Homeಮುಖಪುಟವಿಚಾರವಾದಿ ದಾಭೋಲ್ಕರ್ ಹತ್ಯೆ: ಪಿಸ್ತೂಲ್ ಪತ್ತೆ

ವಿಚಾರವಾದಿ ದಾಭೋಲ್ಕರ್ ಹತ್ಯೆ: ಪಿಸ್ತೂಲ್ ಪತ್ತೆ

- Advertisement -
- Advertisement -

ಆಗಸ್ಟ್ 2013ರಂದು ಪುಣೆಯಲ್ಲಿ ಅಪರಿಚಿತ ವ್ಯಕ್ತಿಗಳಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ವಿಚಾರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ ನರೇಂದ್ರ ದಾಭೋಲ್ಕರ್ ಅವರ ಹತ್ಯೆಯಲ್ಲಿ ಸಿಬಿಐ ಮಹತ್ವದ ಪ್ರಗತಿ ಸಾಧಿಸಿದೆ. ಕೇಂದ್ರ ತನಿಖಾ ದಳವು ಹತ್ಯೆಯಲ್ಲಿ ಬಳಸಿರಬಹುದಾದ ಪಿಸ್ತೂಲ್ ಅನ್ನು  ಅರೇಬಿಯನ್ ಸಮುದ್ರದಿಂದ ನಾರ್ವೇಜಿಯನ್ ಆಳ ಸಮುದ್ರ ಪರಿಶೋಧಕರು ಮತ್ತು ತಂತ್ರಜ್ಞಾನದ ಸಹಾಯದಿಂದ ವಶಪಡಿಸಿಕೊಂಡಿದೆ ಎಂದು “ಹಿಂದುಸ್ತಾನ್ ಟೈಮ್ಸ್” ವರದಿಮಾಡಿದೆ .

ಶಸ್ತ್ರಾಸ್ತ್ರವನ್ನು ದಬೋಲ್ಕರ್ ಹತ್ಯೆಯಲ್ಲಿ ಬಳಸಲಾಗಿದೆಯೆ ಎಂದು ತಿಳಿಯಲು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಶಸ್ತ್ರಾಸ್ತ್ರವನ್ನು ಹುಡುಕಲು ಥಾಣೆ ಬಳಿಯ ಖರೆಗಾಂವ್ ಕೊಲ್ಲಿಯನ್ನು ಸೋಸುವ ಅಗತ್ಯವಿದೆ ಎಂದು ಸಿಬಿಐ, ಆಗಸ್ಟ್ 2019 ರಲ್ಲಿ ಪುಣೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.

ಕಿವಿ, ಮೂಗು ಮತ್ತು ಗಂಟಲು ಶಸ್ತ್ರಚಿಕಿತ್ಸಕ ವೀರೇಂದ್ರ ತಡೆ, ವಕೀಲ ಸಂಜೀವ್ ಪುಣಲೇಕರ್, ವಿಕ್ರಮ್ ಭಾವೆ, ಶರದ್ ಕಲಾಸ್ಕರ್ ಮತ್ತು ಸಚಿನ್ ಅಂಡುರೆ ಸೇರಿದಂತೆ ಏಳು ಜನರನ್ನು ಸಿಬಿಐ ಪ್ರಮುಖ ಆರೋಪಿಗಳೆಂದು ಹೆಸರಿಸಿದೆ.

“ನಾವು ಹಲವಾರು ದಿನಗಳ ಹುಡುಕಾಟದ ನಂತರ ಪಿಸ್ತೂಲ್ ಅನ್ನು ಕಂಡುಕೊಂಡಿದ್ದೇವೆ. ಬ್ಯಾಲಿಸ್ಟಿಕ್ಸ್ ತಜ್ಞರು ಈಗ ಅದನ್ನು ದಾಭೋಲ್ಕರ್ ಅವರ ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಿರುವ ಬುಲೆಟ್ ಗಾತ್ರ ಹಾಗೂ ಪ್ರಕಾರದೊಂದಿಗೆ ಪರಿಶೀಲಿಸುತ್ತಾರೆ ”ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು ತಿಳಿದ್ದಾರೆ.

ತನಿಖೆಯಲ್ಲಿ ಬಳಸುವ ನಾರ್ವೇ ತಂತ್ರಜ್ಞಾನಕ್ಕೆ ಸಿಬಿಐ, ಕರ್ನಾಟಕ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಗಳು (ಎಟಿಎಸ್) ಜಂಟಿಯಾಗಿ ವೆಚ್ಚವನ್ನು ಭರಿಸಲಿದೆ. ಪುಣೆಯ ದಾಭೋಲ್ಕರ್, ಮತ್ತು ಕರ್ನಾಟಕದ ಗೌರಿ ಲಂಕೇಶ್ ಮತ್ತು ಎಂಎಂ ಕಲ್ಬುರ್ಗಿ ಹೀಗೆ ಎರಡು ರಾಜ್ಯಗಳ ಮೂರು ಕೊಲೆ ಪ್ರಕರಣಗಳು ಒಂದಕ್ಕೊಂದು ಸಂಬಂಧ ಹೊಂದಿವೆ.

ದಾಬೋಲ್ಕರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಸತ್ಯರಂಜನ್ ಧರ್ಮಧಿಕಾರಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಕಳೆದ ತಿಂಗಳು ರಾಜೀನಾಮೆ ನೀಡಿದ್ದರು.

ಆಗಸ್ಟ್ 20, 2013 ರಂದು ಬೆಳಿಗ್ಗೆ 7.30 ರ ಸುಮಾರಿಗೆ ಪುಣೆಯ ಓಂಕಾರೇಶ್ವರ ಸೇತುವೆಯಲ್ಲಿ ದಾಭೋಲ್ಕರ್ ಅವರನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದರ ತನಿಖೆಯನ್ನು 2014 ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...