Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...