Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆಯನ್ನು ಖಂಡಿಸಿರುವ ಮುಸ್ಲಿಂ ಸಂಘಟನೆಗಳು, ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರ ಶೈಲಿಯಲ್ಲ ಎಂದು ಹೇಳಿದ್ದು ಸಮಸ್ಯೆಯನ್ನು ಕಾನೂನು ಮೂಲಕ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಎನ್ನಲಾದ ನವೀನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಘರ್ಷಣೆಯಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದು, 110 ಜನರನ್ನು ಬಂಧಿಸಲಾಗಿದೆ.

ಘಟನೆಯ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯಾದರ್ಶಿ ಮೌಲಾನಾ ಶಾಪಿ ಸಅದಿ, “ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಂಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ ಎಂದು ಆಗ್ರಹಿಸಿರುವ ಅವರು, ಕಾನೂನು ಕೈಗೆತ್ತಿಕೊಳ್ಳುವುದು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವುದನ್ನು ಖಂಡಿಸಿದ್ದಾರೆ. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು ಎಂದಿರುವ ಅವರು ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಜಮಾತೆ ಇಸ್ಲಾಮಿ ಹಿಂದ್ ನ ರಾಜ್ಯಾಧ್ಯಕ್ಷ ಡಾ.ಬೆಲಗಾಮಿ ಪ್ರವಾದಿಯನ್ನು ನಿಂದನೆ ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಸಿದೆ. ಶಾಂತಿ ಸ್ಥಾಪನೆಗೆ ನಾವು ಕಟಿಬದ್ದರಾಗಿದ್ದೇವೆ, ಪೊಲೀಸರು ನಿಷ್ಪಕ್ಷವಾಗಿ ಕೆಲಸ ಮಾಡಬೇಕು ಅಲ್ಲದೆ ಮಾಧ್ಯಮಗಳು ಕೂಡಾ ಇದನ್ನು ಪ್ರಚೋದನೆ ಮಾಡಬಾರದು, ಸಂವೇಶನಶೀಲವಾಗಿ ವರದಿ ಮಾಡಬೇಕು. ಮುಸ್ಲಿಂ ಯುವಕರು ಶಾಂತಿಯಿಂದ ವರ್ತಿಸಬೇಕು ಯಾರು ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

DJ Halli incident. Kannada statement of Dr. Belgami Muhammad Saad, State President, Jamaat e Islami Hind Karnataka.

Posted by Jamaat-e-Islami Hind Karnataka on Wednesday, August 12, 2020

ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಇದರ ಅಬ್ದುಲ್ ಖಾದಿರ್‍, “ಪ್ರವಾದಿ ಮೊಹಮ್ಮದ್‌ರ ಅವಹೇಳನವನ್ನು ಸಾಮಾನ್ಯವಾಗಿ ಯಾವ ಮುಸ್ಲಿಂ ಕೂಡಾ ಸಹಿಸಿಕೊಳ್ಳುವುದಿಲ್ಲ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಕೂಡಾ ತುಸು ತಡಮಾಡಿದ್ದಾರೆ, ಇದು ಸೇರಿರುವ ಜನರಿಗೆ ಇನ್ನಷ್ಟು ಕೋಪ ಉಂಟು ಮಾಡಿದೆ ಎನ್ನಲಾಗುತ್ತಿದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪೇ ಆಗಿದೆ. ಏನೇ ಸಮಸ್ಯೆಗಳಿದ್ದರು ಕಾನೂನಿನ ಮೂಲಕವೆ ಬಗೆಹರಿಸಬೇಕು. ಈಗ ಪ್ರವಾದಿಯನ್ನು ಅವಹೇಳನ ಮಾಡಿದ ವ್ಯಕ್ತಿಯನ್ನು ಶಿಕ್ಷಿಸುವುದರ ಜೊತೆಗೆ ಗಲಭೇಕೋರರನ್ನು ಕೂಡಾ ಪತ್ತೆ ಹಚ್ಚಿ ಶಿಕ್ಷಿಸಬೇಕಾಗಿದೆ, ಈ ಹೆಸರಲ್ಲಿ ಅಮಾಯಕರು ಬಲಿಯಾಗದಿರಲಿ” ಎಂದು ಹೇಳಿದ್ದಾರೆ.

ಅಲ್‌ಅನ್ಸಾರ್‍ ವಾರಪತ್ರಿಕೆಯ ಸಂಪಾದಕ ಕೆ. ಎಂ. ಸಿದ್ದೀಕ್ ಮೋಂಟುಗೋಳಿ ಮಾತನಾಡಿ, ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿಯುವುದೂ ಪ್ರವಾದಿ ನಿಂದನೆಯೆ ಆಗಿದೆ ಎಂದು ಹೇಳಿದ್ದಾರೆ.

ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿದವರು ಮಾಡಿದ್ದು ಕೂಡ ಪ್ರವಾದಿ ನಿಂದನೆಯೆ?

