Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...