Homeಅಂಕಣಗಳುರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ.

- Advertisement -
- Advertisement -

ಸುಮಾರು ಎರಡು ಲಕ್ಷ ಮಂದಿ ಪಾಲ್ಗೊಂಡಿರುವ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಐತಿಹಾಸಿಕ ಸ್ವರೂಪದ್ದು. ಪಕ್ಷ ರಾಜಕಾರಣವನ್ನು ದೂರವಿಟ್ಟು ನಡೆಯುತ್ತಿರುವ ಅನನ್ಯ ಶಾಂತಿಯುತ ಆಂದೋಲನ. ವಿಶ್ವವೇ ಗಮನಿಸುತ್ತಿರುವ ವಿದ್ಯಮಾನ.

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ. ದೆಹಲಿಯ ಗಡಿಗಳತ್ತ ಸಾಗುವ ಮುನ್ನ ಐವತ್ತೈದು ದಿನಗಳ ಕಾಲ ಕಿಚ್ಚಿನಂತೆ ವ್ಯಾಪಿಸಿದ್ದ ಪ್ರತಿಭಟನೆಯಿದು. ಹಳ್ಳಿ ಹಳ್ಳಿಗಳು ಆಹಾರ ಧಾನ್ಯ, ತರಕಾರಿ, ಹಾಲು, ಹಣ್ಣು, ಹಣವನ್ನು ಸಂಗ್ರಹಿಸಿ ದೆಹಲಿ ಗಡಿಯ ಪ್ರತಿಭಟನೆಗೆ ರವಾನಿಸುತ್ತಿದೆ. ಖಾಸಗಿ ಬಸ್ಸುಗಳು ಕ್ವಿಂಟಾಲ್‌ಗಟ್ಟಲೆ ದಿನಸಿಗಳು ಹಾಲು ಹೈನನ್ನು ಉಚಿತವಾಗಿ ಸಾಗಿಸುತ್ತಿವೆ. ಪಂಜಾಬಿನ ಮದುವೆಗಳಲ್ಲಿ ಉಡುಗೊರೆಗಳ ಬದಲಿಗೆ ವಂತಿಗೆ ಸಂಗ್ರಹಿಸಿ ಕಳಿಸಲಾಗುತ್ತಿದೆ. ಈ ಸತ್ಯಾಗ್ರಹದ ಬೇರುಗಳ ಜನಪದದಲ್ಲಿವೆ. ಅವುಗಳನ್ನು ಕತ್ತರಿಸುವುದು ಸುಲಭವಲ್ಲ. ಸಿಡಿದೆದ್ದಿರುವ ಈ ಭುಗಿಲನ್ನು ಸದ್ಯಕ್ಕಾದರೂ ಶಾಂತಗೊಳಿಸುವ ಏಕೈಕ ಸುಲಭದ ದಾರಿಯೆಂದರೆ ರೈತರ ಬೇಡಿಕೆಗಳನ್ನು ಒಪ್ಪುವುದು.

ಬ್ಲಾಕ್
PC: PTI

ದೆಹಲಿ-ಹರಿಯಾಣದ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಮೊನ್ನೆ ಬಹಾದೂರ್‌ಗಢ ಬೈಪಾಸ್ ಹೆದ್ದಾರಿಯುದ್ದದ ವಿಭಜಕದಲ್ಲಿ (ಡಿವೈಡರ್) ಉಳುಮೆ ಮಾಡತೊಡಗಿದರು. ತಮ್ಮ ಅಡುಗೆಗೆ ನಿತ್ಯ ಬೇಕಿರುವ ತರಕಾರಿಗಳು ಮತ್ತು ಸೊಪ್ಪು ಬೆಳೆಯುವುದು ಅವರ ವಿನೂತನ ಪ್ರತಿಭಟನೆಯ ಪರಿ.

