Homeಮುಖಪುಟಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

ಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

- Advertisement -
- Advertisement -

ಅಕ್ಕಿಯೊಳಗನ್ನವನು ಮೊದಲಾರು ಕಂಡವನು
ಅಕ್ಕರದ ಬರಹಕ್ಕೆ ಮೊದಲಿಗನದಾರು?
ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ
ದಕ್ಕುವುದೇ ನಿನಗೆ ಜಸ ಮಂಕುತಿಮ್ಮ.

ಮಂಕುತಿಮ್ಮ ಎಂದು ದಡ್ಡನೊಬ್ಬನಿಗೆ ಅನ್ನುವಂತಹ ಮಾತೊಂದನ್ನು ಡಿವಿಜಿ ಜೀವರೂಪಕವನ್ನಾಗಿ ಆರಿಸಿಕೊಂಡಿದ್ದು ಆಕಸ್ಮಿಕವೂ ಅಲ್ಲ, ವಿಡಂಬನೆಯೂ ಅಲ್ಲ. ಜೀವಿ ಎಂಬ ಸೀಮಿತ ಭೌತಿಕ ಅಸ್ತಿತ್ವವು ಜೀವನ ಎಂಬ ಅನಂತ ಅಸ್ತಿತ್ವದ ಭಾಗವಾಗಿದ್ದು, ಅದನ್ನು ಅರಿಯಲು ತನ್ನ ತಾತ್ವಿಕತೆಯ ದೃಷ್ಟಿಯನ್ನು ವಿಸ್ತಾರಗೊಳಿಸಿಕೊಳ್ಳಲು ಮಂಕುತಿಮ್ಮ ಇಲ್ಲಿ ಮಾನುಷ ರೂಪಕವಾಗಿದ್ದಾನೆ.

ತಿಳಿದಿದ್ದೇನೆ ಎನ್ನುವ ಅಹಮಿನ ಭಾವಕ್ಕೆ ತಿಳಿಯದ ಅನಂತ ವಿಚಾರಗಳು, ಅಚ್ಚರಿಗಳು, ಗುಟ್ಟುಗಳು, ದಾರಿಗಳು, ನೋಟಗಳೆಲ್ಲಾ ಇದ್ದು, ತನಗೆ ಹೇಳಿಕೊಂಡರೆ ತಾನು, ನಿನಗೆ ಹೇಳಿದರೆ ನೀನು ಎನ್ನುವ ಹಾಗೆ ಮಂಕುತಿಮ್ಮ ಆತ್ಮಾವಲೋಕನಕ್ಕೂ ರೂಪಕವಾಗುತ್ತಾನೆ. ಎದುರಿಗೆ ಸಂವಾದಿಸುತ್ತಾ ಬೋಧನೆಯನ್ನು ಸ್ವೀಕರಿಸುತ್ತಿರುವ ವ್ಯಕ್ತಿಯಾಗಿಯೂ ಸಂಕೇತವಾಗುತ್ತಾನೆ. ಒಟ್ಟಾರೆ ಒಂದು ಮಾನುಷ ಪರಿಮಿತಿಯ ಗ್ರಹಿಕೆ ಮತ್ತು ಅರಿವನ್ನು ಪರಸ್ಪರ ಹಂಚಿಕೊಳ್ಳುವ ಪ್ರತಿಮೆ ಮಂಕುತಿಮ್ಮ.

“ಕಲೆಗಳಲಿ ಪರಮ ಕಲೆ ಜೀವನದ ಲಲಿತಕಲೆ” ಎನ್ನುವ ಮಂಕುತಿಮ್ಮ ತನ್ನೆಲ್ಲಾ ತಾತ್ವಿಕ, ನೈತಿಕ, ಪಾರಮಾರ್ಥಿಕ ಹುಡುಕಾಟಗಳನ್ನೆಲ್ಲಾ ತನ್ನ ವರ್ತನೆ, ದರ್ಶನ, ಕ್ರಿಯೆ, ಪ್ರತಿಕ್ರಿಯೆ, ಗಮನ, ವಿಚಾರದ ಪ್ರಕ್ರಿಯೆಗಳಲ್ಲಿ ಅಲ್ಲಲ್ಲಿಗೆ ಒಳನೋಟಗಳನ್ನು ಕಂಡುಕೊಳ್ಳುತ್ತಿರುತ್ತಾನೆ. ಅದು ಧೈರ್ಯ, ಶಾಂತಿ, ಸಮಾಧಾನ, ದೃಷ್ಟಿಯಾಗುತ್ತದೆ, ಊರುಗೋಲಾಗುತ್ತದೆ, ಹರಿಗೋಲಾಗುತ್ತದೆ.

