Homeಕರ್ನಾಟಕಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ.. -...

ಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ.. – ಡಿ.ಆರ್.ಪಾಟೀಲ

- Advertisement -
- Advertisement -

ಸಂದರ್ಶನ:| ಪಿ.ಕೆ ಮಲ್ಲನಗೌಡರ್ |

ಧಗಧಗ ಝಳದ ನಡುವೆ ಒಂದು ‘ತಣ್ಣನೆ’ ಸಂದರ್ಶನ
ಈ ಸಲ ಹಾವೇರಿ-ಗದಗು ಸೇರಿದಂತೆ ಈ ಕಡೆಯಲ್ಲಿ ಎಂದಿಗಿಂತ ಜಾಸ್ತಿ ಬಿಸಿಲು. ಚುನಾವಣೆಯ ಕಾಳಗದಲ್ಲೂ ಉರಿ ಉರಿ. ರಾತ್ರಿ ಹತ್ತೂವರೆ ಹೊತ್ತಿಗೆ ಬಯಲಿನಲ್ಲಿ ಈ ಸಂದರ್ಶನ ನಡೆದಾಗ ಝಳ ಝಳ. ಪತ್ರಿಕೆಯ ಪ್ರಶ್ನೆಗಳಿಗೆ ಅಭ್ಯರ್ಥಿ ಕೊಡುತ್ತಿದ್ದ ತಣ್ಣನೆಯ ಉತ್ತರಗಳಲ್ಲಿ ವ್ಯವಸ್ಥೆಯ ವಿರುದ್ಧದ ‘ಕಾವು’ ಕಾಣತೊಡಗಿತ್ತು… ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲರೊಂದಿಗಿನ ಸಂದರ್ಶನ ಇಲ್ಲಿದೆ…

ಪತ್ರಿಕೆ: ಈ ಚುನಾವಣೆ ಮಹತ್ತದ್ದು, ಭಿನ್ನವಾದುದು ಎಂದು ವಿವಿಧ ಪಾರ್ಟಿಗಳು ತಮ್ಮ ಧಾಟಿಯಲ್ಲಿ ಹೇಳ್ತಾ ಇವೆ. ವೈಯಕ್ತಿಕವಾಗಿ ಈ ಚುನಾವಣೆ ಬಗ್ಗೆ ನಿಮ್ಮ ಅಭಿಪ್ರಾಯ?
ಡಿ.ಆರ್.ಪಾಟೀಲ್: ಇಲ್ಲಿ ವೈಯಕ್ತಿಕ ಅಭಿಪ್ರಾಯವು ಸಾರ್ವಜನಿಕ ಅಭಿಪ್ರಾಯವೂ ಅಗಬಹುದಲ್ಲ? ನಮ್ಮ ಪಕ್ಷದ ಮಟ್ಟಿಗೆ ಇದು ಚಾಲೆಂಜಿಂಗ್ ಚುನಾವಣೆ. ನನಗಂತೂ ಈ ಚುನಾವಣೆ ಪ್ರಜಾಪ್ರಭುತ್ವದ ಮೌಲ್ಯಗಳ ಜೀವನ್ಮರಣದ ಪ್ರಶ್ನೆ ಅನಿಸ್ತಾ ಇದೆ. ಇನ್ನೊಮ್ಮೆ ಅಧಿಕಾರ ಸಿಕ್ಕರೆ ಅವರೆಲ್ಲ (ಬಿಜೆಪಿ) ಸಂವಿಧಾನವನ್ನೇ ಬದಲಿಸಬಹುದು. ಇದು ಆತಂಕದ ವಿಷಯ. ಆ ಕಾರಣಕ್ಕಾಗಿ ಬಿಜೆಪಿಗೆ ಅಧಿಕಾರ ಸಿಗಲೇಬಾರದು.

