Homeಮುಖಪುಟಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

- Advertisement -
- Advertisement -

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರವಾದ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ಪ್ರಬಲ (ಒಕ್ಕಲಿಗ) ಜಾತಿ ಯುವಕರ ಗುಂಪೊಂದು, ಭಾನುವಾರ ತಡರಾತ್ರಿ ಪರಿಶಿಷ್ಟ ಸಮುದಾಯದ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಸಂತ್ರಸ್ತನ ಕುಟುಂಬದ ಏಳು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದ ಗ್ರಾಮ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಎಸ್. ರವಿಯವರ ಸ್ವಗ್ರಾಮವಾಗಿದೆ.

ಗಾಯಾಳು ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕನಕಪುರದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಅನೀಶ್ ಎಡಗೈ ತುಂಡಾಗಿದ್ದು, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬದ ಇತರೆ ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದು, ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳು ಅನೀಶ್ ಮಾವ ಪಿ.ಎಲ್‌.ಡಿ. ಬ್ಯಾಂಕ್ ಉದ್ಯೋಗಿಯಾಗಿರುವ ಲಕ್ಷ್ಮಣ, ಸಂಬಂಧಿ ಗೋವಿಂದರಾಜು ಅವರ ಮೇಲೆ ಕೂಡ ಗುಂಪು ಹಲ್ಲೆ ಮಾಡಿದೆ. ಜೊತೆಗೆ, ಮನೆಯಲ್ಲಿದ್ದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಈ ಗುಂಪು ಹಲ್ಲೆ ನಡೆಸಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಎರಡು ಆಟೋಗಳನ್ನು ಜಖಂಗೊಳಿಸಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಸೇರಿದ ಹರ್ಷ, ಕರುಣೇಶ್, ರಾಹುಲ್, ಶಿವ, ಶಶಾಂಕ, ದರ್ಶನ್ ಸೇರಿದಂತೆ ಇತರರ ವಿರುದ್ಧ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಂತರ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಗ್ರಾಮಕ್ಕೆ ನೀಡಿ ಮಾಹಿತಿ ಪಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕೈ ಕತ್ತರಿಸಿದ ಗುಂಪು:

ಆರೋಪಿ ಹರ್ಷ ಮತ್ತು ಸಂಗಡಿಗರು ಅಪರಾಧ ಹಿನ್ನೆಲೆ ಉಳ್ಳವರಾಗಿದ್ದು, 7 ಗಂಟೆಗೆ ನಡೆದ ಸಣ್ಣ ಗಲಾಟೆಗೆ ಪ್ರತೀಕಾರವಾಗಿ, ರಾತ್ರಿ ಒಂಬತ್ತು ಗಂಟೆಗೆ ಮಾರಕಾಸ್ತ್ರಗಳೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ.

ಭಾನುವಾರ ಸಂಜೆ ದಲಿತ ಸಮುದಾಯದ ಯುವಕರಿಬ್ಬರು ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದರು. ಅದೇ ರಸ್ತೆಯಲ್ಲಿ ಹೊರಟಿದ್ದ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ರಸ್ತೆಯಲ್ಲಿ ಏಕೆ ನಿಂತಿದ್ದೀರಿ ಎಂದು ಜಗಳ ತೆಗೆದಿದ್ದಾರೆ. ನಂತರ, ರಾತ್ರಿ ದಲಿತರ ಎನ್.ಕೆ. ಕಾಲೊನಿಗೆ ನುಗ್ಗಿದ ಒಕ್ಕಲಿಗ ಸಮುದಾಯದ ಯುವಕರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಪ್ರಮುಖ ಆರೋಪಿ ಹರ್ಷ ರೌಡಿಶೀಟರ್ ಆಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಿಂದ ಆತನನ್ನು ತುಮಕೂರಿಗೆ ಗಡಿಪಾರು ಮಾಡಲಾಗಿತ್ತು. ಈಗಲೂ ಆತನ ಮೇಲೆ ಗಡೀಡಿಪಾರು ಆದೇಶ ಚಾಲ್ತಿಯಲ್ಲಿದೆ ಎನ್ನಲಾಗಿದ್ದು, ಆಗಾಗ ಊರಿಗೆ ಬಂದು ಹೋಗುತ್ತಿದ್ದ. ಆತನೇ ತನ್ನ ಸಹಚರರೊಂದಿಗೆ ಈ ಕೃತ್ಯ ಎಸಗಿದ್ದಾನೆ ಎಂದು ಹಲ್ಲೆಗೊಳಗಾದ ಲಕ್ಷ್ಮಣ್‌ ದೂರಿನಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟರೆ ಇವರ ಟಾರ್ಗೆಟ್: ಬಿಎಸ್‌ಪಿ ಮುಖಂಡ

