Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...