Homeಎಕಾನಮಿಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

ಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

- Advertisement -
- Advertisement -

ಇದೇ ಸೆಪ್ಟಂಬರ್ 30ಕ್ಕೆ ತ್ರೈಮಾಸಿಕ ಅವಧಿ ಮುಕ್ತಾಯಗೊಳ್ಳಲಿದ್ದು, ಟೆಲಿಕಾಂ ಕಂಪನಿಗಳು ಸುಂಕ ಹೆಚ್ಚಿಸಲು ನಿರ್ಧರಿಸಲಿವೆ. ತ್ರೈಮಾಸಿಕ ಅವಧಿಯಲ್ಲಿ ಕಂಪನಿಗಳು ದಾಖಲೆಯ ನಷ್ಟ ಅನುಭವಿಸಿದ್ದರಿಂದ ಸುಂಕ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ಡಿಸೆಂಬರ್ 1ರಿಂದ ಸುಂಕ ಹೆಚ್ಚಳ ಗ್ರಾಹಕರಿಗೆ ಅನ್ವಯವಾಗಲಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಸುಂಕ ಹೆಚ್ಚಳವಾಗಲಿದೆ ಎಂಬುದನ್ನು ಕಂಪನಿಗಳು ಉಲ್ಲೇಖಿಸಿಲ್ಲ.

ವೊಡಾಫೋನ್, ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂ ಕಂಪನಿಗಳು ನಿರ್ಧಾರ ಪ್ರಕಟಿಸಿವೆ. ಡಿಸೆಂಬರ್ 1 ರಿಂದ ಮೊಬೈಲ್ ಫೋನ್ ಕರೆ ಮತ್ತು ಡೇಟಾ ಶುಲ್ಕ ಹೆಚ್ಚಳವಾಗಲಿದೆ. ಇದು ವ್ಯವಹಾರದಲ್ಲಿ ಉಂಟಾಗಿರುವ ನಷ್ಟವನ್ನು ಭರಿಸಲು ಸಹಕಾರಿಯಾಗಲಿದೆ ಎಂದು ಕಂಪನಿಗಳು ತಿಳಿಸಿವೆ. ಕಳೆದ ಶುಕ್ರವಾರ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್, ಐಡಿಯಾ ದಾಖಲೆಯ ನಷ್ಟ ಅನುಭವಿಸಿರುವುದು ವರದಿಯಾಗಿದೆ. ವೊಡಾಫೋನ್, ಐಡಿಯಾದ ನಿವ್ವಳ ನಷ್ಟ ಮೂರು ತಿಂಗಳ ಅವಧಿಯಲ್ಲಿ 50,921.9 ಕೋಟಿ ರೂ. ಆಗಿದೆ. ಇದು ಭಾರತದ ಕಾರ್ಪೊರೇಟ್ ಇತಿಹಾಸದಲ್ಲೇ ಅತಿದೊಡ್ಡ ತ್ರೈಮಾಸಿಕ ನಷ್ಟವಾಗಿದೆ.

ಒಟ್ಟು ಆದಾಯ (ಎಜಿಆರ್)ದಲ್ಲಿ ಟೆಲಿಕಾಂ ಇಲಾಖೆಗೆ ನೀಡಬೇಕಿದ್ದ ಬಾಕಿಗಳನ್ನು ಸರಿಪಡಿಸಲು ಮತ್ತು ನಿಬಂಧನೆಗಳ ಪಾಲನೆ ಹಿನ್ನೆಲೆ ಸೆಪ್ಟಂಬರ್ 30ರಂದು ತ್ರೈಮಾಸಿಕ ಕೊನೆಗೊಂಡ ನಂತರ ಸುಂಕ ಹೆಚ್ಚಿಸುವುದಾಗಿ ತಿಳಿಸಿವೆ. ಅಲ್ಲದೇ ಸುಂಕ ಹೆಚ್ಚಳದಿಂದ ಟೆಲಿಕಾಂ ಉದ್ಯಮದಲ್ಲಿ ಲಾಭ ತರಬಹುದು. ಉದ್ಯಮದಲ್ಲಿ ಹೆಚ್ಚಿರುವ ಸ್ಪರ್ಧೆಯನ್ನು ಎದುರಿಸಲು ಮತ್ತು ಲಾಭದತ್ತ ಸಾಗಲು ಸುಂಕ ಹೆಚ್ಚಳ ಟೆಲಿಕಾಂ ಕಂಪನಿಗಳಿಗೆ ಪೂರಕವಾಗಿರಲಿವೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್ ವೊಡಾಫೋನ್ ಮತ್ತು ಐಡಿಯಾ ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಟೆಲಿಕಾಂ ಕ್ಷೇತ್ರದಲ್ಲಿ ಆರ್ಥಿಕ ನಷ್ಟ ಹೆಚ್ಚಿದೆ. ಹೀಗಾಗಿ ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳಲು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಕಾರ್ಯದರ್ಶಿಗಳ ಸಮಿತಿ ಸೂಕ್ತ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಕಂಪನಿಯು ತನ್ನ ವ್ಯಾಪ್ತಿ ಮತ್ತು ಸಾಮರ್ಥ್ಯ ಎರಡನ್ನೂ ಶೀಘ್ರದಲ್ಲೇ ವಿಸ್ತರಿಸಲಿದೆ. 2020 ಮಾರ್ಚ್ ವೇಳೆಗೆ 100 ಕೋಟಿ ಭಾರತೀಯ ನಾಗರಿಕರಿಗೆ 4 ಜಿ ಸೇವೆ ಒದಗಿಸುವ ಪ್ರಯತ್ನದಲ್ಲಿದೆ ಎಂದು ಕಂಪನಿಗಳು ಹೇಳಿವೆ.

ವೇಗವಾಗಿ ಬೆಳೆಯುತ್ತಿರುವ ಟೆಲಿಕಾಂ ವಲಯಕ್ಕೆ ತಂತ್ರಜ್ಞಾನ, ಬಂಡವಾಳ ಮತ್ತು ಹೂಡಿಕೆಯು ಅತ್ಯಗತ್ಯವಾಗಿ ಬೇಕಿದೆ. ಆದ್ದರಿಂದ, ಡಿಜಿಟಲ್ ಇಂಡಿಯಾ ಕಾರ್ಯಸಾಧನೆಗೆ ಟೆಲಿಕಾಂ ಉದ್ಯಮದ ಅಭಿವೃದ್ಧಿ ಮತ್ತು ಲಾಭ ಅತಿಮುಖ್ಯವೆಂದು ಭಾರತಿ ಏರ್ಟೆಲ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...