ಸತ್ತೆನೆಂದೆನಬೇಡ ಸೋತೆನೆಂದೆನಬೇಡ
ಬತ್ತಿತೆನ್ನೊಳು ಸತ್ವದೂಟೆ ಎನಬೇಡ
ಮೃತ್ಯುವೆಂಬುದು ಒಂದು ತೆರೆಯಿಳಿತ ತೆರೆಯೇರು
ಮತ್ತೆ ತೋರ್ಪುದು ನಾಳೆ ಮಂಕುತಿಮ್ಮ.

ಹೀಗೆ ಸಾವನ್ನೂ ಎದುರಿಸುವಂತಹ ಸ್ಥೈರ್ಯ ಕೊಡಲು ಅಥವಾ ತಂದುಕೊಳ್ಳಲು ಮಂಕುತಿಮ್ಮ ಮುಂದಾಗುತ್ತಾನೆ.

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೇ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ.

ಈ ಕಗ್ಗ ನೇರವಾಗಿ ವಿಷಯವನ್ನು ತಿಳಿಸಿದಂತೆ ಎಲ್ಲಾ ಕಗ್ಗಗಳೂ ಸುಲಭವೇನಲ್ಲ. ಪದಪದಗಳು ಒಂದರಲ್ಲೊಂದು ಹೆಣೆದುಕೊಂಡು ಜಟಿಲವಾದ ಅಥವಾ ಕೇಳದಿರುವ ಪದಗಳಂತೆ ತೋರುವುದುಂಟು. ತತ್ಸಮ ತತ್ಭವ ಪದಗಳ ಅರಿವಿರಬೇಕು.

ಬದುಕೊಂದು ಕದನವೆಂದಂಜಿ ಬಿಟ್ಟೋಡುವನು
ಬಿದಿಯ ಬಾಯಿಗೆ ಕವಳವಾಗದುಳಿಯುವನೆ?

ಎಂದಾಗ ಕದನವು ಎಂದು ಅಂಜಿ ಎಂಬ ಪದಗಳಲ್ಲಿ ಸಂಧಿಕಾರ್ಯವಾಗಿರುವ ಅರಿವಿರಬೇಕು. ಬಿದಿ ಎಂಬುದು ವಿಧಿಯ ತತ್ಭವ ರೂಪ ಎಂದೂ ತಿಳಿದಿರಬೇಕು. ಹೀಗಾಗಿ ಕಗ್ಗ ಬಹುಜನಕ್ಕೆ ಕಬ್ಬಿಣದ ಕಡಲೆಯಾಗಿ ಚೆನ್ನಾಗಿ ಭಾಷೆ ಬಲ್ಲವರು ನಾಲಿಗೆಯನ್ನು ಹೊರಳಾಡಿಸುತ್ತಾ ಹೇಳುವಾಗ ಕೆಲವರಿಗೆ ಯಾವುದೋ ಮಂತ್ರವನ್ನು ಅಥವಾ ಟಂಗ್ ಟ್ವಿಸ್ಟರ್ ಕೇಳುತ್ತಿರುವಂತೆ ಅನ್ನಿಸಿದರೆ ಆಶ್ಚರ್ಯವೇನಿಲ್ಲ.

ಎಲ್ಲಾ ಕಗ್ಗಗಳೂ ಒಂದೇ ದೃಷ್ಟಿಕೋನವನ್ನು ಹೊಂದಿರುವುದಿಲ್ಲ. ಸಾಂದರ್ಭಿಕವಾಗಿ ಅವುಗಳು ಧ್ವನಿಸುತ್ತವೆ. ಎದೆಯನುಕ್ಕಾಗಿಸುತ ಮತಿಗದೆಯ ಪಿಡಿದು ನೀನೆದುರು ನಿಲೆ ಬಿದಿಯೊಲಿವ, ಅಂದರೆ ಮನಸ್ಸನ್ನು ಗಟ್ಟಿ ಮಾಡಿಕೊಂಡು ಕುಶಲತೆಯಿಂದ ನಿನಗೆ ಎದುರಾಗಿರುವ ವಿಧಿಯನ್ನು ಗೆಲ್ಲು ಎಂದು ಆತ್ಮಶಕ್ತಿಯ ಧೈರ್ಯ ಹೇಳುವ ಮಂಕುತಿಮ್ಮ, ಬದುಕು ಜಟಕಾಬಂಡಿ ವಿಧಿಯದರ ಸಾಹೇಬ ಮದುವೆಗೋ ಮಸಣಕೋ ಹೋಗೆಂದಕಡೆಗೋಡುತ್ತಿರಬೇಕು ಎನ್ನುವ ಹಣೆಬರಹವನ್ನು ಹಳಿಯಲಾರದ ಜಿಗುಪ್ಸೆಯೂ ಇದೆ. ಇವು ವಿರೋಧಾಭಾಸಗಳೇನಲ್ಲ. ಮಂಕುತಿಮ್ಮನ ಕಗ್ಗ ಒಂದು ವಿಚಾರಧಾರೆಯನ್ನು ಪ್ರತಿಪಾದಿಸಲು ಇಡೀ ಕೃತಿ ಕಟ್ಟಿಕೊಂಡಿರುವುದೇನಲ್ಲ.

