Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...