Homeಮುಖಪುಟನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅವರ ಕುಟುಂಬ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ದಾಭೋಲ್ಕರ್ ಕುಟುಂಬದ ಮೇಲ್ಮನವಿ ಪುರಸ್ಕರಿಸಿದ್ದು, ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಚಿನ್ ಅಂದುರೆ, ಶರದ್ ಕಲಾಸ್ಕರ್, ವಕೀಲ ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇವರು ಬಲಪಂಥೀಯ ಗುಂಪುಗಳಾದ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಎನ್ನಲಾಗಿದೆ.

ಪೀಠವು ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕೂಡ ನೋಟಿಸ್ ಜಾರಿಗೊಳಿಸಿದೆ. ವಕೀಲ ವಿವೇಕ್ ಪಾಟೀಲ್ ಮೂಲಕ ದಾಭೋಲ್ಕರ್ ಕುಟುಂಬ ಮೇಲ್ಮನವಿ ಸಲ್ಲಿಸಿದೆ.

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ ಸಂಬಂಧ ಮೇ 10, 2024 ರಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 34ರ (ಸಾಮಾನ್ಯ ಉದ್ದೇಶ) ಅಡಿ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರನ್ನು ದೋಷಿಗಳೆಂದು ಘೋಷಿಸಿದೆ.

ಕೊಲೆ, ಸಾಮಾನ್ಯ ಉದ್ದೇಶ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳನ್ನು ಎದುರಿಸುತಿದ್ದ ಇತರ ಮೂವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ನ ಸೆಕ್ಷನ್ 16 (ಭಯೋತ್ಪಾದಕ ಕೃತ್ಯ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಐವರು ಆರೋಪಿಗಳಲ್ಲಿ ಯಾರನ್ನೂ ದೋಷಿ ಎಂದು ಘೋಷಿಸಿಲ್ಲ.

ಆರೋಪಿಗಳು ದಾಭೋಲ್ಕರ್ ಅವರನ್ನು ಕೊಲ್ಲುವ ಉದ್ದೇಶ ಹೊಂದಿದ್ದರು ಮತ್ತು ಅದಕ್ಕಾಗಿ ಸಂಚು ರೂಪಿಸಿದ್ದರು ಎಂಬ ವಿಶೇಷ ನ್ಯಾಯಾಲಯ ಉಲ್ಲೇಖಿಸಿದ ಅಂಶಗಳನ್ನು ದಾಭೋಲ್ಕರ್ ಕುಟುಂಬ ತಮ್ಮ ಮೇಲ್ಮನವಿಯಲ್ಲಿ ಎತ್ತಿ ತೋರಿಸಿದೆ. ಅಂತಿಮವಾಗಿ ಆರೋಪಿಗಳನ್ನು ಐಪಿಸಿ ಮತ್ತು ಇತರ ನಿಬಂಧನೆಗಳಡಿ ದೋಷಿಗಳು ಎಂದು ಘೋಷಿಸುವಲ್ಲಿ ಕೆಳ ನ್ಯಾಯಾಲಯ ಎಡವಿದೆ ಎಂದು ದೂರಿದೆ.

ಪ್ರಕರಣದಲ್ಲಿ ಯುಎಪಿಎ ಕಾನೂನಿನ ಅನ್ವಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ಸರಿಯಾಗಿ ವಿಚಾರಣೆ ನಡೆಸುವಲ್ಲಿ ವಿಶೇಷ ನ್ಯಾಯಾಲಯ ವಿಫಲವಾಗಿದೆ ಎಂದು ದಾಭೋಲ್ಕರ್ ಕುಟುಂಬ ಆರೋಪಿಸಿದೆ. ಕೊಲೆ, ಕ್ರಿಮಿನಲ್ ಪಿತೂರಿ, ಯುಎಪಿಎ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಲ್ಲಾ ಐವರು ಆರೋಪಿಗಳನ್ನು ದೋಷಿ ಎಂದು ಘೋಷಿಸಲು ಹೈಕೋರ್ಟ್‌ಗೆ ಒತ್ತಾಯಿಸಿದೆ.

ಇದನ್ನೂ ಓದಿ : ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಎದುರಿಸುತ್ತಿರುವ 151 ಸಂಸದರು-ಶಾಸಕರು, 16 ಜನರ ಮೇಲೆ ರೇಪ್ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...