Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆಯನ್ನು ಖಂಡಿಸಿರುವ ಮುಸ್ಲಿಂ ಸಂಘಟನೆಗಳು, ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರ ಶೈಲಿಯಲ್ಲ ಎಂದು ಹೇಳಿದ್ದು ಸಮಸ್ಯೆಯನ್ನು ಕಾನೂನು ಮೂಲಕ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಎನ್ನಲಾದ ನವೀನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಘರ್ಷಣೆಯಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದು, 110 ಜನರನ್ನು ಬಂಧಿಸಲಾಗಿದೆ.

ಘಟನೆಯ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯಾದರ್ಶಿ ಮೌಲಾನಾ ಶಾಪಿ ಸಅದಿ, “ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಂಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ ಎಂದು ಆಗ್ರಹಿಸಿರುವ ಅವರು, ಕಾನೂನು ಕೈಗೆತ್ತಿಕೊಳ್ಳುವುದು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವುದನ್ನು ಖಂಡಿಸಿದ್ದಾರೆ. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು ಎಂದಿರುವ ಅವರು ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಜಮಾತೆ ಇಸ್ಲಾಮಿ ಹಿಂದ್ ನ ರಾಜ್ಯಾಧ್ಯಕ್ಷ ಡಾ.ಬೆಲಗಾಮಿ ಪ್ರವಾದಿಯನ್ನು ನಿಂದನೆ ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಸಿದೆ. ಶಾಂತಿ ಸ್ಥಾಪನೆಗೆ ನಾವು ಕಟಿಬದ್ದರಾಗಿದ್ದೇವೆ, ಪೊಲೀಸರು ನಿಷ್ಪಕ್ಷವಾಗಿ ಕೆಲಸ ಮಾಡಬೇಕು ಅಲ್ಲದೆ ಮಾಧ್ಯಮಗಳು ಕೂಡಾ ಇದನ್ನು ಪ್ರಚೋದನೆ ಮಾಡಬಾರದು, ಸಂವೇಶನಶೀಲವಾಗಿ ವರದಿ ಮಾಡಬೇಕು. ಮುಸ್ಲಿಂ ಯುವಕರು ಶಾಂತಿಯಿಂದ ವರ್ತಿಸಬೇಕು ಯಾರು ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

DJ Halli incident. Kannada statement of Dr. Belgami Muhammad Saad, State President, Jamaat e Islami Hind Karnataka.

Posted by Jamaat-e-Islami Hind Karnataka on Wednesday, August 12, 2020

ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಇದರ ಅಬ್ದುಲ್ ಖಾದಿರ್‍, “ಪ್ರವಾದಿ ಮೊಹಮ್ಮದ್‌ರ ಅವಹೇಳನವನ್ನು ಸಾಮಾನ್ಯವಾಗಿ ಯಾವ ಮುಸ್ಲಿಂ ಕೂಡಾ ಸಹಿಸಿಕೊಳ್ಳುವುದಿಲ್ಲ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಕೂಡಾ ತುಸು ತಡಮಾಡಿದ್ದಾರೆ, ಇದು ಸೇರಿರುವ ಜನರಿಗೆ ಇನ್ನಷ್ಟು ಕೋಪ ಉಂಟು ಮಾಡಿದೆ ಎನ್ನಲಾಗುತ್ತಿದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪೇ ಆಗಿದೆ. ಏನೇ ಸಮಸ್ಯೆಗಳಿದ್ದರು ಕಾನೂನಿನ ಮೂಲಕವೆ ಬಗೆಹರಿಸಬೇಕು. ಈಗ ಪ್ರವಾದಿಯನ್ನು ಅವಹೇಳನ ಮಾಡಿದ ವ್ಯಕ್ತಿಯನ್ನು ಶಿಕ್ಷಿಸುವುದರ ಜೊತೆಗೆ ಗಲಭೇಕೋರರನ್ನು ಕೂಡಾ ಪತ್ತೆ ಹಚ್ಚಿ ಶಿಕ್ಷಿಸಬೇಕಾಗಿದೆ, ಈ ಹೆಸರಲ್ಲಿ ಅಮಾಯಕರು ಬಲಿಯಾಗದಿರಲಿ” ಎಂದು ಹೇಳಿದ್ದಾರೆ.

ಅಲ್‌ಅನ್ಸಾರ್‍ ವಾರಪತ್ರಿಕೆಯ ಸಂಪಾದಕ ಕೆ. ಎಂ. ಸಿದ್ದೀಕ್ ಮೋಂಟುಗೋಳಿ ಮಾತನಾಡಿ, ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿಯುವುದೂ ಪ್ರವಾದಿ ನಿಂದನೆಯೆ ಆಗಿದೆ ಎಂದು ಹೇಳಿದ್ದಾರೆ.

ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿದವರು ಮಾಡಿದ್ದು ಕೂಡ ಪ್ರವಾದಿ ನಿಂದನೆಯೆ?