ಪ್ರಕರಣ ಸಂಬಂಧ ಸಂತ್ರಸ್ತರ ಬೆಂಬಲಕ್ಕೆ ನಿಂತಿರುವ ಜಿಲ್ಲಾ ಬಿಎಸ್‌ಪಿ ಮುಖಂಡರಾದ ಮಲ್ಲಿಕಾರ್ಜುನ್ ಮಾತನಾಡಿ, “ಘಟನೆ ಹಿಂದೆ ಅತಿ ದೊಡ್ಡ ಜಾತಿ ವೈಷಮ್ಯ ಇದೆ; ಈಗ ಗಾಯಗೊಂಡಿರುವ ಕುಟುಂಬದ ಮೇಲೆ ಮಾತ್ರ ಹಲ್ಲೆ ನಡೆದಿಲ್ಲ. ಅಪರಾಧ ಎಸಗಿರುವ ಹರ್ಷ ಅಲಿಯಾಸ್ ಕೈಮ, ಕನ್ನು, ಪಿಂಗಿ ಮತ್ತು ಇತರೆ ಆರೋಪಿಗಳು ಪರಿಶಿಷ್ಟರನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ರಾಜಕೀಯವಾಗಿ ಮುಂಚೂಣಿಯಲ್ಲಿರುವ ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ” ಎಂದರು.

“ಹರ್ಷನನ್ನು ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ; ಅಲ್ಲಿ ಆತ ಜಿಲ್ಲಾ ಎನ್‌ಡಿಪಿಎಸ್‌ ಮುಂದೆ ಪ್ರತಿದಿನ ಹಾಜರಾಗಿ, ಬೆಳಗ್ಗೆ-ಸಂಜೆ ಸಹಿ ಮಾಡಬೇಕು. ಅದನ್ನೆಲ್ಲಾ ಆತ ಧಿಕ್ಕರಿಸಿ ಜಿಲ್ಲೆಗೆ ಬಂದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದಾನೆ. ಆತನ ಮೇಲೆ ಈಗಲೂ ಗಡಿಪಾರು ಆದೇಶ ಚಾಲ್ತಿಯಲ್ಲಿದ್ದು, ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಗಡಿಪಾರಾಗಿರುವ ಆರೋಪಿಯೊಬ್ಬ ಮೂರು ಜಿಲ್ಲೆಗಳನ್ನು ದಾಟಿಕೊಂಡು ಬಂದು ಅಪರಾಧ ಎಸಗುತ್ತಾನೆ ಎಂದರೆ ಇದರ ಅರ್ಥ ಏನು” ಎಂದು ಪ್ರಶ್ನಿಸಿದರು.

“ಹರ್ಷ ಮತ್ತು ಸಂಗಡಿಗರು ಇದೇ ಕಾಲೋನಿಯ ಹಲವು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇವರು ಇಡೀ ಜಿಲ್ಲೆಯ ಪೊಲೀಸ್ ಇಲಾಖೆಗೆ ತೊಡಕಾಗಿದ್ದಾರೆ; ಅವರಿಗೆ ಯಾವುದೇ ಭಯವಿಲ್ಲ. ಇವೆಲ್ಲದರ ಮಧ್ಯೆ ಜೀವ ಹೋಗುತ್ತಿರುವುದು ಪರಿಶಿಷ್ಟರದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ಇದೆ” ಎಂದು ಹೇಳಿದರು.

ಇದನ್ನೂ ಓದಿ; ನೀಟ್ ಪರೀಕ್ಷೆ ವಿವಾದ: ಡಿಲಿಮಿಟೇಶನ್ ವಿರುದ್ಧದ ನಿರ್ಣಯಕ್ಕೆ ಒಪ್ಪಿಗೆ ಕೊಟ್ಟ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...