ಪತ್ರಿಕೆ: ಈಗ ಮೋದಿ ಮತ್ತೊಮ್ಮೆ ಎನ್ನುವ ಸದ್ದು ಜೋರಾಗಿದೆಯಲ್ಲ?
ಡಿ.ಆರ್.ಪಾಟೀಲ್: ಜೋರಾಗಿ ಇರುವುದು ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಅಷ್ಟೇ. ಕಾಂಗ್ರೆಸ್ ತಪ್ಪು ಮಾಡಿದಾಗೆಲ್ಲ ಜನ ಶಿಕ್ಷೆ ಕೊಟ್ಟಿದ್ದಾರೆ. ಆದರೆ ಆ ಕಾರಣಕ್ಕೆ ಬಂದ ಇತರ ಸರ್ಕಾರಗಳನ್ನು ಎಂದೂ ಮರು ಆಯ್ಕೆ ಮಾಡಿಯೇ ಇಲ್ಲ. ವಾಜಪೇಯಿ 13 ತಿಂಗಳ ನಂತರ ಮತ್ತೆ ಸರ್ಕಾರ ಮಾಡಿದ್ದನ್ನು ಬಿಟ್ಟರೆ, ಇಲ್ಲಿ ಯಾವ ಕಾಂಗ್ರೆಸ್ಸೇತರ ಸರ್ಕಾರ ಮರು ಆಯ್ಕೆ ಆಗಿಲ್ಲ. ಈ ಸಲವೂ ಅದೇ ಘಟಿಸಲಿದೆ.


ಪತ್ರಿಕೆ: ಸದ್ಯದ ಸರ್ಕಾರದ ಕುರಿತು ಹೇಳಿ.
ಡಿ.ಆರ್. ಪಾಟೀಲ್: ಮೋದಿ ಒಬ್ಬ ಜನದ್ರೋಹಿ ನಾಯಕ. ಇಂತಹ ಮನುಷ್ಯನಿಂದ ಒಳ್ಳೆ ಕೆಲಸ ಅಪೇಕ್ಷಿಸುವುದೇ ಮೂರ್ಖತನ. 2014ರಲ್ಲಿ ಈ ಮನುಷ್ಯ ಸಿಕ್ಕಾಪಟ್ಟೆ ಭರವಸೆ ಕೊಟ್ರು. ಒಂದಾದರೂ ಈಡೇರಿತಾ? ಕಪ್ಪುಹಣ ತರ್ತೀನಿ ಅಂದವ್ರು ಕಪ್ಪುಹಣ ಹೊಂದಿದವರ ಪೋಷಣೆ ಮಾಡಿದರು. 15 ಲಕ್ಷದ ಬಗ್ಗೆ ಮಾತಾಡೊಕ್ಕೆ ಅಸಹ್ಯ ಆಗುತ್ತೆ. ಮೋದಿ ಗೆಲುವಿಗೆ ಕಾರಣವಾಗಿದ್ದು ದೊಡ್ಡ ಯುವ ಸಮೂಹ. ಅವರಿಗೆ ಉದ್ಯೋಗ ಕೊಡುವುದಿರಲಿ, ನೋಟು ರದ್ಧತಿಯಂತಹ ಮೂರ್ಖ ಯೋಜನೆಯಿಂದ ಇದ್ದ ಉದ್ಯೋಗಗಳನ್ನು ನಾಶ ಮಾಡಿಬಿಟ್ಟರು. ನಮ್ಮ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಮೂರಾಬಟ್ಟೆ ಮಾಡಿದ್ದಾರೆ. ದೇಶದ ಗ್ರಾಮೀಣ ಭಾಗ ಅದರಲ್ಲೂ ಕೃಷಿ ಆಧಾರಿತ ವ್ಯವಸ್ಥೆ ಇವತ್ತು ತೀವ್ರ ಸಂಕಷ್ಟದಲ್ಲಿದೆ. ಅಂಬಾನಿ, ಅದಾನಿಗಳನ್ನು ಪಕ್ಕಕ್ಕೆ ಇಟ್ಟುಕೊಂಡು ಜಗತ್ತು ಸುತ್ತಿದರೆ ಇನ್ನೇನಾಗುತ್ತೇ?