ರಾಜಸ್ತಾನ, ಹರಿಯಾಣ, ಪಶ್ಚಿಮೀ ಉತ್ತರಪ್ರದೇಶ, ಮಹಾರಾಷ್ಟ್ರ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳ ರೈತರೂ ಈ ಪ್ರತಿಭಟನೆಯನ್ನು ಕೂಡಿಕೊಳ್ಳತೊಡಗಿದ್ದಾರೆ. ಮುಂಬರುವ ದಿನಗಳು ಉಬ್ಬರವನ್ನು ಕಾಣುವುವೇ ವಿನಾ ಇಳಿತವನ್ನಲ್ಲ. ಅರ್ಥಾತ್ ’ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು’.

ಕೇಂದ್ರ ಸರ್ಕಾರ ಮಾತ್ರವಲ್ಲದೆ, ಅಂಬಾನಿ-ಅದಾನಿಯಂತಹ ಭಾರಿ ಲಾಭಬಡುಕ ಕಾರ್ಪೊರೇಟ್‌ಗಳು ಹಾಗೂ ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟುಗಳ ತುತ್ತೂರಿಗಳಾಗಿರುವ ಸಮೂಹ ಮಾಧ್ಯಮಗಳನ್ನು ಈ ಆಂದೋಲನ ಕಟಕಟೆಯಲ್ಲಿ ನಿಲ್ಲಿಸಿದೆ. ರಾಜ್ಯ ಸರ್ಕಾರಗಳು ಮತ್ತು ರೈತ ಸಮುದಾಯಗಳೊಂದಿಗೆ ಸಮಾಲೋಚನೆಯನ್ನೇ ನಡೆಸದೆ ಏಕಪಕ್ಷೀಯವಾಗಿ ಕೃಷಿ ಕಾಯಿದೆಗಳನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರ, ಒಕ್ಕೂಟ ಗಣತಂತ್ರದ ತಿರುಳು ಮತ್ತು ಸತ್ವವನ್ನೇ ಗಾಳಿಗೆ ತೂರಿರುವ ನಡೆಯನ್ನು ಪ್ರಶ್ನಿಸಿರುವ ಚಳವಳಿಯಿದು.

ಜೈ ಜವಾನ್-ಜೈ ಕಿಸಾನ್ ಎಂಬುದು ಭಕ್ತಗಣ ಮತ್ತು ಆಳುವವರ ಪರ ನಿಂತಿರುವ ಜನವಿರೋಧಿ ತಮಟೆ-ತುತ್ತೂರಿ ಮೀಡಿಯಾ ಇತ್ತೀಚಿನವರೆಗೆ ಜಪಿಸುತ್ತಿದ್ದ ಮಂತ್ರ. ಆದರೆ ಕುರುಡುಭಕ್ತಿಗೆ ಇತಿಮಿತಿಗಳು ಹದ್ದುಬಸ್ತುಗಳು ಉಂಟೇನು? ತಮ್ಮ ಚಂಡಪ್ರಚಂಡ ನಾಯಕನಿಗೆ ಎದುರಾಗಿ ನಿಂತರೆಂದು ರೈತರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗಿದೆ. ಖಾಲಿಸ್ತಾನಿಗಳೆಂದು ಸಾರಲಾಗಿದೆ. ದೇಶ ರಕ್ಷಣೆಗೆ ಒರೆಯಿಂದ ಹಿರಿದ ಖಡ್ಗವೆಂದೇ ಪಂಜಾಬನ್ನು ಬಣ್ಣಿಸುವುದುಂಟು. ಅದಕ್ಕೆ ಐತಿಹಾಸಿಕ ಕಾರಣಗಳಿವೆ. ಸೇನೆಯಿಂದ ನಿವೃತ್ತಿಯ ನಂತರ ರೈತಾಪಿಗಳಾಗಿರುವ ಸಾವಿರಾರು ಮಾಜಿ ಯೋಧರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

