Homeಮುಖಪುಟಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

ಮಂಕುತಿಮ್ಮನ ಕಗ್ಗ ಡಿ. ವಿ .ಗುಂಡಪ್ಪ

- Advertisement -
- Advertisement -

ಅಕ್ಕಿಯೊಳಗನ್ನವನು ಮೊದಲಾರು ಕಂಡವನು
ಅಕ್ಕರದ ಬರಹಕ್ಕೆ ಮೊದಲಿಗನದಾರು?
ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ
ದಕ್ಕುವುದೇ ನಿನಗೆ ಜಸ ಮಂಕುತಿಮ್ಮ.

ಮಂಕುತಿಮ್ಮ ಎಂದು ದಡ್ಡನೊಬ್ಬನಿಗೆ ಅನ್ನುವಂತಹ ಮಾತೊಂದನ್ನು ಡಿವಿಜಿ ಜೀವರೂಪಕವನ್ನಾಗಿ ಆರಿಸಿಕೊಂಡಿದ್ದು ಆಕಸ್ಮಿಕವೂ ಅಲ್ಲ, ವಿಡಂಬನೆಯೂ ಅಲ್ಲ. ಜೀವಿ ಎಂಬ ಸೀಮಿತ ಭೌತಿಕ ಅಸ್ತಿತ್ವವು ಜೀವನ ಎಂಬ ಅನಂತ ಅಸ್ತಿತ್ವದ ಭಾಗವಾಗಿದ್ದು, ಅದನ್ನು ಅರಿಯಲು ತನ್ನ ತಾತ್ವಿಕತೆಯ ದೃಷ್ಟಿಯನ್ನು ವಿಸ್ತಾರಗೊಳಿಸಿಕೊಳ್ಳಲು ಮಂಕುತಿಮ್ಮ ಇಲ್ಲಿ ಮಾನುಷ ರೂಪಕವಾಗಿದ್ದಾನೆ.

ತಿಳಿದಿದ್ದೇನೆ ಎನ್ನುವ ಅಹಮಿನ ಭಾವಕ್ಕೆ ತಿಳಿಯದ ಅನಂತ ವಿಚಾರಗಳು, ಅಚ್ಚರಿಗಳು, ಗುಟ್ಟುಗಳು, ದಾರಿಗಳು, ನೋಟಗಳೆಲ್ಲಾ ಇದ್ದು, ತನಗೆ ಹೇಳಿಕೊಂಡರೆ ತಾನು, ನಿನಗೆ ಹೇಳಿದರೆ ನೀನು ಎನ್ನುವ ಹಾಗೆ ಮಂಕುತಿಮ್ಮ ಆತ್ಮಾವಲೋಕನಕ್ಕೂ ರೂಪಕವಾಗುತ್ತಾನೆ. ಎದುರಿಗೆ ಸಂವಾದಿಸುತ್ತಾ ಬೋಧನೆಯನ್ನು ಸ್ವೀಕರಿಸುತ್ತಿರುವ ವ್ಯಕ್ತಿಯಾಗಿಯೂ ಸಂಕೇತವಾಗುತ್ತಾನೆ. ಒಟ್ಟಾರೆ ಒಂದು ಮಾನುಷ ಪರಿಮಿತಿಯ ಗ್ರಹಿಕೆ ಮತ್ತು ಅರಿವನ್ನು ಪರಸ್ಪರ ಹಂಚಿಕೊಳ್ಳುವ ಪ್ರತಿಮೆ ಮಂಕುತಿಮ್ಮ.

“ಕಲೆಗಳಲಿ ಪರಮ ಕಲೆ ಜೀವನದ ಲಲಿತಕಲೆ” ಎನ್ನುವ ಮಂಕುತಿಮ್ಮ ತನ್ನೆಲ್ಲಾ ತಾತ್ವಿಕ, ನೈತಿಕ, ಪಾರಮಾರ್ಥಿಕ ಹುಡುಕಾಟಗಳನ್ನೆಲ್ಲಾ ತನ್ನ ವರ್ತನೆ, ದರ್ಶನ, ಕ್ರಿಯೆ, ಪ್ರತಿಕ್ರಿಯೆ, ಗಮನ, ವಿಚಾರದ ಪ್ರಕ್ರಿಯೆಗಳಲ್ಲಿ ಅಲ್ಲಲ್ಲಿಗೆ ಒಳನೋಟಗಳನ್ನು ಕಂಡುಕೊಳ್ಳುತ್ತಿರುತ್ತಾನೆ. ಅದು ಧೈರ್ಯ, ಶಾಂತಿ, ಸಮಾಧಾನ, ದೃಷ್ಟಿಯಾಗುತ್ತದೆ, ಊರುಗೋಲಾಗುತ್ತದೆ, ಹರಿಗೋಲಾಗುತ್ತದೆ.