Posted by Km Siddeeq on Wednesday, August 12, 2020

“ಮುಸ್ಲಿಮರು ಅತ್ಯಂತ ಗೌರವಿಸುವ ಪ್ರವಾದಿಗಳನ್ನು ನಿಂದಿಸಿ ಜಾಲತಾಣಗಳಲ್ಲಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪ್ರಜಾಸತ್ತಾತ್ಮಕ ಹೋರಾಟ ನಡೆಸುವುದು ಬಿಟ್ಟು ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಳಿದಿರುವುದನ್ನು ಸಮುದಾಯ ಎಂದೂ ಕ್ಷಮಿಸುವುದಿಲ್ಲ. ಪ್ರವಾದಿಯ ನಿಂದನೆ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಸೈದ್ಧಾಂತಿಕವಾಗಿ ಅವರ ಸಿದ್ಧಾಂತಗಳನ್ನು ಎದುರಿಸಲಾಗದವರು ಮಾತ್ರ ನಿಂದನೆಗಿಳಿಯುತ್ತಾರೆ. ಮುಸ್ಲಿಮರನ್ನು ಪ್ರಚೋದಿಸಿ ಅವರನ್ನು ಸಂಘರ್ಷಕ್ಕೆ ಹಚ್ಚುವ ಷಡ್ಯಂತ್ರ ನಡೆಯುತ್ತಲೇ ಇದೆ. ಇದನ್ನರಿತು ಸಮುದಾಯ ಸಂಯಮದಿಂದ ವರ್ತಿಸಬೇಕು. ಇದೀಗ ಮಾಧ್ಯಮಗಳು ಕೂಡ ಹಸಿದ ನಾಯಿಗೆ ಎಲುಬು ಸಿಕ್ಕಂತೆ ಸಂಭ್ರಮಿಸಿ ಪ್ರಕರಣವನ್ನು ದೀರ್ಘಕಾಲ ಜೀವಂತವಿಡಲು ಪ್ರಯತ್ನಿಸುತ್ತಿರುವುದು ವಿಷಾದನೀಯ” ಎಂದು ಸಿದ್ದೀಕ್ ಹೇಳಿದ್ದಾರೆ.

ಪ್ರವಾದಿ ನಿಂದನೆಯ ಫೇಸ್‌ಬುಕ್ ಪೋಸ್ಟ್ ಹಾಗೂ ಹಿಂಸಾಚಾರಗಳೆರಡೂ ಖಂಡನಾರ್ಹ ಎಂದಿರುವ ಸುನ್ನಿ ಸ್ಟೂಡೆಂಟ್ ಫಡರೇಷನ್ (ಎಸ್ಸೆಸ್ಸೆಫ್) ಕರ್ನಾಟಕ ರಾಜ್ಯ ಸಮಿತಿ, “ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಪೋಸ್ಟ್ ಹಂಚುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾರೇ ಆದರೂ ಶಿಕ್ಷಾರ್ಹರು. ಅದೇ ರೀತಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರಕ್ಕಿಳಿಯುವುದು ಕೂಡ ವಿಶ್ವ ಪ್ರವಾದಿಯವರ ಬೋಧನೆಗೆ ಮಸಿಬಳಿಯುವ ಪ್ರಯತ್ನವಾಗಿದೆ”‌ ಎಂದು ಅಭಿಪಪ್ರಾಯ ಪಟ್ಟಿದೆ.

“ಯಾವುದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು‌ ಎಂದು ಎಸ್ಸೆಸ್ಸೆಫ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಹಿಂದೆಯೂ ಕೆಲವು ದುಷ್ಕರ್ಮಿಗಳು ಅನಗತ್ಯವಾಗಿ ಪ್ರವಾದಿಯವರನ್ನು ಅವಮಾನಕರವಾಗಿ ಚರ್ಚೆಗೆ ಎಳೆದು ತರುವ ಪ್ರಯತ್ನವನ್ನು ಮಾಡಿದ್ದರು. ಅಂತಹ ದುಷ್ಕರ್ಮಿಗಳ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ಖೇದಕರ‌. ಇನ್ನು ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ರಾಜ್ಯ ಗೃಹ ಇಲಾಖೆಯು ಎಚ್ಚರ ವಹಿಸಬೇಕು” ಎಂದು ಎಸ್ಸೆಸ್ಸೆಫ್ ಪ್ರಕಟನೆಯಲ್ಲಿ ಆಗ್ರಹಿಸಿದೆ.

ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್(ಎಸ್‌ಐಒ), ” ಕೋಟ್ಯಾಂತರ ಮುಸ್ಲಿಮರು ಗೌರವಯುತವಾಗಿ ಕಾಣುವ ಪ್ರವಾದಿಯ ನಿಂದನೆ ಖಂಡನಾರ್ಹ, ಆದರೆ ಇಂತಹ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಹುಡುಕಬೇಕೆ ವಿನಃ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೆಲದ ಕಾನೂನಿಗೆ ಗೌರವ ನೀಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ನಿನ್ನೆ ಗಲಭೆಯಲ್ಲಿ ಭಾಗಿಯಾದವನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಓದಿ: ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...