Homeಮುಖಪುಟಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

- Advertisement -
- Advertisement -

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರವಾದ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ಪ್ರಬಲ (ಒಕ್ಕಲಿಗ) ಜಾತಿ ಯುವಕರ ಗುಂಪೊಂದು, ಭಾನುವಾರ ತಡರಾತ್ರಿ ಪರಿಶಿಷ್ಟ ಸಮುದಾಯದ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಸಂತ್ರಸ್ತನ ಕುಟುಂಬದ ಏಳು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದ ಗ್ರಾಮ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಎಸ್. ರವಿಯವರ ಸ್ವಗ್ರಾಮವಾಗಿದೆ.

ಗಾಯಾಳು ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕನಕಪುರದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಅನೀಶ್ ಎಡಗೈ ತುಂಡಾಗಿದ್ದು, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬದ ಇತರೆ ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದು, ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳು ಅನೀಶ್ ಮಾವ ಪಿ.ಎಲ್‌.ಡಿ. ಬ್ಯಾಂಕ್ ಉದ್ಯೋಗಿಯಾಗಿರುವ ಲಕ್ಷ್ಮಣ, ಸಂಬಂಧಿ ಗೋವಿಂದರಾಜು ಅವರ ಮೇಲೆ ಕೂಡ ಗುಂಪು ಹಲ್ಲೆ ಮಾಡಿದೆ. ಜೊತೆಗೆ, ಮನೆಯಲ್ಲಿದ್ದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಈ ಗುಂಪು ಹಲ್ಲೆ ನಡೆಸಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಎರಡು ಆಟೋಗಳನ್ನು ಜಖಂಗೊಳಿಸಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಸೇರಿದ ಹರ್ಷ, ಕರುಣೇಶ್, ರಾಹುಲ್, ಶಿವ, ಶಶಾಂಕ, ದರ್ಶನ್ ಸೇರಿದಂತೆ ಇತರರ ವಿರುದ್ಧ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಂತರ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಗ್ರಾಮಕ್ಕೆ ನೀಡಿ ಮಾಹಿತಿ ಪಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕೈ ಕತ್ತರಿಸಿದ ಗುಂಪು:

ಆರೋಪಿ ಹರ್ಷ ಮತ್ತು ಸಂಗಡಿಗರು ಅಪರಾಧ ಹಿನ್ನೆಲೆ ಉಳ್ಳವರಾಗಿದ್ದು, 7 ಗಂಟೆಗೆ ನಡೆದ ಸಣ್ಣ ಗಲಾಟೆಗೆ ಪ್ರತೀಕಾರವಾಗಿ, ರಾತ್ರಿ ಒಂಬತ್ತು ಗಂಟೆಗೆ ಮಾರಕಾಸ್ತ್ರಗಳೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ.

ಭಾನುವಾರ ಸಂಜೆ ದಲಿತ ಸಮುದಾಯದ ಯುವಕರಿಬ್ಬರು ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದರು. ಅದೇ ರಸ್ತೆಯಲ್ಲಿ ಹೊರಟಿದ್ದ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ರಸ್ತೆಯಲ್ಲಿ ಏಕೆ ನಿಂತಿದ್ದೀರಿ ಎಂದು ಜಗಳ ತೆಗೆದಿದ್ದಾರೆ. ನಂತರ, ರಾತ್ರಿ ದಲಿತರ ಎನ್.ಕೆ. ಕಾಲೊನಿಗೆ ನುಗ್ಗಿದ ಒಕ್ಕಲಿಗ ಸಮುದಾಯದ ಯುವಕರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಪ್ರಮುಖ ಆರೋಪಿ ಹರ್ಷ ರೌಡಿಶೀಟರ್ ಆಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಿಂದ ಆತನನ್ನು ತುಮಕೂರಿಗೆ ಗಡಿಪಾರು ಮಾಡಲಾಗಿತ್ತು. ಈಗಲೂ ಆತನ ಮೇಲೆ ಗಡೀಡಿಪಾರು ಆದೇಶ ಚಾಲ್ತಿಯಲ್ಲಿದೆ ಎನ್ನಲಾಗಿದ್ದು, ಆಗಾಗ ಊರಿಗೆ ಬಂದು ಹೋಗುತ್ತಿದ್ದ. ಆತನೇ ತನ್ನ ಸಹಚರರೊಂದಿಗೆ ಈ ಕೃತ್ಯ ಎಸಗಿದ್ದಾನೆ ಎಂದು ಹಲ್ಲೆಗೊಳಗಾದ ಲಕ್ಷ್ಮಣ್‌ ದೂರಿನಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟರೆ ಇವರ ಟಾರ್ಗೆಟ್: ಬಿಎಸ್‌ಪಿ ಮುಖಂಡ