ಸತ್ತೆನೆಂದೆನಬೇಡ ಸೋತೆನೆಂದೆನಬೇಡ
ಬತ್ತಿತೆನ್ನೊಳು ಸತ್ವದೂಟೆ ಎನಬೇಡ
ಮೃತ್ಯುವೆಂಬುದು ಒಂದು ತೆರೆಯಿಳಿತ ತೆರೆಯೇರು
ಮತ್ತೆ ತೋರ್ಪುದು ನಾಳೆ ಮಂಕುತಿಮ್ಮ.

ಹೀಗೆ ಸಾವನ್ನೂ ಎದುರಿಸುವಂತಹ ಸ್ಥೈರ್ಯ ಕೊಡಲು ಅಥವಾ ತಂದುಕೊಳ್ಳಲು ಮಂಕುತಿಮ್ಮ ಮುಂದಾಗುತ್ತಾನೆ.

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೇ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ.

ಈ ಕಗ್ಗ ನೇರವಾಗಿ ವಿಷಯವನ್ನು ತಿಳಿಸಿದಂತೆ ಎಲ್ಲಾ ಕಗ್ಗಗಳೂ ಸುಲಭವೇನಲ್ಲ. ಪದಪದಗಳು ಒಂದರಲ್ಲೊಂದು ಹೆಣೆದುಕೊಂಡು ಜಟಿಲವಾದ ಅಥವಾ ಕೇಳದಿರುವ ಪದಗಳಂತೆ ತೋರುವುದುಂಟು. ತತ್ಸಮ ತತ್ಭವ ಪದಗಳ ಅರಿವಿರಬೇಕು.

ಬದುಕೊಂದು ಕದನವೆಂದಂಜಿ ಬಿಟ್ಟೋಡುವನು
ಬಿದಿಯ ಬಾಯಿಗೆ ಕವಳವಾಗದುಳಿಯುವನೆ?

ಎಂದಾಗ ಕದನವು ಎಂದು ಅಂಜಿ ಎಂಬ ಪದಗಳಲ್ಲಿ ಸಂಧಿಕಾರ್ಯವಾಗಿರುವ ಅರಿವಿರಬೇಕು. ಬಿದಿ ಎಂಬುದು ವಿಧಿಯ ತತ್ಭವ ರೂಪ ಎಂದೂ ತಿಳಿದಿರಬೇಕು. ಹೀಗಾಗಿ ಕಗ್ಗ ಬಹುಜನಕ್ಕೆ ಕಬ್ಬಿಣದ ಕಡಲೆಯಾಗಿ ಚೆನ್ನಾಗಿ ಭಾಷೆ ಬಲ್ಲವರು ನಾಲಿಗೆಯನ್ನು ಹೊರಳಾಡಿಸುತ್ತಾ ಹೇಳುವಾಗ ಕೆಲವರಿಗೆ ಯಾವುದೋ ಮಂತ್ರವನ್ನು ಅಥವಾ ಟಂಗ್ ಟ್ವಿಸ್ಟರ್ ಕೇಳುತ್ತಿರುವಂತೆ ಅನ್ನಿಸಿದರೆ ಆಶ್ಚರ್ಯವೇನಿಲ್ಲ.

ಎಲ್ಲಾ ಕಗ್ಗಗಳೂ ಒಂದೇ ದೃಷ್ಟಿಕೋನವನ್ನು ಹೊಂದಿರುವುದಿಲ್ಲ. ಸಾಂದರ್ಭಿಕವಾಗಿ ಅವುಗಳು ಧ್ವನಿಸುತ್ತವೆ. ಎದೆಯನುಕ್ಕಾಗಿಸುತ ಮತಿಗದೆಯ ಪಿಡಿದು ನೀನೆದುರು ನಿಲೆ ಬಿದಿಯೊಲಿವ, ಅಂದರೆ ಮನಸ್ಸನ್ನು ಗಟ್ಟಿ ಮಾಡಿಕೊಂಡು ಕುಶಲತೆಯಿಂದ ನಿನಗೆ ಎದುರಾಗಿರುವ ವಿಧಿಯನ್ನು ಗೆಲ್ಲು ಎಂದು ಆತ್ಮಶಕ್ತಿಯ ಧೈರ್ಯ ಹೇಳುವ ಮಂಕುತಿಮ್ಮ, ಬದುಕು ಜಟಕಾಬಂಡಿ ವಿಧಿಯದರ ಸಾಹೇಬ ಮದುವೆಗೋ ಮಸಣಕೋ ಹೋಗೆಂದಕಡೆಗೋಡುತ್ತಿರಬೇಕು ಎನ್ನುವ ಹಣೆಬರಹವನ್ನು ಹಳಿಯಲಾರದ ಜಿಗುಪ್ಸೆಯೂ ಇದೆ. ಇವು ವಿರೋಧಾಭಾಸಗಳೇನಲ್ಲ. ಮಂಕುತಿಮ್ಮನ ಕಗ್ಗ ಒಂದು ವಿಚಾರಧಾರೆಯನ್ನು ಪ್ರತಿಪಾದಿಸಲು ಇಡೀ ಕೃತಿ ಕಟ್ಟಿಕೊಂಡಿರುವುದೇನಲ್ಲ.

