Homeಎಕಾನಮಿಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

ಡಿ. 1ರಿಂದ ವೊಡಾಫೋನ್, ಐಡಿಯಾ, ಏರ್‌ಟೆಲ್ ಸುಂಕ ಹೆಚ್ಚಳಕ್ಕೆ ನಿರ್ಧಾರ..!: ಯಾಕೆ ಗೊತ್ತಾ..?

- Advertisement -
- Advertisement -

ಇದೇ ಸೆಪ್ಟಂಬರ್ 30ಕ್ಕೆ ತ್ರೈಮಾಸಿಕ ಅವಧಿ ಮುಕ್ತಾಯಗೊಳ್ಳಲಿದ್ದು, ಟೆಲಿಕಾಂ ಕಂಪನಿಗಳು ಸುಂಕ ಹೆಚ್ಚಿಸಲು ನಿರ್ಧರಿಸಲಿವೆ. ತ್ರೈಮಾಸಿಕ ಅವಧಿಯಲ್ಲಿ ಕಂಪನಿಗಳು ದಾಖಲೆಯ ನಷ್ಟ ಅನುಭವಿಸಿದ್ದರಿಂದ ಸುಂಕ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕಂಪನಿಗಳು ತಿಳಿಸಿವೆ. ಡಿಸೆಂಬರ್ 1ರಿಂದ ಸುಂಕ ಹೆಚ್ಚಳ ಗ್ರಾಹಕರಿಗೆ ಅನ್ವಯವಾಗಲಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಸುಂಕ ಹೆಚ್ಚಳವಾಗಲಿದೆ ಎಂಬುದನ್ನು ಕಂಪನಿಗಳು ಉಲ್ಲೇಖಿಸಿಲ್ಲ.

ವೊಡಾಫೋನ್, ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂ ಕಂಪನಿಗಳು ನಿರ್ಧಾರ ಪ್ರಕಟಿಸಿವೆ. ಡಿಸೆಂಬರ್ 1 ರಿಂದ ಮೊಬೈಲ್ ಫೋನ್ ಕರೆ ಮತ್ತು ಡೇಟಾ ಶುಲ್ಕ ಹೆಚ್ಚಳವಾಗಲಿದೆ. ಇದು ವ್ಯವಹಾರದಲ್ಲಿ ಉಂಟಾಗಿರುವ ನಷ್ಟವನ್ನು ಭರಿಸಲು ಸಹಕಾರಿಯಾಗಲಿದೆ ಎಂದು ಕಂಪನಿಗಳು ತಿಳಿಸಿವೆ. ಕಳೆದ ಶುಕ್ರವಾರ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್, ಐಡಿಯಾ ದಾಖಲೆಯ ನಷ್ಟ ಅನುಭವಿಸಿರುವುದು ವರದಿಯಾಗಿದೆ. ವೊಡಾಫೋನ್, ಐಡಿಯಾದ ನಿವ್ವಳ ನಷ್ಟ ಮೂರು ತಿಂಗಳ ಅವಧಿಯಲ್ಲಿ 50,921.9 ಕೋಟಿ ರೂ. ಆಗಿದೆ. ಇದು ಭಾರತದ ಕಾರ್ಪೊರೇಟ್ ಇತಿಹಾಸದಲ್ಲೇ ಅತಿದೊಡ್ಡ ತ್ರೈಮಾಸಿಕ ನಷ್ಟವಾಗಿದೆ.

ಒಟ್ಟು ಆದಾಯ (ಎಜಿಆರ್)ದಲ್ಲಿ ಟೆಲಿಕಾಂ ಇಲಾಖೆಗೆ ನೀಡಬೇಕಿದ್ದ ಬಾಕಿಗಳನ್ನು ಸರಿಪಡಿಸಲು ಮತ್ತು ನಿಬಂಧನೆಗಳ ಪಾಲನೆ ಹಿನ್ನೆಲೆ ಸೆಪ್ಟಂಬರ್ 30ರಂದು ತ್ರೈಮಾಸಿಕ ಕೊನೆಗೊಂಡ ನಂತರ ಸುಂಕ ಹೆಚ್ಚಿಸುವುದಾಗಿ ತಿಳಿಸಿವೆ. ಅಲ್ಲದೇ ಸುಂಕ ಹೆಚ್ಚಳದಿಂದ ಟೆಲಿಕಾಂ ಉದ್ಯಮದಲ್ಲಿ ಲಾಭ ತರಬಹುದು. ಉದ್ಯಮದಲ್ಲಿ ಹೆಚ್ಚಿರುವ ಸ್ಪರ್ಧೆಯನ್ನು ಎದುರಿಸಲು ಮತ್ತು ಲಾಭದತ್ತ ಸಾಗಲು ಸುಂಕ ಹೆಚ್ಚಳ ಟೆಲಿಕಾಂ ಕಂಪನಿಗಳಿಗೆ ಪೂರಕವಾಗಿರಲಿವೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಟೆಲಿಕಾಂ ಆಪರೇಟರ್ ವೊಡಾಫೋನ್ ಮತ್ತು ಐಡಿಯಾ ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ. ಟೆಲಿಕಾಂ ಕ್ಷೇತ್ರದಲ್ಲಿ ಆರ್ಥಿಕ ನಷ್ಟ ಹೆಚ್ಚಿದೆ. ಹೀಗಾಗಿ ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳಲು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಕಾರ್ಯದರ್ಶಿಗಳ ಸಮಿತಿ ಸೂಕ್ತ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಕಂಪನಿಯು ತನ್ನ ವ್ಯಾಪ್ತಿ ಮತ್ತು ಸಾಮರ್ಥ್ಯ ಎರಡನ್ನೂ ಶೀಘ್ರದಲ್ಲೇ ವಿಸ್ತರಿಸಲಿದೆ. 2020 ಮಾರ್ಚ್ ವೇಳೆಗೆ 100 ಕೋಟಿ ಭಾರತೀಯ ನಾಗರಿಕರಿಗೆ 4 ಜಿ ಸೇವೆ ಒದಗಿಸುವ ಪ್ರಯತ್ನದಲ್ಲಿದೆ ಎಂದು ಕಂಪನಿಗಳು ಹೇಳಿವೆ.

ವೇಗವಾಗಿ ಬೆಳೆಯುತ್ತಿರುವ ಟೆಲಿಕಾಂ ವಲಯಕ್ಕೆ ತಂತ್ರಜ್ಞಾನ, ಬಂಡವಾಳ ಮತ್ತು ಹೂಡಿಕೆಯು ಅತ್ಯಗತ್ಯವಾಗಿ ಬೇಕಿದೆ. ಆದ್ದರಿಂದ, ಡಿಜಿಟಲ್ ಇಂಡಿಯಾ ಕಾರ್ಯಸಾಧನೆಗೆ ಟೆಲಿಕಾಂ ಉದ್ಯಮದ ಅಭಿವೃದ್ಧಿ ಮತ್ತು ಲಾಭ ಅತಿಮುಖ್ಯವೆಂದು ಭಾರತಿ ಏರ್ಟೆಲ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...