Homeಮುಖಪುಟಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

ಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

- Advertisement -
- Advertisement -

ಅಕ್ಕಿಯೊಳಗನ್ನವನು ಮೊದಲಾರು ಕಂಡವನು
ಅಕ್ಕರದ ಬರಹಕ್ಕೆ ಮೊದಲಿಗನದಾರು?
ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ
ದಕ್ಕುವುದೇ ನಿನಗೆ ಜಸ ಮಂಕುತಿಮ್ಮ.

ಮಂಕುತಿಮ್ಮ ಎಂದು ದಡ್ಡನೊಬ್ಬನಿಗೆ ಅನ್ನುವಂತಹ ಮಾತೊಂದನ್ನು ಡಿವಿಜಿ ಜೀವರೂಪಕವನ್ನಾಗಿ ಆರಿಸಿಕೊಂಡಿದ್ದು ಆಕಸ್ಮಿಕವೂ ಅಲ್ಲ, ವಿಡಂಬನೆಯೂ ಅಲ್ಲ. ಜೀವಿ ಎಂಬ ಸೀಮಿತ ಭೌತಿಕ ಅಸ್ತಿತ್ವವು ಜೀವನ ಎಂಬ ಅನಂತ ಅಸ್ತಿತ್ವದ ಭಾಗವಾಗಿದ್ದು, ಅದನ್ನು ಅರಿಯಲು ತನ್ನ ತಾತ್ವಿಕತೆಯ ದೃಷ್ಟಿಯನ್ನು ವಿಸ್ತಾರಗೊಳಿಸಿಕೊಳ್ಳಲು ಮಂಕುತಿಮ್ಮ ಇಲ್ಲಿ ಮಾನುಷ ರೂಪಕವಾಗಿದ್ದಾನೆ.

ತಿಳಿದಿದ್ದೇನೆ ಎನ್ನುವ ಅಹಮಿನ ಭಾವಕ್ಕೆ ತಿಳಿಯದ ಅನಂತ ವಿಚಾರಗಳು, ಅಚ್ಚರಿಗಳು, ಗುಟ್ಟುಗಳು, ದಾರಿಗಳು, ನೋಟಗಳೆಲ್ಲಾ ಇದ್ದು, ತನಗೆ ಹೇಳಿಕೊಂಡರೆ ತಾನು, ನಿನಗೆ ಹೇಳಿದರೆ ನೀನು ಎನ್ನುವ ಹಾಗೆ ಮಂಕುತಿಮ್ಮ ಆತ್ಮಾವಲೋಕನಕ್ಕೂ ರೂಪಕವಾಗುತ್ತಾನೆ. ಎದುರಿಗೆ ಸಂವಾದಿಸುತ್ತಾ ಬೋಧನೆಯನ್ನು ಸ್ವೀಕರಿಸುತ್ತಿರುವ ವ್ಯಕ್ತಿಯಾಗಿಯೂ ಸಂಕೇತವಾಗುತ್ತಾನೆ. ಒಟ್ಟಾರೆ ಒಂದು ಮಾನುಷ ಪರಿಮಿತಿಯ ಗ್ರಹಿಕೆ ಮತ್ತು ಅರಿವನ್ನು ಪರಸ್ಪರ ಹಂಚಿಕೊಳ್ಳುವ ಪ್ರತಿಮೆ ಮಂಕುತಿಮ್ಮ.

“ಕಲೆಗಳಲಿ ಪರಮ ಕಲೆ ಜೀವನದ ಲಲಿತಕಲೆ” ಎನ್ನುವ ಮಂಕುತಿಮ್ಮ ತನ್ನೆಲ್ಲಾ ತಾತ್ವಿಕ, ನೈತಿಕ, ಪಾರಮಾರ್ಥಿಕ ಹುಡುಕಾಟಗಳನ್ನೆಲ್ಲಾ ತನ್ನ ವರ್ತನೆ, ದರ್ಶನ, ಕ್ರಿಯೆ, ಪ್ರತಿಕ್ರಿಯೆ, ಗಮನ, ವಿಚಾರದ ಪ್ರಕ್ರಿಯೆಗಳಲ್ಲಿ ಅಲ್ಲಲ್ಲಿಗೆ ಒಳನೋಟಗಳನ್ನು ಕಂಡುಕೊಳ್ಳುತ್ತಿರುತ್ತಾನೆ. ಅದು ಧೈರ್ಯ, ಶಾಂತಿ, ಸಮಾಧಾನ, ದೃಷ್ಟಿಯಾಗುತ್ತದೆ, ಊರುಗೋಲಾಗುತ್ತದೆ, ಹರಿಗೋಲಾಗುತ್ತದೆ.

