯಾಂತರ ಮುಸ್ಲಿಮರು ಗೌರವಯುತವಾಗಿ ಕಾಣುವ ಪ್ರವಾದಿಯ ನಿಂದನೆ ಖಂಡನಾರ್ಹ, ಆದರೆ ಇಂತಹ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಹುಡುಕಬೇಕೆ ವಿನಃ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೆಲದ ಕಾನೂನಿಗೆ ಗೌರವ ನೀಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ನಿನ್ನೆ ಗಲಭೆಯಲ್ಲಿ ಭಾಗಿಯಾದವನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಓದಿ: ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...