ಒಂದು ಜೀವ, ಜೀವನದ ಪಥದಲ್ಲಿ ಎದುರಾಗುವ ಎಲ್ಲವನ್ನೂ ಹಾದು ಹೋಗುವುದು ಅನಿವಾರ್ಯವಾದ್ದರಿಂದ ಸಂದರ್ಭಾನುಸಾರ ಪ್ರಶ್ನೆಗಳಿಗೂ ಸಾಂದರ್ಭಿಕ ಉತ್ತರಗಳನ್ನು ಪಡೆದುಕೊಳ್ಳುತ್ತಾ ಹೋಗುವನು ಈ ಮಂಕುತಿಮ್ಮ.
ಒಂದು ಎಚ್ಚರಿಕೆ; ಮಂಕುತಿಮ್ಮನ ಕಗ್ಗವನ್ನು ಓದುವಾಗ ಪದಗಳು ಉಲ್ಲನ್ ಉಂಡೆ ಸಿಕ್ಕಾದಂತೆ ಕಂಡರೂ ಯಾರಾದರೂ ಕೊಟ್ಟಿರುವ ವಿವರಣೆಗಳನ್ನು ಮಾತ್ರ ಓದಬೇಡಿ. ಎಷ್ಟೋ ಬಾರಿ ಕೊಟ್ಟಿರುವ ವಿವರಣೆಗಳು ಕಗ್ಗದ ಅರ್ಥವನ್ನೇ ಸಂಕುಚಿತಗೊ ಳಿಸಿಬಿಟ್ಟಿರುತ್ತವೆ, ಉತ್ಪ್ರೇಕ್ಷೆಯಿಂದ ಕೂಡಿರುತ್ತವೆ, ಅರ್ಥ ವ್ಯತ್ಯಾಸವಾಗಿರುತ್ತದೆ. ವಿರೋಧಾರ್ಥಗಳು ಇರುವುದೂ ಉಂಟು. ಹಲಸನ್ನು ಬಿಡಿಸಿದಂತೆ ವಾಕ್ಯಗಳಲ್ಲಿರುವ ಪದಗಳನ್ನು ಬಿಡಿಸಿಕೊಂಡರೆ ಅರ್ಥವಾಗುವುದು. ಅರ್ಥವಾಗದಿದ್ದರೂ ಪರವಾಗಿಲ್ಲ, ತಾತ್ಪರ್ಯಗಳನ್ನು ಓದಿ ಅಪಾರ್ಥ ಮಾಡಿಕೊಳ್ಳಬಾರದೆಂಬುದಷ್ಟೇ ನನ್ನ ಕಾಳಜಿ.

ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು
ಹೊಟ್ಟೆ ಜೀರ್ಣಿಸುವಷ್ಟೇ; ಮಿಕ್ಕುದೆಲ್ಲ ಕಸ
ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು ?
ಮುಷ್ಟಿ ಪಿಷ್ಟವು ತಾನೇ? ಮಂಕುತಿಮ್ಮ.

ಮಂಕುತಿಮ್ಮನ ಕಗ್ಗವನ್ನು ಮೊದಲಿನಿಂದ ಪ್ರಾರಂಭಿಸಿ ಕೊನೆಗೆ ಮುಗಿಸಬೇಕೆಂದೇನಿಲ್ಲ. ಮಧ್ಯೆಮಧ್ಯೆ ತೆರೆದು ಕಂಡಿದ್ದನ್ನು ಓದಬಹುದು. ಅದು ನಮ್ಮರಿವಿಗೆ ಒದಗುವುದು. ಎಲ್ಲಾ ಒಪ್ಪಬೇಕೆಂದಿಲ್ಲ. ಬೇಕಾದ ಕಾಳುಗಳ ಆಯ್ದಾಯ್ದುಕೊಳ್ಳಬಹುದು. ಹೊಟ್ಟು ಮತ್ತು ಪೊಳ್ಳುಗಳಲ್ಲಿ ಗಟ್ಟಿ ಕಾಳುಗಳು ಇವೆ ಎಂಬುದಂತೂ ಸತ್ಯ. ಕಳೆದು ಹೋಗಿರುವ ಆ ತಲೆಮಾರಿನ ಬೇರುಗಳು ನಮ್ಮಲ್ಲಿ ಚಿಗುರನ್ನು ಮೂಡಿಸಲಾರವೇ?

ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು
ಹೊಸಯುಕ್ತಿ ಹಳೆತತ್ತ್ವದೊಡಗೂಡೆ ಧರ್ಮ
ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ
ಜಸವು ಜನಜೀವನಕೆ ಮಂಕುತಿಮ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...