PC : Singhstation

ಖಾಲಿಸ್ತಾನಿಗಳ ವಿರುದ್ಧ ಹೋರಾಡಿ ಹುತಾತ್ಮರಾದ ದೇಶಪ್ರೇಮಿಗಳ ರೈತ ಕೂಲಿ ಸಂಘಟನೆ ಇದೆ. ಅದರ ಹೆಸರು ಕೀರ್ತಿ ಕಿಸಾನ್ ಯೂನಿಯನ್. ಖಾಲಿಸ್ತಾನಿಗಳ ಭಯೋತ್ಪಾದನೆಯನ್ನು ಮಾತ್ರವಲ್ಲ, ಅಮಾಯಕರನ್ನು ಭಯೋತ್ಪಾದರೆಂದು ಘೋಷಿಸಿ ಕೊಂದ ಪ್ರಭುತ್ವದ ಭಯೋತ್ಪಾದನೆ, ಸಿಖ್ ಧರ್ಮದ ಸಂಪ್ರದಾಯವಾದವನ್ನೂ ವಿರೋಧಿಸಿದ ಸಂಘಟನೆಯಿದು. ’ಅತಿ ಅಪಾಯಕಾರಿ ವಾರ್ತೆಯೆಂದರೆ ನಮ್ಮ ಕನಸುಗಳು ಕೊನೆಯುಸಿರೆಳೆವುದು…’ ಎಂಬ ಪಂಜಾಬಿನ ಕ್ರಾಂತಿಕಾರಿ ಕವಿ ಅವತಾರ್ ಸಿಂಗ್ ಪಾಶ್ ಅವರ ಕವಿತೆ ಜನಜನಿತ. ಖಾಲಿಸ್ತಾನಿಗಳನ್ನು ವಿರೋಧಿಸಿದ ಅವರು ಅವರಿಂದಲೇ ಹತರಾಗುತ್ತಾರೆ. ಅವರ ಜಮೀನನ್ನು ಯಾರೂ ಉಳುಮೆ ಮಾಡಕೂಡದೆಂದು ಖಾಲಿಸ್ತಾನಿಗಳು ಬೆದರಿಕೆ ಹಾಕಿರುತ್ತಾರೆ. ಆದರೆ ಈ ಬೆದರಿಕೆಗೆ ಬಗ್ಗದೆ ಅದನ್ನು ಸವಾಲಾಗಿ ಸ್ವೀಕರಿಸಿ ಪಾಶ್ ಅವರ ಜಮೀನನ್ನು ಉಳುಮೆ ಮಾಡಿ ಬೆಳೆ ಬೆಳೆಯಿತು ಕೀರ್ತಿ ಕಿಸಾನ್ ಯೂನಿಯನ್ ಸಂಘಟನೆ. ಈ ಸಂಘಟನೆಯ ಹದಿಮೂರು ಮಂದಿ ಕಾರ್ಯಕರ್ತರು ಮತ್ತು ಮೂವರು ಅಧ್ಯಕ್ಷರನ್ನು ಕೊಂದು ಹಾಕಿದ್ದರು ಖಾಲಿಸ್ತಾನಿಗಳು. ಈ ಸಂಘಟನೆಯ ಅಧ್ಯಕ್ಷ ರಾಜೇಂದ್ರಸಿಂಗ್ ದೀಪ್ ಸಿಂಗ್ ವಾಲಾ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿರುವ ರೈತ ನಿಯೋಗದ ಅತ್ಯಂತ ಕಿರಿಯ ವಯಸ್ಸಿನ ಸದಸ್ಯ. ಹತ್ತೆಕರೆಗೂ ಕಮ್ಮಿ ಹೊಲಗದ್ದೆಗಳ ರೈತರು ಮತ್ತು ಕೂಲಿಕಾರರ ಕೊರಳ ದನಿಯಾಗಿರುವ ಸಂಘಟನೆಯಿದು. ಅಪಪ್ರಚಾರಕ್ಕೆಂದೇ ನೇಮಕಗೊಂಡಿರುವ ಸೇನೆಯ ಕುರುಡು ಕಣ್ಣುಗಳಿಗೆ ಈ ಸತ್ಯ ಕಾಣುವುದಾದರೂ ಎಂತು?

