Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...