Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...