ಒಂದು ಜೀವ, ಜೀವನದ ಪಥದಲ್ಲಿ ಎದುರಾಗುವ ಎಲ್ಲವನ್ನೂ ಹಾದು ಹೋಗುವುದು ಅನಿವಾರ್ಯವಾದ್ದರಿಂದ ಸಂದರ್ಭಾನುಸಾರ ಪ್ರಶ್ನೆಗಳಿಗೂ ಸಾಂದರ್ಭಿಕ ಉತ್ತರಗಳನ್ನು ಪಡೆದುಕೊಳ್ಳುತ್ತಾ ಹೋಗುವನು ಈ ಮಂಕುತಿಮ್ಮ.
ಒಂದು ಎಚ್ಚರಿಕೆ; ಮಂಕುತಿಮ್ಮನ ಕಗ್ಗವನ್ನು ಓದುವಾಗ ಪದಗಳು ಉಲ್ಲನ್ ಉಂಡೆ ಸಿಕ್ಕಾದಂತೆ ಕಂಡರೂ ಯಾರಾದರೂ ಕೊಟ್ಟಿರುವ ವಿವರಣೆಗಳನ್ನು ಮಾತ್ರ ಓದಬೇಡಿ. ಎಷ್ಟೋ ಬಾರಿ ಕೊಟ್ಟಿರುವ ವಿವರಣೆಗಳು ಕಗ್ಗದ ಅರ್ಥವನ್ನೇ ಸಂಕುಚಿತಗೊ ಳಿಸಿಬಿಟ್ಟಿರುತ್ತವೆ, ಉತ್ಪ್ರೇಕ್ಷೆಯಿಂದ ಕೂಡಿರುತ್ತವೆ, ಅರ್ಥ ವ್ಯತ್ಯಾಸವಾಗಿರುತ್ತದೆ. ವಿರೋಧಾರ್ಥಗಳು ಇರುವುದೂ ಉಂಟು. ಹಲಸನ್ನು ಬಿಡಿಸಿದಂತೆ ವಾಕ್ಯಗಳಲ್ಲಿರುವ ಪದಗಳನ್ನು ಬಿಡಿಸಿಕೊಂಡರೆ ಅರ್ಥವಾಗುವುದು. ಅರ್ಥವಾಗದಿದ್ದರೂ ಪರವಾಗಿಲ್ಲ, ತಾತ್ಪರ್ಯಗಳನ್ನು ಓದಿ ಅಪಾರ್ಥ ಮಾಡಿಕೊಳ್ಳಬಾರದೆಂಬುದಷ್ಟೇ ನನ್ನ ಕಾಳಜಿ.

ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು
ಹೊಟ್ಟೆ ಜೀರ್ಣಿಸುವಷ್ಟೇ; ಮಿಕ್ಕುದೆಲ್ಲ ಕಸ
ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು ?
ಮುಷ್ಟಿ ಪಿಷ್ಟವು ತಾನೇ? ಮಂಕುತಿಮ್ಮ.

ಮಂಕುತಿಮ್ಮನ ಕಗ್ಗವನ್ನು ಮೊದಲಿನಿಂದ ಪ್ರಾರಂಭಿಸಿ ಕೊನೆಗೆ ಮುಗಿಸಬೇಕೆಂದೇನಿಲ್ಲ. ಮಧ್ಯೆಮಧ್ಯೆ ತೆರೆದು ಕಂಡಿದ್ದನ್ನು ಓದಬಹುದು. ಅದು ನಮ್ಮರಿವಿಗೆ ಒದಗುವುದು. ಎಲ್ಲಾ ಒಪ್ಪಬೇಕೆಂದಿಲ್ಲ. ಬೇಕಾದ ಕಾಳುಗಳ ಆಯ್ದಾಯ್ದುಕೊಳ್ಳಬಹುದು. ಹೊಟ್ಟು ಮತ್ತು ಪೊಳ್ಳುಗಳಲ್ಲಿ ಗಟ್ಟಿ ಕಾಳುಗಳು ಇವೆ ಎಂಬುದಂತೂ ಸತ್ಯ. ಕಳೆದು ಹೋಗಿರುವ ಆ ತಲೆಮಾರಿನ ಬೇರುಗಳು ನಮ್ಮಲ್ಲಿ ಚಿಗುರನ್ನು ಮೂಡಿಸಲಾರವೇ?

ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು
ಹೊಸಯುಕ್ತಿ ಹಳೆತತ್ತ್ವದೊಡಗೂಡೆ ಧರ್ಮ
ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ
ಜಸವು ಜನಜೀವನಕೆ ಮಂಕುತಿಮ್ಮ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...