Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....