ಸತ್ತೆನೆಂದೆನಬೇಡ ಸೋತೆನೆಂದೆನಬೇಡ
ಬತ್ತಿತೆನ್ನೊಳು ಸತ್ವದೂಟೆ ಎನಬೇಡ
ಮೃತ್ಯುವೆಂಬುದು ಒಂದು ತೆರೆಯಿಳಿತ ತೆರೆಯೇರು
ಮತ್ತೆ ತೋರ್ಪುದು ನಾಳೆ ಮಂಕುತಿಮ್ಮ.

ಹೀಗೆ ಸಾವನ್ನೂ ಎದುರಿಸುವಂತಹ ಸ್ಥೈರ್ಯ ಕೊಡಲು ಅಥವಾ ತಂದುಕೊಳ್ಳಲು ಮಂಕುತಿಮ್ಮ ಮುಂದಾಗುತ್ತಾನೆ.

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೇ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ.

ಈ ಕಗ್ಗ ನೇರವಾಗಿ ವಿಷಯವನ್ನು ತಿಳಿಸಿದಂತೆ ಎಲ್ಲಾ ಕಗ್ಗಗಳೂ ಸುಲಭವೇನಲ್ಲ. ಪದಪದಗಳು ಒಂದರಲ್ಲೊಂದು ಹೆಣೆದುಕೊಂಡು ಜಟಿಲವಾದ ಅಥವಾ ಕೇಳದಿರುವ ಪದಗಳಂತೆ ತೋರುವುದುಂಟು. ತತ್ಸಮ ತತ್ಭವ ಪದಗಳ ಅರಿವಿರಬೇಕು.

ಬದುಕೊಂದು ಕದನವೆಂದಂಜಿ ಬಿಟ್ಟೋಡುವನು
ಬಿದಿಯ ಬಾಯಿಗೆ ಕವಳವಾಗದುಳಿಯುವನೆ?

ಎಂದಾಗ ಕದನವು ಎಂದು ಅಂಜಿ ಎಂಬ ಪದಗಳಲ್ಲಿ ಸಂಧಿಕಾರ್ಯವಾಗಿರುವ ಅರಿವಿರಬೇಕು. ಬಿದಿ ಎಂಬುದು ವಿಧಿಯ ತತ್ಭವ ರೂಪ ಎಂದೂ ತಿಳಿದಿರಬೇಕು. ಹೀಗಾಗಿ ಕಗ್ಗ ಬಹುಜನಕ್ಕೆ ಕಬ್ಬಿಣದ ಕಡಲೆಯಾಗಿ ಚೆನ್ನಾಗಿ ಭಾಷೆ ಬಲ್ಲವರು ನಾಲಿಗೆಯನ್ನು ಹೊರಳಾಡಿಸುತ್ತಾ ಹೇಳುವಾಗ ಕೆಲವರಿಗೆ ಯಾವುದೋ ಮಂತ್ರವನ್ನು ಅಥವಾ ಟಂಗ್ ಟ್ವಿಸ್ಟರ್ ಕೇಳುತ್ತಿರುವಂತೆ ಅನ್ನಿಸಿದರೆ ಆಶ್ಚರ್ಯವೇನಿಲ್ಲ.

ಎಲ್ಲಾ ಕಗ್ಗಗಳೂ ಒಂದೇ ದೃಷ್ಟಿಕೋನವನ್ನು ಹೊಂದಿರುವುದಿಲ್ಲ. ಸಾಂದರ್ಭಿಕವಾಗಿ ಅವುಗಳು ಧ್ವನಿಸುತ್ತವೆ. ಎದೆಯನುಕ್ಕಾಗಿಸುತ ಮತಿಗದೆಯ ಪಿಡಿದು ನೀನೆದುರು ನಿಲೆ ಬಿದಿಯೊಲಿವ, ಅಂದರೆ ಮನಸ್ಸನ್ನು ಗಟ್ಟಿ ಮಾಡಿಕೊಂಡು ಕುಶಲತೆಯಿಂದ ನಿನಗೆ ಎದುರಾಗಿರುವ ವಿಧಿಯನ್ನು ಗೆಲ್ಲು ಎಂದು ಆತ್ಮಶಕ್ತಿಯ ಧೈರ್ಯ ಹೇಳುವ ಮಂಕುತಿಮ್ಮ, ಬದುಕು ಜಟಕಾಬಂಡಿ ವಿಧಿಯದರ ಸಾಹೇಬ ಮದುವೆಗೋ ಮಸಣಕೋ ಹೋಗೆಂದಕಡೆಗೋಡುತ್ತಿರಬೇಕು ಎನ್ನುವ ಹಣೆಬರಹವನ್ನು ಹಳಿಯಲಾರದ ಜಿಗುಪ್ಸೆಯೂ ಇದೆ. ಇವು ವಿರೋಧಾಭಾಸಗಳೇನಲ್ಲ. ಮಂಕುತಿಮ್ಮನ ಕಗ್ಗ ಒಂದು ವಿಚಾರಧಾರೆಯನ್ನು ಪ್ರತಿಪಾದಿಸಲು ಇಡೀ ಕೃತಿ ಕಟ್ಟಿಕೊಂಡಿರುವುದೇನಲ್ಲ.