ಪ್ರಕರಣ ಸಂಬಂಧ ಸಂತ್ರಸ್ತರ ಬೆಂಬಲಕ್ಕೆ ನಿಂತಿರುವ ಜಿಲ್ಲಾ ಬಿಎಸ್‌ಪಿ ಮುಖಂಡರಾದ ಮಲ್ಲಿಕಾರ್ಜುನ್ ಮಾತನಾಡಿ, “ಘಟನೆ ಹಿಂದೆ ಅತಿ ದೊಡ್ಡ ಜಾತಿ ವೈಷಮ್ಯ ಇದೆ; ಈಗ ಗಾಯಗೊಂಡಿರುವ ಕುಟುಂಬದ ಮೇಲೆ ಮಾತ್ರ ಹಲ್ಲೆ ನಡೆದಿಲ್ಲ. ಅಪರಾಧ ಎಸಗಿರುವ ಹರ್ಷ ಅಲಿಯಾಸ್ ಕೈಮ, ಕನ್ನು, ಪಿಂಗಿ ಮತ್ತು ಇತರೆ ಆರೋಪಿಗಳು ಪರಿಶಿಷ್ಟರನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ರಾಜಕೀಯವಾಗಿ ಮುಂಚೂಣಿಯಲ್ಲಿರುವ ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ” ಎಂದರು.

“ಹರ್ಷನನ್ನು ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ; ಅಲ್ಲಿ ಆತ ಜಿಲ್ಲಾ ಎನ್‌ಡಿಪಿಎಸ್‌ ಮುಂದೆ ಪ್ರತಿದಿನ ಹಾಜರಾಗಿ, ಬೆಳಗ್ಗೆ-ಸಂಜೆ ಸಹಿ ಮಾಡಬೇಕು. ಅದನ್ನೆಲ್ಲಾ ಆತ ಧಿಕ್ಕರಿಸಿ ಜಿಲ್ಲೆಗೆ ಬಂದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದಾನೆ. ಆತನ ಮೇಲೆ ಈಗಲೂ ಗಡಿಪಾರು ಆದೇಶ ಚಾಲ್ತಿಯಲ್ಲಿದ್ದು, ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಗಡಿಪಾರಾಗಿರುವ ಆರೋಪಿಯೊಬ್ಬ ಮೂರು ಜಿಲ್ಲೆಗಳನ್ನು ದಾಟಿಕೊಂಡು ಬಂದು ಅಪರಾಧ ಎಸಗುತ್ತಾನೆ ಎಂದರೆ ಇದರ ಅರ್ಥ ಏನು” ಎಂದು ಪ್ರಶ್ನಿಸಿದರು.

“ಹರ್ಷ ಮತ್ತು ಸಂಗಡಿಗರು ಇದೇ ಕಾಲೋನಿಯ ಹಲವು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇವರು ಇಡೀ ಜಿಲ್ಲೆಯ ಪೊಲೀಸ್ ಇಲಾಖೆಗೆ ತೊಡಕಾಗಿದ್ದಾರೆ; ಅವರಿಗೆ ಯಾವುದೇ ಭಯವಿಲ್ಲ. ಇವೆಲ್ಲದರ ಮಧ್ಯೆ ಜೀವ ಹೋಗುತ್ತಿರುವುದು ಪರಿಶಿಷ್ಟರದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ಇದೆ” ಎಂದು ಹೇಳಿದರು.

ಇದನ್ನೂ ಓದಿ; ನೀಟ್ ಪರೀಕ್ಷೆ ವಿವಾದ: ಡಿಲಿಮಿಟೇಶನ್ ವಿರುದ್ಧದ ನಿರ್ಣಯಕ್ಕೆ ಒಪ್ಪಿಗೆ ಕೊಟ್ಟ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...