Homeಮುಖಪುಟಬೆಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್‌ : ಸ್ವಾಗತಕೋರಿದ ಎಚ್‌ಡಿಕೆ, ಕರವೇ ನಾರಾಯಣಗೌಡರು...

ಬೆಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್‌ : ಸ್ವಾಗತಕೋರಿದ ಎಚ್‌ಡಿಕೆ, ಕರವೇ ನಾರಾಯಣಗೌಡರು…

- Advertisement -
- Advertisement -

ಹಲವು ದಿನಗಳ ಜೈಲುವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಇಂದು ಬೆಂಗಳೂರಿಗೆ ಬಂದು ತಲುಪಿದರು.

ಆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಧ್ಯಕ್ಷ ನಾರಾಯಣಗೌಡರು ಹಾಜರಿದ್ದು ಸ್ವಾಗತ ಕೋರಿದರು.

ಇಡಿ ಪ್ರಕರಣದಲ್ಲಿ ಬಂಧಿತನಾಗಿದ್ದ ಡಿ.ಕೆ ಶಿವಕುಮಾರ್ ಮೂರು ದಿನಗಳ ಹಿಂದೆಯೇ ಬಿಡುಗಡೆಯಾಗಿದ್ದರೂ ದೆಹಲಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದರು. ದೇವಾಲಯಕ್ಕೂ ತೆರಳಿ ಆರ್ಶಿವಾದ ಪಡೆದಿದ್ದರು.

ಇಂದು ಬೆಂಗಳೂರಿಗೆ ಅವರು ಬರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸಾವಿರಾರು ಅಭಿಮಾನಿಗಳು ಏರ್‌ಪೋರ್ಟ್‌‌ನತ್ತ ತೆರಳಿದ್ದರು. ಸುಮಾರು 600 ಕೆಜಿಯ ಸೇಬಿನ ಹಾರವನ್ನು ಹಾಕಿ ಸ್ವಾಗತಿಸಲು ಸಿದ್ದರಾಗಿದ್ದರೆ ಎಂದು ತಿಳಿದುಬಂದಿದೆ.

ಡಿ.ಕೆ ಶಿವಕುಮಾರ್‌ ಸ್ವಾಗತಕ್ಕೆ ಹಲವು ಕಲಾತಂಡಗಳು ಸಹ ಸಿದ್ದರಿದ್ದು ವಿಮಾನನಿಲ್ದಾನ ರಸ್ತೆಯಲ್ಲಿ ಉತ್ಸಾಹ ಗರಿಗೆದರಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...