Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...