Homeಮುಖಪುಟಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

- Advertisement -
- Advertisement -

ಲೆಸ್ಬಿಯನ್‌‌ ಜೋಡಿಯೊಂದು ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ‘ಫೆಮ್ ಸ್ಕಿನ್‌ಕೇರ್‌’ ಕಂಪೆನಿಯ ಜಾಹಿರಾತಿನ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕಂಪೆನಿಯು ತನ್ನ ಜಾಹಿರಾತನ್ನು ವಾಪಾಸು ಪಡೆದಿದೆ. ಈ ಮೂಲಕ ತನ್ನ ಉತ್ಪನ್ನಗಳ ಜಾಹಿರಾತನ್ನು ಆಕ್ರೋಶಕ್ಕೆ ಮಣಿದು ವಾಪಾಸು ಪಡೆಯುತ್ತಿರುವ ಕಂಪೆನಿಗಳ ಪಟ್ಟಿಗೆ ಡಾಬರ್‌ ಮಾಲಿಕತ್ವದ ಫೆಮ್ ಸ್ಕಿನ್‌ಕೇರ್‌ ಸೇರಿಕೊಂಡಿತು.

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಇದರ ವಿರುದ್ದ ನರೋತ್ತಮ್ ಮಿಶ್ರಾ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಇಂದು ಅವರು ಲೆಸ್ಬಿಯನ್ನರು ತಮ್ಮ ಕರ್ವಾ ಚೌತ್‌ ಉಪವಾಸವನ್ನು ಮುರಿಯುವುದನ್ನು ತೋರಿಸುತ್ತಿದ್ದಾರೆ …ನಾಳೆ ಅವರು ಇಬ್ಬರು ಹುಡುಗರು ಮದುವೆಯಾಗುವುದನ್ನು ತೋರಿಸಬಹುದು. ಇದು ಅಪಾಯಕಾರಿ ಆಗಿದೆ. ಜಾಹೀರಾತನ್ನು ಪರಿಶೀಲಿಸಲು ನಾನು ಡಿಜಿಪಿಗೆ ನಿರ್ದೇಶನ ನೀಡಿದ್ದೇನೆ. ಅದನ್ನು ತೆಗೆದುಹಾಕಲು ಕಂಪನಿಯನ್ನು ಕೇಳುತ್ತೇನೆ” ಎಂದು ನರೋತ್ತಮ್‌ ಹೇಳಿದ್ದಾರೆ.

ಇದನ್ನೂ ಓದಿ: ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್‌’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

‘ಕರ್ವಾ ಚೌತ್‌’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡ ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ನರೋತ್ತಮ್‌ ಅವರ ಎಚ್ಚರಿಕೆಯ ನಂತರ ಡಾಬರ್ ಜಾಹೀರಾತನ್ನು ಹಿಂತೆಗೆದುಕೊಳ್ಳುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಅದು “ಜನರ ಭಾವನೆಗಳನ್ನು ಘಾಸಿಗೊಳಿಸುವ ಯಾವುದೆ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದು, ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ಹೇಳಿದೆ.

