Homeಮುಖಪುಟಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

- Advertisement -
- Advertisement -

ಲೆಸ್ಬಿಯನ್‌‌ ಜೋಡಿಯೊಂದು ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ‘ಫೆಮ್ ಸ್ಕಿನ್‌ಕೇರ್‌’ ಕಂಪೆನಿಯ ಜಾಹಿರಾತಿನ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕಂಪೆನಿಯು ತನ್ನ ಜಾಹಿರಾತನ್ನು ವಾಪಾಸು ಪಡೆದಿದೆ. ಈ ಮೂಲಕ ತನ್ನ ಉತ್ಪನ್ನಗಳ ಜಾಹಿರಾತನ್ನು ಆಕ್ರೋಶಕ್ಕೆ ಮಣಿದು ವಾಪಾಸು ಪಡೆಯುತ್ತಿರುವ ಕಂಪೆನಿಗಳ ಪಟ್ಟಿಗೆ ಡಾಬರ್‌ ಮಾಲಿಕತ್ವದ ಫೆಮ್ ಸ್ಕಿನ್‌ಕೇರ್‌ ಸೇರಿಕೊಂಡಿತು.

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಇದರ ವಿರುದ್ದ ನರೋತ್ತಮ್ ಮಿಶ್ರಾ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಇಂದು ಅವರು ಲೆಸ್ಬಿಯನ್ನರು ತಮ್ಮ ಕರ್ವಾ ಚೌತ್‌ ಉಪವಾಸವನ್ನು ಮುರಿಯುವುದನ್ನು ತೋರಿಸುತ್ತಿದ್ದಾರೆ …ನಾಳೆ ಅವರು ಇಬ್ಬರು ಹುಡುಗರು ಮದುವೆಯಾಗುವುದನ್ನು ತೋರಿಸಬಹುದು. ಇದು ಅಪಾಯಕಾರಿ ಆಗಿದೆ. ಜಾಹೀರಾತನ್ನು ಪರಿಶೀಲಿಸಲು ನಾನು ಡಿಜಿಪಿಗೆ ನಿರ್ದೇಶನ ನೀಡಿದ್ದೇನೆ. ಅದನ್ನು ತೆಗೆದುಹಾಕಲು ಕಂಪನಿಯನ್ನು ಕೇಳುತ್ತೇನೆ” ಎಂದು ನರೋತ್ತಮ್‌ ಹೇಳಿದ್ದಾರೆ.

ಇದನ್ನೂ ಓದಿ: ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್‌’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

‘ಕರ್ವಾ ಚೌತ್‌’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡ ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ನರೋತ್ತಮ್‌ ಅವರ ಎಚ್ಚರಿಕೆಯ ನಂತರ ಡಾಬರ್ ಜಾಹೀರಾತನ್ನು ಹಿಂತೆಗೆದುಕೊಳ್ಳುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಅದು “ಜನರ ಭಾವನೆಗಳನ್ನು ಘಾಸಿಗೊಳಿಸುವ ಯಾವುದೆ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದು, ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ಹೇಳಿದೆ.