ಒಂದು ಜೀವ, ಜೀವನದ ಪಥದಲ್ಲಿ ಎದುರಾಗುವ ಎಲ್ಲವನ್ನೂ ಹಾದು ಹೋಗುವುದು ಅನಿವಾರ್ಯವಾದ್ದರಿಂದ ಸಂದರ್ಭಾನುಸಾರ ಪ್ರಶ್ನೆಗಳಿಗೂ ಸಾಂದರ್ಭಿಕ ಉತ್ತರಗಳನ್ನು ಪಡೆದುಕೊಳ್ಳುತ್ತಾ ಹೋಗುವನು ಈ ಮಂಕುತಿಮ್ಮ.
ಒಂದು ಎಚ್ಚರಿಕೆ; ಮಂಕುತಿಮ್ಮನ ಕಗ್ಗವನ್ನು ಓದುವಾಗ ಪದಗಳು ಉಲ್ಲನ್ ಉಂಡೆ ಸಿಕ್ಕಾದಂತೆ ಕಂಡರೂ ಯಾರಾದರೂ ಕೊಟ್ಟಿರುವ ವಿವರಣೆಗಳನ್ನು ಮಾತ್ರ ಓದಬೇಡಿ. ಎಷ್ಟೋ ಬಾರಿ ಕೊಟ್ಟಿರುವ ವಿವರಣೆಗಳು ಕಗ್ಗದ ಅರ್ಥವನ್ನೇ ಸಂಕುಚಿತಗೊ ಳಿಸಿಬಿಟ್ಟಿರುತ್ತವೆ, ಉತ್ಪ್ರೇಕ್ಷೆಯಿಂದ ಕೂಡಿರುತ್ತವೆ, ಅರ್ಥ ವ್ಯತ್ಯಾಸವಾಗಿರುತ್ತದೆ. ವಿರೋಧಾರ್ಥಗಳು ಇರುವುದೂ ಉಂಟು. ಹಲಸನ್ನು ಬಿಡಿಸಿದಂತೆ ವಾಕ್ಯಗಳಲ್ಲಿರುವ ಪದಗಳನ್ನು ಬಿಡಿಸಿಕೊಂಡರೆ ಅರ್ಥವಾಗುವುದು. ಅರ್ಥವಾಗದಿದ್ದರೂ ಪರವಾಗಿಲ್ಲ, ತಾತ್ಪರ್ಯಗಳನ್ನು ಓದಿ ಅಪಾರ್ಥ ಮಾಡಿಕೊಳ್ಳಬಾರದೆಂಬುದಷ್ಟೇ ನನ್ನ ಕಾಳಜಿ.

ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು
ಹೊಟ್ಟೆ ಜೀರ್ಣಿಸುವಷ್ಟೇ; ಮಿಕ್ಕುದೆಲ್ಲ ಕಸ
ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು ?
ಮುಷ್ಟಿ ಪಿಷ್ಟವು ತಾನೇ? ಮಂಕುತಿಮ್ಮ.

ಮಂಕುತಿಮ್ಮನ ಕಗ್ಗವನ್ನು ಮೊದಲಿನಿಂದ ಪ್ರಾರಂಭಿಸಿ ಕೊನೆಗೆ ಮುಗಿಸಬೇಕೆಂದೇನಿಲ್ಲ. ಮಧ್ಯೆಮಧ್ಯೆ ತೆರೆದು ಕಂಡಿದ್ದನ್ನು ಓದಬಹುದು. ಅದು ನಮ್ಮರಿವಿಗೆ ಒದಗುವುದು. ಎಲ್ಲಾ ಒಪ್ಪಬೇಕೆಂದಿಲ್ಲ. ಬೇಕಾದ ಕಾಳುಗಳ ಆಯ್ದಾಯ್ದುಕೊಳ್ಳಬಹುದು. ಹೊಟ್ಟು ಮತ್ತು ಪೊಳ್ಳುಗಳಲ್ಲಿ ಗಟ್ಟಿ ಕಾಳುಗಳು ಇವೆ ಎಂಬುದಂತೂ ಸತ್ಯ. ಕಳೆದು ಹೋಗಿರುವ ಆ ತಲೆಮಾರಿನ ಬೇರುಗಳು ನಮ್ಮಲ್ಲಿ ಚಿಗುರನ್ನು ಮೂಡಿಸಲಾರವೇ?

ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು
ಹೊಸಯುಕ್ತಿ ಹಳೆತತ್ತ್ವದೊಡಗೂಡೆ ಧರ್ಮ
ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ
ಜಸವು ಜನಜೀವನಕೆ ಮಂಕುತಿಮ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...