ಪ್ರತಿಭಟನೆಯನ್ನು ಸೇರಿಕೊಳ್ಳುತ್ತಿರುವ ರೈತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ. ಊಟ ತಿಂಡಿ ಮುಂತಾದ ಅನುಕೂಲಗಳು ಹೇರಳ. ಆದರೆ ಸ್ನಾನ ಶೌಚದ ಸಮಸ್ಯೆ ಬಿಗಡಾಯಿಸಿದೆ. ರೈತ ಮಹಿಳೆಯರ ಪಾಡು ಹೇಳತೀರದು. ಹರಿಯಾಣ ಮತ್ತು ಉತ್ತರಪ್ರದೇಶ ಸರ್ಕಾರಗಳು ಮಾಡಿರುವ ಸಂಚಾರಿ ಶೌಚಾಲಯಗಳ ಸಂಖ್ಯೆ ಸಾಲದೇ ಸಾಲದು. ಈ ಶೌಚಾಲಯಗಳು ಕೂಡ ಬಳಸಲಾರದಷ್ಟು ಕೊಳಕಾಗಿವೆ. ಸಮೀಪದ ಹೊಲಗದ್ದೆಗಳು, ಕಾಲುದಾರಿಗಳೇ ಗತಿ. ಹೋಟೆಲುಗಳನ್ನು ಹುಡುಕಿಕೊಂಡು ಹೋಗಬೇಕೆಂದರೆ ಹತ್ತು ಕಿ.ಮೀ.ದೂರ ಕ್ರಮಿಸಬೇಕು. ಉತ್ತರಪ್ರದೇಶ-ದೆಹಲಿಯ ಘಾಜೀಪುರ ಗಡಿಯಲ್ಲಿ ಮುಗಿಲೆತ್ತರ ನಿಂತ ಕಸದ ಹೊಲಸಿನ ಬೆಟ್ಟವೇ ಪ್ರತಿಭಟನಾ ನಿರತ ರೈತರ ನೆರೆಹೊರೆ. ದುರ್ವಾಸನೆಯ ಜೊತೆಗೆ ಸೊಳ್ಳೆಗಳ ಕಾಟ. ದೆಹಲಿಯ ಸಿಖ್ ಗುರುದ್ವಾರ ಪ್ರಬಂಧಕ ಸಮಿತಿಯು ಸೊಳ್ಳೆ ನಿರೋಧಕ ಬತ್ತಿ- ಮುಲಾಮುಗಳು, ಟೂತ್ ಪೇಸ್ಟ್, ಬ್ರಶ್, ಸೋಪು ಹಾಗೂ ಶಾಂಪೂ ಹೊಂದಿದ ಸಾವಿರಾರು ’ಕಿಟ್’ ಗಳನ್ನು ರೈತರಿಗೆ ಹಂಚತೊಡಗಿದೆ. ಕಳೆದ ಎರಡು ವಾರಗಳಲ್ಲಿ ವಿಪರೀತ ಚಳಿಯ ವಾತಾವರಣ ಮತ್ತು ಅಪಘಾತಗಳ ಕಾರಣ ಒಟ್ಟು 14 ಮಂದಿ ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ. ಥರಗುಟ್ಟಿಸುವ ಥಂಡಿ ಕೊರೆದು ಕಾಡುವ ಬಯಲಿನಲ್ಲಿ ವಾರಗಟ್ಟಲೆ ಬದುಕುವುದು ಸುಲಭವಲ್ಲ. ಸಾವು ನೋವುಗಳಿಗೆ ನೀಡುವ ಆಹ್ವಾನವದು.

ಏನನ್ನು ಬೇಕಾದರೂ ಜಗಿದು ನುಂಗಿ ಅರಗಿಸಿಕೊಂಡೇವು ಎನ್ನುವ ಪ್ರಚಂಡ ಜೋಡಿಗೆ ಎದುರಾದಂತಿದೆ ಕಬ್ಬಿಣದ ಕಡಲೆ.


ಇದನ್ನೂ ಓದಿ: ರೈತ ಹೋರಾಟ ರಾಷ್ಟ್ರೀಯ ಸಮಸ್ಯೆಯಾಗುವ ಮುನ್ನ ಬಗೆಹರಿಸಿ: ಕೇಂದ್ರಕ್ಕೆ ಸುಪ್ರೀಂ ಸಲಹೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...