Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...