Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...