Homeಕರ್ನಾಟಕಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

ಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

- Advertisement -
- Advertisement -

ಕರ್ನಾಟಕದ ಪ್ರಮುಖ ಚಿಂತಕರು ಮತ್ತು ಪತ್ರಕರ್ತರಾದ ಡಿ.ಉಮಾಪತಿಯವರಿಗೆ ಕರ್ನಾಟಕ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ‘ಬಿ.ರಾಚಯ್ಯ ರಾಜ್ಯ ಪ್ರಶಸ್ತಿ’ ಯನ್ನು ನೀಡಿ ಇಂದು ಗೌರವಿಸಿತು. ಚಿತ್ರದುರ್ಗದ ಶ್ರೀ ಮುರುಘಾಮಠದ ಅಲ್ಲಮ ಪ್ರಭು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಡಿ.ಉಮಾಪತಿಯವರು ಆಡಿದ ಮಾತುಗಳನ್ನು ಈ ಸಂದರ್ಭದಲ್ಲಿ ಪ್ರಕಟಿಸಲಾಗುತ್ತಿದೆ. 

ಅಂಬೇಡ್ಕರ್ ಬಹುತೇಕ ರಾಜಕೀಯ ರೂಪವಾಗಿ ಸಿಕ್ಕಿದ್ದಾರೆ ವಿನಃ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಆಳುವವರು ಮನಸ್ಸು ಮಾಡುತ್ತಿಲ್ಲ. ಉಣ್ಣದ ವಿಗ್ರಹಕ್ಕೆ ಭೋಜನವಿಡುವ ಡಾಂಭಿಕತನ ಇಂದಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿದೆ. ದಲಿತರನ್ನು ಸಮಾನವಾಗಿ ನಡೆಸಿಕೊಳ್ಳಬೇಕೆಂಬ ಅಂಬೇಡ್ಕರ್ ಅವರ ಮಾತಿಗೆ ರಾಜಕೀಯ ಪಕ್ಷಗಳು ಕಿವುಡಾಗಿವೆ. ಮನುಸ್ಮೃತಿಯನ್ನು ಪಾಲಿಸುವವರೆ ಇಂದು ದೇಶವನ್ನು ಆಳುತ್ತಿದ್ದಾರೆ.

ಅಂಬೇಡ್ಕರ್ ರವರು ಸರ್ವಶ್ರೇಷ್ಠರು ಎಂದು ಸಂಘಪರಿವಾರದ ಮುಖವಾಣಿ ಪತ್ರಿಕೆಯಲ್ಲಿ ಸಂಪಾದಕೀಯದಲ್ಲಿ ಬರೆದವರು, ಅವರು ಬರೆದ ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಹೀಗೆ ಎರಡೂ ಬಗೆಯ ಪಾತ್ರಗಳನ್ನು ಇಂದು ಮಾಡಲಾಗುತ್ತಿದೆ, ದಲಿತರ ಮತಗಳನ್ನು ಸೆಳೆಯಲು ಪಕ್ಷಗಳು ಅಂಬೇಡ್ಕರ್ ಅವರನ್ನು ದೋಚುತ್ತಿದ್ದು, ನಿಜವಾದ ಅಂಬೇಡ್ಕರ್ ಅವರನ್ನು ಕೊಲ್ಲುವ ಕೆಲಸ ಮಾಡುತ್ತಿದ್ದಾರೆ.

ಅಂಬೇಡ್ಕರ್ ಅವರ ಹೆಸರಿನಲ್ಲಿ ದೊಡ್ಡ ದೊಡ್ಡ ವಿಚಾರಗೋಷ್ಟಿ, ಮಹಲುಗಳನ್ನು‌ ಕಟ್ಟುಲಾಗುತ್ತಿದೆ, ಆದರೆ ಅದೇ ಸಂದರ್ಭದಲ್ಲಿ ಅವರು ಕೊಟ್ಟ ಸಂವಿಧಾನವನ್ನು ಕಾಲ ಕೆಳಗೆ ತುಳಿಯುವ ಕೆಲಸವನ್ನೂ ಇಂದು ಮಾಡಲಾಗುತ್ತಿದೆ. ಇವತ್ತು ಬೇಟೆಯ ನಾಯಿಯ ಜೊತೆಗೂ ನಾವಿದ್ದೇವೆ, ಮೊಲದ ಹಿತ ಕಾಯಲು ಅದರ ಜೊತೆಗೂ ನಾವಿದ್ದೇವೆ ಎಂಬ ಆಷಾಡಭೂತಿತನವನ್ನು ನಮ್ಮನ್ನಾಳುವವರಲ್ಲಿ ಕಾಣುತ್ತಿದ್ದೆವೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ. ವಂಚಿತರನ್ನು ಮೇಲೆತ್ತುವ ಅಂಬೇಡ್ಕರ್ ಅವರ ಚಿಂತನೆಗಳು ಇನ್ನು ಈಡೇರಿಲ್ಲ. ಎಲ್ಲೆಡೆ ಅಂಬೇಡ್ಕರ್ ಅವರ ಪ್ರತಿಮೆ, ಭವನಗಳ‌ ನಿರ್ಮಾಣಕ್ಕಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಂಡು ಮುನ್ನಡೆಯಬೇಕಾದ ಸಂದರ್ಭ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...