ಪತ್ರಿಕೆ: ‘ನ್ಯಾಯ್’ ಯೋಜನೆ ಲೆಫ್ಟ್‍ನ ಪ್ರಭಾವದಿಂದ ಬಂದಿದ್ದು ಅನಿಸುತ್ತಿದೆ. 90ರ ದಶಕದ ಆರಂಭದಲ್ಲಿ ಜಾಗತೀಕರಣವನ್ನು ಇಂಟ್ರುಡ್ಯೂಸ್ ಮಾಡಿದ ಕಾಂಗ್ರೆಸ್‍ಗೆ ಈಗ ಎಚ್ಚರವಾಯಿತಾ?
ಡಿ.ಆರ್.ಪಾಟೀಲ್: ಒಂದು ಮಾತು ಹೇಳ್ತೇನೆ. ಇದು ಕಾಂಗ್ರೆಸ್‍ನ ನಿಲುವೂ ಹೌದು, ಅದಕ್ಕಿಂತ ಮುಖ್ಯವಾಗಿ ನನ್ನ ನಿಲುವಂತೂ ಹೌದೇ ಹೌದು. ನೀವು ಅದು ಲೆಫ್ಟ್ ಅಂತ ಪ್ರಸ್ತಾಪ ಮಾಡಿದರಲ್ಲ, ಆ ಎಡ ಚಿಂತನೆಗಳಲ್ಲಿ ಸದಾ ಸಮಷ್ಠಿ ಕಲ್ಯಾಣದ ಅಂಶಗಳು ಇವೆ. ಸಮಾಜವಾದಿ ಸಿದ್ದಾಂತಗಳೂ, ಗಾಂಧಿಯ ಸ್ವರಾಜ್ಯ ಕನಸೂ ನಮ್ಮ ಪಕ್ಷದೊಳಗೆ ಅಂತರ್ಗತವಾಗಿದೆ. ನೆಹರೂಗೆ ಸಮಾಜವಾದದ ಒಲವಿತ್ತು. ಇಂದಿರಾ ಗಾಂಧಿಯವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದು, ಉಳುವವನೇ ಒಡೆಯ ಕಾಯ್ದೆ ಜಾರಿಗೆ ತಂದಿದ್ದು-ಇವೆಲ್ಲ ಲೆಫ್ಟ್ ಚಿಂತನೆ ಅನ್ನುವುದಾದರೆ ಅನ್ನಲಿ. ಎಲ್ಲ ಚಿಂತನೆಗಳಲ್ಲಿರುವ ಸಮಾಜಮುಖಿ ಆಶಯಗಳನ್ನು ಕಾಂಗ್ರೆಸ್ ಗೌರವಿಸುತ್ತದೆ.

ಹಾಂ, ನೀವು ಜಾಗತೀಕರಣದ ಬಗ್ಗೆಯೂ ಕೇಳಿದಿರಿ. ಅಲ್ಲಿ ಖಾಸಗೀಕರಣವೂ ಇದೆ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಹೇಳುವೆ. ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳನ್ನು ಹುಟ್ಟು ಹಾಕಿದ್ದು, ಅವಕ್ಕೆ ಬಲ ತುಂಬಿದ್ದು ನಮ್ಮ ಪಕ್ಷವೇ. 90ರ ಆರಂಭದಲ್ಲಿ ಜಾಗತಿಕ ಅರ್ಥವ್ಯವಸ್ಥೆಯ ಜೊತೆ ಹೆಜ್ಜೆ ಹಾಕುವ ಆಶಯದಲ್ಲಿ ಜಾಗತೀಕರಣವನ್ನು ಬರ ಮಾಡಿಕೊಂಡೆವಷ್ಟೇ. ಅದರೆ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಹಿತಕ್ಕೆ ನಾವೆಂದೂ ಅನ್ಯಾಯ ಮಾಡಿಲ್ಲ. ನಮ್ಮ ಆದ್ಯತೆ ಎಚ್‍ಎಎಲ್, ಬಿಎಸ್‍ಎನ್‍ಎಲ್‍ಗೆ ಹೊರತು ರಿಲಾಯನ್ಸ್ ಡಿಫೆನ್ಸ್, ಜಿಯೋಗಳಿಗೆ ಅಲ್ಲ. ‘ನ್ಯಾಯ್’ ಎಂಬುದು ಇವತ್ತಿನ ತುರ್ತು ಅಗತ್ಯ. ಅದು ಬಡವರ, ಅದರಲ್ಲೂ ಹಳ್ಳಿಗಳ ಬಡವರ ಬದುಕಿಗೆ ಘನತೆ, ಗೌರವ ತರುವ ಕೆಲಸ. ಹಿಂದೆ ನಾವು ನರೇಗಾ ಜಾರಿಗೆ ತಂದಿದ್ದೂ ಇದೇ ಉದ್ದೇಶದಿಂದಲೇ…

