Homeಎಕಾನಮಿಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

ಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

- Advertisement -
- Advertisement -

ಇದೇ ಸೆಪ್ಟಂಬರ್ 30ಕ್ಕೆ ತ್ರೈಮಾಸಿಕ ಅವಧಿ ಮುಕ್ತಾಯಗೊಳ್ಳಲಿದ್ದು, ಟೆಲಿಕಾಂ ಕಂಪನಿಗಳು ಸುಂಕ ಹೆಚ್ಚಿಸಲು ನಿರ್ಧರಿಸಲಿವೆ. ತ್ರೈಮಾಸಿಕ ಅವಧಿಯಲ್ಲಿ ಕಂಪನಿಗಳು ದಾಖಲೆಯ ನಷ್ಟ ಅನುಭವಿಸಿದ್ದರಿಂದ ಸುಂಕ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ಡಿಸೆಂಬರ್ 1ರಿಂದ ಸುಂಕ ಹೆಚ್ಚಳ ಗ್ರಾಹಕರಿಗೆ ಅನ್ವಯವಾಗಲಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಸುಂಕ ಹೆಚ್ಚಳವಾಗಲಿದೆ ಎಂಬುದನ್ನು ಕಂಪನಿಗಳು ಉಲ್ಲೇಖಿಸಿಲ್ಲ.

ವೊಡಾಫೋನ್, ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂ ಕಂಪನಿಗಳು ನಿರ್ಧಾರ ಪ್ರಕಟಿಸಿವೆ. ಡಿಸೆಂಬರ್ 1 ರಿಂದ ಮೊಬೈಲ್ ಫೋನ್ ಕರೆ ಮತ್ತು ಡೇಟಾ ಶುಲ್ಕ ಹೆಚ್ಚಳವಾಗಲಿದೆ. ಇದು ವ್ಯವಹಾರದಲ್ಲಿ ಉಂಟಾಗಿರುವ ನಷ್ಟವನ್ನು ಭರಿಸಲು ಸಹಕಾರಿಯಾಗಲಿದೆ ಎಂದು ಕಂಪನಿಗಳು ತಿಳಿಸಿವೆ. ಕಳೆದ ಶುಕ್ರವಾರ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್, ಐಡಿಯಾ ದಾಖಲೆಯ ನಷ್ಟ ಅನುಭವಿಸಿರುವುದು ವರದಿಯಾಗಿದೆ. ವೊಡಾಫೋನ್, ಐಡಿಯಾದ ನಿವ್ವಳ ನಷ್ಟ ಮೂರು ತಿಂಗಳ ಅವಧಿಯಲ್ಲಿ 50,921.9 ಕೋಟಿ ರೂ. ಆಗಿದೆ. ಇದು ಭಾರತದ ಕಾರ್ಪೊರೇಟ್ ಇತಿಹಾಸದಲ್ಲೇ ಅತಿದೊಡ್ಡ ತ್ರೈಮಾಸಿಕ ನಷ್ಟವಾಗಿದೆ.

ಒಟ್ಟು ಆದಾಯ (ಎಜಿಆರ್)ದಲ್ಲಿ ಟೆಲಿಕಾಂ ಇಲಾಖೆಗೆ ನೀಡಬೇಕಿದ್ದ ಬಾಕಿಗಳನ್ನು ಸರಿಪಡಿಸಲು ಮತ್ತು ನಿಬಂಧನೆಗಳ ಪಾಲನೆ ಹಿನ್ನೆಲೆ ಸೆಪ್ಟಂಬರ್ 30ರಂದು ತ್ರೈಮಾಸಿಕ ಕೊನೆಗೊಂಡ ನಂತರ ಸುಂಕ ಹೆಚ್ಚಿಸುವುದಾಗಿ ತಿಳಿಸಿವೆ. ಅಲ್ಲದೇ ಸುಂಕ ಹೆಚ್ಚಳದಿಂದ ಟೆಲಿಕಾಂ ಉದ್ಯಮದಲ್ಲಿ ಲಾಭ ತರಬಹುದು. ಉದ್ಯಮದಲ್ಲಿ ಹೆಚ್ಚಿರುವ ಸ್ಪರ್ಧೆಯನ್ನು ಎದುರಿಸಲು ಮತ್ತು ಲಾಭದತ್ತ ಸಾಗಲು ಸುಂಕ ಹೆಚ್ಚಳ ಟೆಲಿಕಾಂ ಕಂಪನಿಗಳಿಗೆ ಪೂರಕವಾಗಿರಲಿವೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್ ವೊಡಾಫೋನ್ ಮತ್ತು ಐಡಿಯಾ ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಟೆಲಿಕಾಂ ಕ್ಷೇತ್ರದಲ್ಲಿ ಆರ್ಥಿಕ ನಷ್ಟ ಹೆಚ್ಚಿದೆ. ಹೀಗಾಗಿ ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳಲು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಕಾರ್ಯದರ್ಶಿಗಳ ಸಮಿತಿ ಸೂಕ್ತ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಕಂಪನಿಯು ತನ್ನ ವ್ಯಾಪ್ತಿ ಮತ್ತು ಸಾಮರ್ಥ್ಯ ಎರಡನ್ನೂ ಶೀಘ್ರದಲ್ಲೇ ವಿಸ್ತರಿಸಲಿದೆ. 2020 ಮಾರ್ಚ್ ವೇಳೆಗೆ 100 ಕೋಟಿ ಭಾರತೀಯ ನಾಗರಿಕರಿಗೆ 4 ಜಿ ಸೇವೆ ಒದಗಿಸುವ ಪ್ರಯತ್ನದಲ್ಲಿದೆ ಎಂದು ಕಂಪನಿಗಳು ಹೇಳಿವೆ.

ವೇಗವಾಗಿ ಬೆಳೆಯುತ್ತಿರುವ ಟೆಲಿಕಾಂ ವಲಯಕ್ಕೆ ತಂತ್ರಜ್ಞಾನ, ಬಂಡವಾಳ ಮತ್ತು ಹೂಡಿಕೆಯು ಅತ್ಯಗತ್ಯವಾಗಿ ಬೇಕಿದೆ. ಆದ್ದರಿಂದ, ಡಿಜಿಟಲ್ ಇಂಡಿಯಾ ಕಾರ್ಯಸಾಧನೆಗೆ ಟೆಲಿಕಾಂ ಉದ್ಯಮದ ಅಭಿವೃದ್ಧಿ ಮತ್ತು ಲಾಭ ಅತಿಮುಖ್ಯವೆಂದು ಭಾರತಿ ಏರ್ಟೆಲ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...