ಜೊತೆಗೆ ಕಂಪೆನಿ ತನ್ನ ಮತ್ತೊಂದು ಹೇಳಿಕೆಯಲ್ಲಿ, “ಡಾಬರ್ ಮತ್ತು ಫೆಮ್ ಒಂದು ಬ್ರ್ಯಾಂಡ್ ಆಗಿ ವೈವಿಧ್ಯತೆ, ಒಳಗೊಳ್ಳುವಿಕೆ ಮತ್ತು ಸಮಾನತೆಗಾಗಿ ಶ್ರಮಿಸುತ್ತದೆ. ನಮ್ಮ ಸಂಸ್ಥೆಯಲ್ಲಿ ಮತ್ತು ನಮ್ಮ ಸಮುದಾಯಗಳಲ್ಲಿ ಈ ಮೌಲ್ಯಗಳನ್ನು ನಾವು ಹೆಮ್ಮೆಯಿಂದ ಬೆಂಬಲಿಸುತ್ತೇವೆ. ನಮ್ಮ ಅಭಿಯಾನಗಳು ಕೂಡ ಅದನ್ನೇ ಪ್ರತಿಬಿಂಬಿಸುತ್ತವೆ. ಎಲ್ಲರೂ ನಮ್ಮ ನಿಲುವನ್ನು ಒಪ್ಪುವುದಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಜೊತೆಗೆ ವಿಭಿನ್ನ ದೃಷ್ಟಿಕೋನವನ್ನು ಹೊಂದುವ ಅವರ ಹಕ್ಕನ್ನು ನಾವು ಗೌರವಿಸುತ್ತೇವೆ. ನಮ್ಮ ಉದ್ದೇಶವು ಯಾವುದೇ ನಂಬಿಕೆಗಳು, ಆಚಾರಗಳು ಮತ್ತು ಸಂಪ್ರದಾಯಗಳನ್ನು, ಧಾರ್ಮಿಕತೆ ಅಥವಾ ಇನ್ಯಾವುದೇ ರೀತಿಯ ವಿಷಯಗಳಲ್ಲಿ ನೋಯಿಸುವುದಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಇಷ್ಟೆ ಅಲ್ಲದೆ ಕಂಪನಿಯು ತನ್ನ ಹೇಳಿಕೆಯಲ್ಲಿ “ಬ್ರ್ಯಾಂಡ್ ಮತ್ತು ಪ್ರಚಾರಕ್ಕಾಗಿ ತಮ್ಮ ಬೆಂಬಲವನ್ನು ನೀಡಿದ ಪ್ರತಿಯೊಬ್ಬರಿಂದ ವಿನಮ್ರರಾಗಿದ್ದೇವೆ” ಎಂದು ಹೇಳಿದೆ.

‘ಕರ್ವಾ ಚೌತ್‌’ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್‌ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಈ ತಿಂಗಳ ಆರಂಭದಲ್ಲಿ ಖ್ಯಾತ ಬಟ್ಟೆ ಬ್ರಾಂಡ್ ಫ್ಯಾಬ್‌ಇಂಡಿಯಾ ತನ್ನ ಜಾಹಿರಾತನ್ನು ವಾಪಾಸು ಪಡೆದುಕೊಂಡಿತ್ತು. ಅದು ದೀಪಾವಳಿ ಆಚರಣೆಯನ್ನು ಪರ್ಶಿಯನ್‌ ಭಾಷೆಯಲ್ಲಿ ‘ಜಶ್ನ್-ಎ-ರಿವಾಜ್’ ಎಂದು ಕರೆದಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಕಳೆದ ವರ್ಷ ಟಾಟಾ ಗ್ರೂಪ್‌ನ ಆಭರಣ ಬ್ರ್ಯಾಂಡ್ ‘ತನಿಷ್ಕ್’ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ಅದರ ಜಾಹಿರಾತಿನಲ್ಲಿ ಮುಸ್ಲಿಂ ಕುಟುಂಬವು ತಮ್ಮ ಹಿಂದೂ ಸೊಸೆಗಾಗಿ ‘ಸೀಮಂತ’ ಮಾಡುವುದನ್ನು ತೋರಿಸಿತ್ತು. ನಂತರ ಟಾಟಾ ಈ ಜಾಹಿರಾತನ್ನು ವಾಪಾಸು ಪಡೆದಿತ್ತು.

ಅದಕ್ಕೂ ಮೊದಲು 2019 ರಲ್ಲಿ ಹಿಂದೂಸ್ತಾನ್ ಯೂನಿಲಿವರ್‌ನ ‘ಸರ್ಫ್ ಎಕ್ಸೆಲ್’ ಸಹ ಮಕ್ಕಳು ಹೋಳಿ ಆಡುವ ಜಾಹೀರಾತನ್ನು ಬಿಡುಗಡೆ ಮಾಡಿ ನಂತರ ಹಿಂಪಡೆಯಿತು. ಅದರಲ್ಲಿ, ಚಿಕ್ಕ ಹುಡುಗಿಯೊಬ್ಬರು, ತನ್ನ ಮುಸ್ಲಿಂ ಸ್ನೇಹಿತನಿಗೆ ಹೋಳಿಯ ಯಾವುದೆ ಬಣ್ಣಗಳು ತಾಗದಂತೆ ಮಸೀದಿಗೆ ತಲುಪಲು ಸಹಾಯ ಮಾಡುತ್ತಾರೆ.

ಇದನ್ನೂ ಓದಿ: ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...