ಜೊತೆಗೆ ಕಂಪೆನಿ ತನ್ನ ಮತ್ತೊಂದು ಹೇಳಿಕೆಯಲ್ಲಿ, “ಡಾಬರ್ ಮತ್ತು ಫೆಮ್ ಒಂದು ಬ್ರ್ಯಾಂಡ್ ಆಗಿ ವೈವಿಧ್ಯತೆ, ಒಳಗೊಳ್ಳುವಿಕೆ ಮತ್ತು ಸಮಾನತೆಗಾಗಿ ಶ್ರಮಿಸುತ್ತದೆ. ನಮ್ಮ ಸಂಸ್ಥೆಯಲ್ಲಿ ಮತ್ತು ನಮ್ಮ ಸಮುದಾಯಗಳಲ್ಲಿ ಈ ಮೌಲ್ಯಗಳನ್ನು ನಾವು ಹೆಮ್ಮೆಯಿಂದ ಬೆಂಬಲಿಸುತ್ತೇವೆ. ನಮ್ಮ ಅಭಿಯಾನಗಳು ಕೂಡ ಅದನ್ನೇ ಪ್ರತಿಬಿಂಬಿಸುತ್ತವೆ. ಎಲ್ಲರೂ ನಮ್ಮ ನಿಲುವನ್ನು ಒಪ್ಪುವುದಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಜೊತೆಗೆ ವಿಭಿನ್ನ ದೃಷ್ಟಿಕೋನವನ್ನು ಹೊಂದುವ ಅವರ ಹಕ್ಕನ್ನು ನಾವು ಗೌರವಿಸುತ್ತೇವೆ. ನಮ್ಮ ಉದ್ದೇಶವು ಯಾವುದೇ ನಂಬಿಕೆಗಳು, ಆಚಾರಗಳು ಮತ್ತು ಸಂಪ್ರದಾಯಗಳನ್ನು, ಧಾರ್ಮಿಕತೆ ಅಥವಾ ಇನ್ಯಾವುದೇ ರೀತಿಯ ವಿಷಯಗಳಲ್ಲಿ ನೋಯಿಸುವುದಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಇಷ್ಟೆ ಅಲ್ಲದೆ ಕಂಪನಿಯು ತನ್ನ ಹೇಳಿಕೆಯಲ್ಲಿ “ಬ್ರ್ಯಾಂಡ್ ಮತ್ತು ಪ್ರಚಾರಕ್ಕಾಗಿ ತಮ್ಮ ಬೆಂಬಲವನ್ನು ನೀಡಿದ ಪ್ರತಿಯೊಬ್ಬರಿಂದ ವಿನಮ್ರರಾಗಿದ್ದೇವೆ” ಎಂದು ಹೇಳಿದೆ.

‘ಕರ್ವಾ ಚೌತ್‌’ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್‌ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಈ ತಿಂಗಳ ಆರಂಭದಲ್ಲಿ ಖ್ಯಾತ ಬಟ್ಟೆ ಬ್ರಾಂಡ್ ಫ್ಯಾಬ್‌ಇಂಡಿಯಾ ತನ್ನ ಜಾಹಿರಾತನ್ನು ವಾಪಾಸು ಪಡೆದುಕೊಂಡಿತ್ತು. ಅದು ದೀಪಾವಳಿ ಆಚರಣೆಯನ್ನು ಪರ್ಶಿಯನ್‌ ಭಾಷೆಯಲ್ಲಿ ‘ಜಶ್ನ್-ಎ-ರಿವಾಜ್’ ಎಂದು ಕರೆದಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಕಳೆದ ವರ್ಷ ಟಾಟಾ ಗ್ರೂಪ್‌ನ ಆಭರಣ ಬ್ರ್ಯಾಂಡ್ ‘ತನಿಷ್ಕ್’ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ಅದರ ಜಾಹಿರಾತಿನಲ್ಲಿ ಮುಸ್ಲಿಂ ಕುಟುಂಬವು ತಮ್ಮ ಹಿಂದೂ ಸೊಸೆಗಾಗಿ ‘ಸೀಮಂತ’ ಮಾಡುವುದನ್ನು ತೋರಿಸಿತ್ತು. ನಂತರ ಟಾಟಾ ಈ ಜಾಹಿರಾತನ್ನು ವಾಪಾಸು ಪಡೆದಿತ್ತು.

ಅದಕ್ಕೂ ಮೊದಲು 2019 ರಲ್ಲಿ ಹಿಂದೂಸ್ತಾನ್ ಯೂನಿಲಿವರ್‌ನ ‘ಸರ್ಫ್ ಎಕ್ಸೆಲ್’ ಸಹ ಮಕ್ಕಳು ