Homeಅಂಕಣಗಳುರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ.

- Advertisement -
- Advertisement -

ಸುಮಾರು ಎರಡು ಲಕ್ಷ ಮಂದಿ ಪಾಲ್ಗೊಂಡಿರುವ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಐತಿಹಾಸಿಕ ಸ್ವರೂಪದ್ದು. ಪಕ್ಷ ರಾಜಕಾರಣವನ್ನು ದೂರವಿಟ್ಟು ನಡೆಯುತ್ತಿರುವ ಅನನ್ಯ ಶಾಂತಿಯುತ ಆಂದೋಲನ. ವಿಶ್ವವೇ ಗಮನಿಸುತ್ತಿರುವ ವಿದ್ಯಮಾನ.

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ. ದೆಹಲಿಯ ಗಡಿಗಳತ್ತ ಸಾಗುವ ಮುನ್ನ ಐವತ್ತೈದು ದಿನಗಳ ಕಾಲ ಕಿಚ್ಚಿನಂತೆ ವ್ಯಾಪಿಸಿದ್ದ ಪ್ರತಿಭಟನೆಯಿದು. ಹಳ್ಳಿ ಹಳ್ಳಿಗಳು ಆಹಾರ ಧಾನ್ಯ, ತರಕಾರಿ, ಹಾಲು, ಹಣ್ಣು, ಹಣವನ್ನು ಸಂಗ್ರಹಿಸಿ ದೆಹಲಿ ಗಡಿಯ ಪ್ರತಿಭಟನೆಗೆ ರವಾನಿಸುತ್ತಿದೆ. ಖಾಸಗಿ ಬಸ್ಸುಗಳು ಕ್ವಿಂಟಾಲ್‌ಗಟ್ಟಲೆ ದಿನಸಿಗಳು ಹಾಲು ಹೈನನ್ನು ಉಚಿತವಾಗಿ ಸಾಗಿಸುತ್ತಿವೆ. ಪಂಜಾಬಿನ ಮದುವೆಗಳಲ್ಲಿ ಉಡುಗೊರೆಗಳ ಬದಲಿಗೆ ವಂತಿಗೆ ಸಂಗ್ರಹಿಸಿ ಕಳಿಸಲಾಗುತ್ತಿದೆ. ಈ ಸತ್ಯಾಗ್ರಹದ ಬೇರುಗಳ ಜನಪದದಲ್ಲಿವೆ. ಅವುಗಳನ್ನು ಕತ್ತರಿಸುವುದು ಸುಲಭವಲ್ಲ. ಸಿಡಿದೆದ್ದಿರುವ ಈ ಭುಗಿಲನ್ನು ಸದ್ಯಕ್ಕಾದರೂ ಶಾಂತಗೊಳಿಸುವ ಏಕೈಕ ಸುಲಭದ ದಾರಿಯೆಂದರೆ ರೈತರ ಬೇಡಿಕೆಗಳನ್ನು ಒಪ್ಪುವುದು.

ಬ್ಲಾಕ್
PC: PTI

ದೆಹಲಿ-ಹರಿಯಾಣದ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಮೊನ್ನೆ ಬಹಾದೂರ್‌ಗಢ ಬೈಪಾಸ್ ಹೆದ್ದಾರಿಯುದ್ದದ ವಿಭಜಕದಲ್ಲಿ (ಡಿವೈಡರ್) ಉಳುಮೆ ಮಾಡತೊಡಗಿದರು. ತಮ್ಮ ಅಡುಗೆಗೆ ನಿತ್ಯ ಬೇಕಿರುವ ತರಕಾರಿಗಳು ಮತ್ತು ಸೊಪ್ಪು ಬೆಳೆಯುವುದು ಅವರ ವಿನೂತನ ಪ್ರತಿಭಟನೆಯ ಪರಿ.

ರಾಜಸ್ತಾನ, ಹರಿಯಾಣ, ಪಶ್ಚಿಮೀ ಉತ್ತರಪ್ರದೇಶ, ಮಹಾರಾಷ್ಟ್ರ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳ ರೈತರೂ ಈ ಪ್ರತಿಭಟನೆಯನ್ನು ಕೂಡಿಕೊಳ್ಳತೊಡಗಿದ್ದಾರೆ. ಮುಂಬರುವ ದಿನಗಳು ಉಬ್ಬರವನ್ನು ಕಾಣುವುವೇ ವಿನಾ ಇಳಿತವನ್ನಲ್ಲ. ಅರ್ಥಾತ್ ’ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು’.

ಕೇಂದ್ರ ಸರ್ಕಾರ ಮಾತ್ರವಲ್ಲದೆ, ಅಂಬಾನಿ-ಅದಾನಿಯಂತಹ ಭಾರಿ ಲಾಭಬಡುಕ ಕಾರ್ಪೊರೇಟ್‌ಗಳು ಹಾಗೂ ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟುಗಳ ತುತ್ತೂರಿಗಳಾಗಿರುವ ಸಮೂಹ ಮಾಧ್ಯಮಗಳನ್ನು ಈ ಆಂದೋಲನ ಕಟಕಟೆಯಲ್ಲಿ ನಿಲ್ಲಿಸಿದೆ. ರಾಜ್ಯ ಸರ್ಕಾರಗಳು ಮತ್ತು ರೈತ ಸಮುದಾಯಗಳೊಂದಿಗೆ ಸಮಾಲೋಚನೆಯನ್ನೇ ನಡೆಸದೆ ಏಕಪಕ್ಷೀಯವಾಗಿ ಕೃಷಿ ಕಾಯಿದೆಗಳನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರ, ಒಕ್ಕೂಟ ಗಣತಂತ್ರದ ತಿರುಳು ಮತ್ತು ಸತ್ವವನ್ನೇ ಗಾಳಿಗೆ ತೂರಿರುವ ನಡೆಯನ್ನು ಪ್ರಶ್ನಿಸಿರುವ ಚಳವಳಿಯಿದು.

ಜೈ ಜವಾನ್-ಜೈ ಕಿಸಾನ್ ಎಂಬುದು ಭಕ್ತಗಣ ಮತ್ತು ಆಳುವವರ ಪರ ನಿಂತಿರುವ ಜನವಿರೋಧಿ ತಮಟೆ-ತುತ್ತೂರಿ ಮೀಡಿಯಾ ಇತ್ತೀಚಿನವರೆಗೆ ಜಪಿಸುತ್ತಿದ್ದ ಮಂತ್ರ. ಆದರೆ ಕುರುಡುಭಕ್ತಿಗೆ ಇತಿಮಿತಿಗಳು ಹದ್ದುಬಸ್ತುಗಳು ಉಂಟೇನು? ತಮ್ಮ ಚಂಡಪ್ರಚಂಡ ನಾಯಕನಿಗೆ ಎದುರಾಗಿ ನಿಂತರೆಂದು ರೈತರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗಿದೆ. ಖಾಲಿಸ್ತಾನಿಗಳೆಂದು ಸಾರಲಾಗಿದೆ. ದೇಶ ರಕ್ಷಣೆಗೆ ಒರೆಯಿಂದ ಹಿರಿದ ಖಡ್ಗವೆಂದೇ ಪಂಜಾಬನ್ನು ಬಣ್ಣಿಸುವುದುಂಟು. ಅದಕ್ಕೆ ಐತಿಹಾಸಿಕ ಕಾರಣಗಳಿವೆ. ಸೇನೆಯಿಂದ ನಿವೃತ್ತಿಯ ನಂತರ ರೈತಾಪಿಗಳಾಗಿರುವ ಸಾವಿರಾರು ಮಾಜಿ ಯೋಧರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

PC : Singhstation

ಖಾಲಿಸ್ತಾನಿಗಳ ವಿರುದ್ಧ ಹೋರಾಡಿ ಹುತಾತ್ಮರಾದ ದೇಶಪ್ರೇಮಿಗಳ ರೈತ ಕೂಲಿ ಸಂಘಟನೆ ಇದೆ. ಅದರ ಹೆಸರು ಕೀರ್ತಿ ಕಿಸಾನ್ ಯೂನಿಯನ್. ಖಾಲಿಸ್ತಾನಿಗಳ ಭಯೋತ್ಪಾದನೆಯನ್ನು ಮಾತ್ರವಲ್ಲ, ಅಮಾಯಕರನ್ನು ಭಯೋತ್ಪಾದರೆಂದು ಘೋಷಿಸಿ ಕೊಂದ ಪ್ರಭುತ್ವದ ಭಯೋತ್ಪಾದನೆ, ಸಿಖ್ ಧರ್ಮದ ಸಂಪ್ರದಾಯವಾದವನ್ನೂ ವಿರೋಧಿಸಿದ ಸಂಘಟನೆಯಿದು. ’ಅತಿ ಅಪಾಯಕಾರಿ ವಾರ್ತೆಯೆಂದರೆ ನಮ್ಮ ಕನಸುಗಳು ಕೊನೆಯುಸಿರೆಳೆವುದು…’ ಎಂಬ ಪಂಜಾಬಿನ ಕ್ರಾಂತಿಕಾರಿ ಕವಿ ಅವತಾರ್ ಸಿಂಗ್ ಪಾಶ್ ಅವರ ಕವಿತೆ ಜನಜನಿತ. ಖಾಲಿಸ್ತಾನಿಗಳನ್ನು ವಿರೋಧಿಸಿದ ಅವರು ಅವರಿಂದಲೇ ಹತರಾಗುತ್ತಾರೆ. ಅವರ ಜಮೀನನ್ನು ಯಾರೂ ಉಳುಮೆ ಮಾಡಕೂಡದೆಂದು ಖಾಲಿಸ್ತಾನಿಗಳು ಬೆದರಿಕೆ ಹಾಕಿರುತ್ತಾರೆ. ಆದರೆ ಈ ಬೆದರಿಕೆಗೆ ಬಗ್ಗದೆ ಅದನ್ನು ಸವಾಲಾಗಿ ಸ್ವೀಕರಿಸಿ ಪಾಶ್ ಅವರ ಜಮೀನನ್ನು ಉಳುಮೆ ಮಾಡಿ ಬೆಳೆ ಬೆಳೆಯಿತು ಕೀರ್ತಿ ಕಿಸಾನ್ ಯೂನಿಯನ್ ಸಂಘಟನೆ. ಈ ಸಂಘಟನೆಯ ಹದಿಮೂರು ಮಂದಿ ಕಾರ್ಯಕರ್ತರು ಮತ್ತು ಮೂವರು ಅಧ್ಯಕ್ಷರನ್ನು ಕೊಂದು ಹಾಕಿದ್ದರು ಖಾಲಿಸ್ತಾನಿಗಳು. ಈ ಸಂಘಟನೆಯ ಅಧ್ಯಕ್ಷ ರಾಜೇಂದ್ರಸಿಂಗ್ ದೀಪ್ ಸಿಂಗ್ ವಾಲಾ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿರುವ ರೈತ ನಿಯೋಗದ ಅತ್ಯಂತ ಕಿರಿಯ ವಯಸ್ಸಿನ ಸದಸ್ಯ. ಹತ್ತೆಕರೆಗೂ ಕಮ್ಮಿ ಹೊಲಗದ್ದೆಗಳ ರೈತರು ಮತ್ತು ಕೂಲಿಕಾರರ ಕೊರಳ ದನಿಯಾಗಿರುವ ಸಂಘಟನೆಯಿದು. ಅಪಪ್ರಚಾರಕ್ಕೆಂದೇ ನೇಮಕಗೊಂಡಿರುವ ಸೇನೆಯ ಕುರುಡು ಕಣ್ಣುಗಳಿಗೆ ಈ ಸತ್ಯ ಕಾಣುವುದಾದರೂ ಎಂತು?