ಪತ್ರಿಕೆ: ಎರಡು ಸಲ ಗದಗಿನಿಂದ ಶಾಸಕರಾಗಿ, ನಿಮ್ಮ ಸಹೋದರನಿಗೆ ಸೀಟು ಬಿಟ್ಟುಕೊಟ್ಟ ನೀವು ಈಗ ಮೊದಲ ಸಲ ಲೋಕಸಭೆ ಚುನಾವಣೆಗೆ ನಿಲ್ತಾ ಇದ್ದೀರಿ. ಹೇಗಿದೆ ಜನರ ಪ್ರತಿಕ್ರಿಯೆ?
ಡಿ.ಆರ್.ಪಾಟೀಲ್: ಇಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಗೆಲ್ತಾವು ಅಂತ ಜನರು ಹೇಳ್ತಾ ಇದ್ದಾರ.., ಹಾಲಿ ಸಂಸದರ ಕೆಲಸ ಅಷ್ಟಕ್ಕಷ್ಟೇ. ಆದರೆ ನಮ್ಮ ಹೋರಾಟ ಎದುರಿನ ಅಭ್ಯರ್ಥಿ ವಿರುದ್ಧ ಮಾತ್ರವಲ್ಲ. ಈ ದೇಶದ ಸಂವಿಧಾನ, ಸೌಹಾರ್ದತೆ ಕಾಪಾಡುವುದರ ಪರ ಇದೆ.

ಪತ್ರಿಕೆ: ಪಂಚಾಯತ್‍ರಾಜ್ ವ್ಯವಸ್ಥೆಯಲ್ಲಿ ಹಲವು ಕ್ರಾಂತಿಕಾರಿ ಬದಲಾವಣೆಗೆ, ಗ್ರಾಮೀಣ ಅಭಿವೃದ್ಧಿಗೆ ತಾವು ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಗದಗ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿಮಗಿರುವ ಸಪೋರ್ಟು ಹಾವೇರಿ ಭಾಗದಲ್ಲಿ ಸಿಗ್ತಾ ಇದೆಯಾ?
ಡಿ.ಆರ್.ಪಾಟೀಲ್: ಆರಂಭದಲ್ಲಿ ನನಗೂ ಡೌಟೇ ಇತ್ತರಿ. ಬಟ್, ಹಾವೇರಿ ಭಾಗದಲ್ಲೂ ಜನ ಬೆಂಬಲ ಸಿಗ್ತಾ ಇದೆ. ಈ ದೇಶದ ನಾಯಕರಿಗಿಂತ ಜನ ಹೆಚ್ಚು ಬುದ್ಧಿವಂತರು ಅನ್ನೋ ಮಾತಿನಾಗ ನನಗ ನಂಬಿಕೆ ಅದ..

ಪತ್ರಿಕೆ: ನೀವು 101 ಕಿ.ಮೀ. ‘ಗಾಂಧಿಯಾನ’ ಮಾಡಿದಿರಿ. ಆದರೆ ಈ ವಿಷಯ ತುಂಗಭದ್ರಾ ತಟ ದಾಟಿ ಆಚೆ ಮುಟ್ಟಲೇ ಇಲ್ಲವಲ್ಲ?
ಡಿ.ಆರ್.ಪಾಟೀಲ್: ನಮ್ಮ ಕೆಲಸ ನಾವು ಮಾಡಿದ್ದೇವೆ. ನಿಮ್ಮ ಈ ಪ್ರಶ್ನೆಯನ್ನೇ ನೆಪ ಮಾಡಿಕೊಂಡು ಒಂದು ವಿಷಯ ಹೇಳ್ತೇನೆ ಕೇಳಿ: ಮೋದಿ ಪೌರ ಕಾರ್ಮಿಕರ ಕಾಲು ತೊಳೆದ ನಾಟಕೀಯ ಪ್ರಸಂಗ ಈ ದೇಶದಲ್ಲಿ ಇವತ್ತು ಟಿಆರ್‍ಪಿ ಸರಕು ಎಂಬುದೇ ಅಸಹ್ಯದ ವಿಷಯ. ಬಹುಪಾಲು ಮಾಧ್ಯಮಗಳನ್ನು ಮೋದಿ-ಶಾ ಖರೀದಿಸಿದ್ದಾರೆ ಎಂಬ ಮಾತು ನಿಜ ಅನಿಸುತ್ತ ಅಲ್ರಿ? ನಂಗಿಂತಲೂ ನಿಮ್ಗ ಆ ವಿಷಯ ಜಾಸ್ತಿ ಗೊತ್ತಿರತೈತಿ ಅಲ್ಲೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...