Posted by Km Siddeeq on Wednesday, August 12, 2020

“ಮುಸ್ಲಿಮರು ಅತ್ಯಂತ ಗೌರವಿಸುವ ಪ್ರವಾದಿಗಳನ್ನು ನಿಂದಿಸಿ ಜಾಲತಾಣಗಳಲ್ಲಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪ್ರಜಾಸತ್ತಾತ್ಮಕ ಹೋರಾಟ ನಡೆಸುವುದು ಬಿಟ್ಟು ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಳಿದಿರುವುದನ್ನು ಸಮುದಾಯ ಎಂದೂ ಕ್ಷಮಿಸುವುದಿಲ್ಲ. ಪ್ರವಾದಿಯ ನಿಂದನೆ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಸೈದ್ಧಾಂತಿಕವಾಗಿ ಅವರ ಸಿದ್ಧಾಂತಗಳನ್ನು ಎದುರಿಸಲಾಗದವರು ಮಾತ್ರ ನಿಂದನೆಗಿಳಿಯುತ್ತಾರೆ. ಮುಸ್ಲಿಮರನ್ನು ಪ್ರಚೋದಿಸಿ ಅವರನ್ನು ಸಂಘರ್ಷಕ್ಕೆ ಹಚ್ಚುವ ಷಡ್ಯಂತ್ರ ನಡೆಯುತ್ತಲೇ ಇದೆ. ಇದನ್ನರಿತು ಸಮುದಾಯ ಸಂಯಮದಿಂದ ವರ್ತಿಸಬೇಕು. ಇದೀಗ ಮಾಧ್ಯಮಗಳು ಕೂಡ ಹಸಿದ ನಾಯಿಗೆ ಎಲುಬು ಸಿಕ್ಕಂತೆ ಸಂಭ್ರಮಿಸಿ ಪ್ರಕರಣವನ್ನು ದೀರ್ಘಕಾಲ ಜೀವಂತವಿಡಲು ಪ್ರಯತ್ನಿಸುತ್ತಿರುವುದು ವಿಷಾದನೀಯ” ಎಂದು ಸಿದ್ದೀಕ್ ಹೇಳಿದ್ದಾರೆ.

ಪ್ರವಾದಿ ನಿಂದನೆಯ ಫೇಸ್‌ಬುಕ್ ಪೋಸ್ಟ್ ಹಾಗೂ ಹಿಂಸಾಚಾರಗಳೆರಡೂ ಖಂಡನಾರ್ಹ ಎಂದಿರುವ ಸುನ್ನಿ ಸ್ಟೂಡೆಂಟ್ ಫಡರೇಷನ್ (ಎಸ್ಸೆಸ್ಸೆಫ್) ಕರ್ನಾಟಕ ರಾಜ್ಯ ಸಮಿತಿ, “ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಪೋಸ್ಟ್ ಹಂಚುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾರೇ ಆದರೂ ಶಿಕ್ಷಾರ್ಹರು. ಅದೇ ರೀತಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರಕ್ಕಿಳಿಯುವುದು ಕೂಡ ವಿಶ್ವ ಪ್ರವಾದಿಯವರ ಬೋಧನೆಗೆ ಮಸಿಬಳಿಯುವ ಪ್ರಯತ್ನವಾಗಿದೆ”‌ ಎಂದು ಅಭಿಪಪ್ರಾಯ ಪಟ್ಟಿದೆ.

“ಯಾವುದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು‌ ಎಂದು ಎಸ್ಸೆಸ್ಸೆಫ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಹಿಂದೆಯೂ ಕೆಲವು ದುಷ್ಕರ್ಮಿಗಳು ಅನಗತ್ಯವಾಗಿ ಪ್ರವಾದಿಯವರನ್ನು ಅವಮಾನಕರವಾಗಿ ಚರ್ಚೆಗೆ ಎಳೆದು ತರುವ ಪ್ರಯತ್ನವನ್ನು ಮಾಡಿದ್ದರು. ಅಂತಹ ದುಷ್ಕರ್ಮಿಗಳ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ಖೇದಕರ‌. ಇನ್ನು ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ರಾಜ್ಯ ಗೃಹ ಇಲಾಖೆಯು ಎಚ್ಚರ ವಹಿಸಬೇಕು” ಎಂದು ಎಸ್ಸೆಸ್ಸೆಫ್ ಪ್ರಕಟನೆಯಲ್ಲಿ ಆಗ್ರಹಿಸಿದೆ.

ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್(ಎಸ್‌ಐಒ), ” ಕೋಟ್ಯಾಂತರ ಮುಸ್ಲಿಮರು ಗೌರವಯುತವಾಗಿ ಕಾಣುವ ಪ್ರವಾದಿಯ ನಿಂದನೆ ಖಂಡನಾರ್ಹ, ಆದರೆ ಇಂತಹ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಹುಡುಕಬೇಕೆ ವಿನಃ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೆಲದ ಕಾನೂನಿಗೆ ಗೌರವ ನೀಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ನಿನ್ನೆ ಗಲಭೆಯಲ್ಲಿ ಭಾಗಿಯಾದವನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಓದಿ: ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...