Homeಕರ್ನಾಟಕಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

ಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

- Advertisement -
- Advertisement -

ಕರ್ನಾಟಕದ ಪ್ರಮುಖ ಚಿಂತಕರು ಮತ್ತು ಪತ್ರಕರ್ತರಾದ ಡಿ.ಉಮಾಪತಿಯವರಿಗೆ ಕರ್ನಾಟಕ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ‘ಬಿ.ರಾಚಯ್ಯ ರಾಜ್ಯ ಪ್ರಶಸ್ತಿ’ ಯನ್ನು ನೀಡಿ ಇಂದು ಗೌರವಿಸಿತು. ಚಿತ್ರದುರ್ಗದ ಶ್ರೀ ಮುರುಘಾಮಠದ ಅಲ್ಲಮ ಪ್ರಭು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಡಿ.ಉಮಾಪತಿಯವರು ಆಡಿದ ಮಾತುಗಳನ್ನು ಈ ಸಂದರ್ಭದಲ್ಲಿ ಪ್ರಕಟಿಸಲಾಗುತ್ತಿದೆ. 

ಅಂಬೇಡ್ಕರ್ ಬಹುತೇಕ ರಾಜಕೀಯ ರೂಪವಾಗಿ ಸಿಕ್ಕಿದ್ದಾರೆ ವಿನಃ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಆಳುವವರು ಮನಸ್ಸು ಮಾಡುತ್ತಿಲ್ಲ. ಉಣ್ಣದ ವಿಗ್ರಹಕ್ಕೆ ಭೋಜನವಿಡುವ ಡಾಂಭಿಕತನ ಇಂದಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿದೆ. ದಲಿತರನ್ನು ಸಮಾನವಾಗಿ ನಡೆಸಿಕೊಳ್ಳಬೇಕೆಂಬ ಅಂಬೇಡ್ಕರ್ ಅವರ ಮಾತಿಗೆ ರಾಜಕೀಯ ಪಕ್ಷಗಳು ಕಿವುಡಾಗಿವೆ. ಮನುಸ್ಮೃತಿಯನ್ನು ಪಾಲಿಸುವವರೆ ಇಂದು ದೇಶವನ್ನು ಆಳುತ್ತಿದ್ದಾರೆ.

ಅಂಬೇಡ್ಕರ್ ರವರು ಸರ್ವಶ್ರೇಷ್ಠರು ಎಂದು ಸಂಘಪರಿವಾರದ ಮುಖವಾಣಿ ಪತ್ರಿಕೆಯಲ್ಲಿ ಸಂಪಾದಕೀಯದಲ್ಲಿ ಬರೆದವರು, ಅವರು ಬರೆದ ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಹೀಗೆ ಎರಡೂ ಬಗೆಯ ಪಾತ್ರಗಳನ್ನು ಇಂದು ಮಾಡಲಾಗುತ್ತಿದೆ, ದಲಿತರ ಮತಗಳನ್ನು ಸೆಳೆಯಲು ಪಕ್ಷಗಳು ಅಂಬೇಡ್ಕರ್ ಅವರನ್ನು ದೋಚುತ್ತಿದ್ದು, ನಿಜವಾದ ಅಂಬೇಡ್ಕರ್ ಅವರನ್ನು ಕೊಲ್ಲುವ ಕೆಲಸ ಮಾಡುತ್ತಿದ್ದಾರೆ.

ಅಂಬೇಡ್ಕರ್ ಅವರ ಹೆಸರಿನಲ್ಲಿ ದೊಡ್ಡ ದೊಡ್ಡ ವಿಚಾರಗೋಷ್ಟಿ, ಮಹಲುಗಳನ್ನು‌ ಕಟ್ಟುಲಾಗುತ್ತಿದೆ, ಆದರೆ ಅದೇ ಸಂದರ್ಭದಲ್ಲಿ ಅವರು ಕೊಟ್ಟ ಸಂವಿಧಾನವನ್ನು ಕಾಲ ಕೆಳಗೆ ತುಳಿಯುವ ಕೆಲಸವನ್ನೂ ಇಂದು ಮಾಡಲಾಗುತ್ತಿದೆ. ಇವತ್ತು ಬೇಟೆಯ ನಾಯಿಯ ಜೊತೆಗೂ ನಾವಿದ್ದೇವೆ, ಮೊಲದ ಹಿತ ಕಾಯಲು ಅದರ ಜೊತೆಗೂ ನಾವಿದ್ದೇವೆ ಎಂಬ ಆಷಾಡಭೂತಿತನವನ್ನು ನಮ್ಮನ್ನಾಳುವವರಲ್ಲಿ ಕಾಣುತ್ತಿದ್ದೆವೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ. ವಂಚಿತರನ್ನು ಮೇಲೆತ್ತುವ ಅಂಬೇಡ್ಕರ್ ಅವರ ಚಿಂತನೆಗಳು ಇನ್ನು ಈಡೇರಿಲ್ಲ. ಎಲ್ಲೆಡೆ ಅಂಬೇಡ್ಕರ್ ಅವರ ಪ್ರತಿಮೆ, ಭವನಗಳ‌ ನಿರ್ಮಾಣಕ್ಕಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಂಡು ಮುನ್ನಡೆಯಬೇಕಾದ ಸಂದರ್ಭ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...