ಪ್ರತಿಭಟನೆಯನ್ನು ಸೇರಿಕೊಳ್ಳುತ್ತಿರುವ ರೈತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ. ಊಟ ತಿಂಡಿ ಮುಂತಾದ ಅನುಕೂಲಗಳು ಹೇರಳ. ಆದರೆ ಸ್ನಾನ ಶೌಚದ ಸಮಸ್ಯೆ ಬಿಗಡಾಯಿಸಿದೆ. ರೈತ ಮಹಿಳೆಯರ ಪಾಡು ಹೇಳತೀರದು. ಹರಿಯಾಣ ಮತ್ತು ಉತ್ತರಪ್ರದೇಶ ಸರ್ಕಾರಗಳು ಮಾಡಿರುವ ಸಂಚಾರಿ ಶೌಚಾಲಯಗಳ ಸಂಖ್ಯೆ ಸಾಲದೇ ಸಾಲದು. ಈ ಶೌಚಾಲಯಗಳು ಕೂಡ ಬಳಸಲಾರದಷ್ಟು ಕೊಳಕಾಗಿವೆ. ಸಮೀಪದ ಹೊಲಗದ್ದೆಗಳು, ಕಾಲುದಾರಿಗಳೇ ಗತಿ. ಹೋಟೆಲುಗಳನ್ನು ಹುಡುಕಿಕೊಂಡು ಹೋಗಬೇಕೆಂದರೆ ಹತ್ತು ಕಿ.ಮೀ.ದೂರ ಕ್ರಮಿಸಬೇಕು. ಉತ್ತರಪ್ರದೇಶ-ದೆಹಲಿಯ ಘಾಜೀಪುರ ಗಡಿಯಲ್ಲಿ ಮುಗಿಲೆತ್ತರ ನಿಂತ ಕಸದ ಹೊಲಸಿನ ಬೆಟ್ಟವೇ ಪ್ರತಿಭಟನಾ ನಿರತ ರೈತರ ನೆರೆಹೊರೆ. ದುರ್ವಾಸನೆಯ ಜೊತೆಗೆ ಸೊಳ್ಳೆಗಳ ಕಾಟ. ದೆಹಲಿಯ ಸಿಖ್ ಗುರುದ್ವಾರ ಪ್ರಬಂಧಕ ಸಮಿತಿಯು ಸೊಳ್ಳೆ ನಿರೋಧಕ ಬತ್ತಿ- ಮುಲಾಮುಗಳು, ಟೂತ್ ಪೇಸ್ಟ್, ಬ್ರಶ್, ಸೋಪು ಹಾಗೂ ಶಾಂಪೂ ಹೊಂದಿದ ಸಾವಿರಾರು ’ಕಿಟ್’ ಗಳನ್ನು ರೈತರಿಗೆ ಹಂಚತೊಡಗಿದೆ. ಕಳೆದ ಎರಡು ವಾರಗಳಲ್ಲಿ ವಿಪರೀತ ಚಳಿಯ ವಾತಾವರಣ ಮತ್ತು ಅಪಘಾತಗಳ ಕಾರಣ ಒಟ್ಟು 14 ಮಂದಿ ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ. ಥರಗುಟ್ಟಿಸುವ ಥಂಡಿ ಕೊರೆದು ಕಾಡುವ ಬಯಲಿನಲ್ಲಿ ವಾರಗಟ್ಟಲೆ ಬದುಕುವುದು ಸುಲಭವಲ್ಲ. ಸಾವು ನೋವುಗಳಿಗೆ ನೀಡುವ ಆಹ್ವಾನವದು.

ಏನನ್ನು ಬೇಕಾದರೂ ಜಗಿದು ನುಂಗಿ ಅರಗಿಸಿಕೊಂಡೇವು ಎನ್ನುವ ಪ್ರಚಂಡ ಜೋಡಿಗೆ ಎದುರಾದಂತಿದೆ ಕಬ್ಬಿಣದ ಕಡಲೆ.


ಇದನ್ನೂ ಓದಿ: ರೈತ ಹೋರಾಟ ರಾಷ್ಟ್ರೀಯ ಸಮಸ್ಯೆಯಾಗುವ ಮುನ್ನ ಬಗೆಹರಿಸಿ: ಕೇಂದ್ರಕ್ಕೆ ಸುಪ್ರೀಂ ಸಲಹೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...