Homeಕರ್ನಾಟಕವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ -...

ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಎಚ್‌ಡಿಕೆ ಅಳುತ್ತಾರೆ: ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವುದಿಲ್ಲ – ಏನಿದು ಜಟಾಪಟಿ

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸದಾನಂದಗೌಡರ ನಡುವೆ ಕಣ್ಣೀರಿನ ವಿಚಾರಕ್ಕೆ ಪರಸ್ಪರ ಆರೋಪ ಪ್ರತ್ಯಾರೋಪ..

- Advertisement -
- Advertisement -

ಎಷ್ಟು ಜನ ಬಡವರು ನಿಮ್ಮ ಮನೆ ಹತ್ರ ಬಂದಿದ್ದಾರೆ ಸದಾನಂದಗೌಡರೇ? ಎಷ್ಟು ಜನರ ನೋವಿಗೆ ನೀವು ಸ್ಪಂದಿಸಿದ್ದೀರಿ? ಬನ್ನಿ ನಮ್ಮ ಮನೆ ಹತ್ತಿರ ನೋಡಿ ಎಷ್ಟು ಜನ ಹಸಿದುಕೊಂಡು ಬರುತ್ತಾರೆ ಅಂತ. ಇಲ್ಲ ನಿಮ್ಮ ಕೇಂದ್ರದ ಗೂಢಚಾರರನ್ನು ಕಳಿಸಿ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಎಂಬುದು ಸದಾನಂದಗೌಡರಿಗೆ ಎಲ್ಲಿ ಗೊತ್ತಿದೆ. ನಮ್ಮಲ್ಲಿ ನೂರು ದಿನದ ನಾಟಕ, ಇನ್ನೂರು ದಿನದ ನಾಟಕ ಎಂದು ಹೇಳುತ್ತಾರೆ. ಹೌದು ನೀವು ಬಂದಿರುವುದೇ ನಾಟಕ ಆಡುವ ಕಡೆಯಿಂದ. ಕಲಾವಿದರ ಬಗ್ಗೆ ನಾನು ಅಗೌರವ ತೋರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾನು ವಿಕ್ಸು, ಗ್ಲಿಸರಿನ್‌ ಹಚ್ಚಿಕೊಂಡು ಅಳುವುದಿಲ್ಲ. ಬಡವರ ಕಣ್ಣೀರು ನೋಡಿದೊಡನೆಯೇ ನನಗೂ ಕಣ್ಣೀರು ಸುರಿಸುತ್ತೇನೆ. ನಮ್ಮ ಹೃದಯದ ನೋವನ್ನು ಅಳುವಿನ ಮೂಲಕ ಹೊರಹಾಕುತ್ತೇನೆ. ಇದು ಡ್ರಾಮ ಕಣ್ಣೀರು ಅಲ್ಲ. ನಮ್ಮದು ಭಾವನಾತ್ಮಕ ಜೀವನ. ಅದು ನಮ್ಮ ಕುಟುಂಬದಿಂದಲೇ ಬಂದಿರುವ ರೂಢಿ. ಅದನ್ನು ನಮ್ಮ ಕುಟುಂಬದ ಪೆಟೇಂಟ್‌ ಎಂದೇ ಹೇಳುತ್ತೇನೆ ಎಂದು ಭಾವುಕರಾಗಿ ಎಚ್‌ಡಿಕೆ ಮಾತನಾಡಿದ್ದಾರೆ.

ಸದಾನಂದಗೌಡರ ಥರ ಎಲ್ಲದಕ್ಕೂ ನಾನು ಹಲ್ಲುಬಿಟ್ಟುಕೊಂಡು ನಿಂತುಕೊಳ್ಳುವವನಲ್ಲ ನಾನು. ಅವರಿಂದ ಪಾಠ ಕಲಿಯಬೇಕಾಗಿಲ್ಲ. ಪ್ರವಾಹದಲ್ಲಿ 22 ಜಿಲ್ಲೆಗಳು ಸಂಕಷ್ಟದಿಂದ ಇವೆ. ದೇವೇಗೌಡರ, ಕುಮಾರಸ್ವಾಮಿಯವರ ಕಣ್ಣೀರಿನಿಂದ ಇನ್ನುಳಿದ ಜಿಲ್ಲೆಗಳು ಮುಳಗದಿರಲಿ ಎಂದು ಅಪಹಾಸ್ಯ ಮಾಡಿದ್ದಾರೆ. ಅವರು ಎಷ್ಟು ಕಡೆ ಹೋಗಿ ಜನರ ಕಷ್ಟ ಕೇಳಿದ್ದಾರೆ? ನಿಮ್ಮ ಯೋಗ್ಯತೆಗೆ

ದೀಪಾವಳಿ ಹಬ್ಬ, ಗಣೇಶನ ಹಬ್ಬ ಮಾಡದೇ ಪರದಾಡುತ್ತಿದ್ದಾರೆ. ನಾನು ಹೋಗಿದ್ದೇನೆ. ಲಿಂಗಾಯಿತ ಸಮಾಜದ ಒಂದೂವರೆ ತಿಂಗಳ ಮಗು, ವಿಧವೆ ತಾಯಿ ಸಂಕಷ್ಟದಿಂದ ಇದ್ದರು. ನಾನು 2 ಲಕ್ಷ ದುಡ್ಡು ಕೊಟ್ಟು ಬಂದಿದ್ದೇನೆ.

ಸದಾನಂದಗೌಡರು ಈ ಮೊದಲು “ಗ್ಲಿಸರಿನ್‌ ಮತ್ತು ವಿಕ್ಸ್‌ ಹಂಚಿಕೊಂಡು ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ. ಇದು ಅವರ ಕುಟುಂಬದ ಹುಟ್ಟು ಗುಣ. ಇ ಬಗ್ಗೆ ಅವರ ಜೊತೆ ಇದ್ದ ಜಮೀರ್‌ ಚೆನ್ನಾಗಿ ಹೇಳಿದ್ದಾರೆ. ಅದು ವಿಕ್ಸ್‌ ಕಣ್ಣೀರು, ಜನ ಇದನ್ನೆಲ್ಲಾ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ಕಣ್ಣೀರ ಪ್ರವಾಹ ಡೇಂಜರಸ್‌ ಪ್ರವಾಹ. ಎಷ್ಟು ದಿನ ನಾಟಕ ಮಾಡುತ್ತಾರೆ. ಹಿಂದೆ ನೂರು ದಿನ, ಇನ್ನೂರು ದಿನ ನಾಟಕ ನೋಡುತ್ತಿದ್ದರು. ಈಗ ಅವರ ನಾಟಕ ನಡೆಯುವುದಿಲ್ಲ. ದೇವೇಗೌಡರು ನಂತರ ಕುಮಾರಸ್ವಾಮಿ ಮುಂದೆ ನಿಖಿಲ್‌ ಕೂಡ ಇದೇ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...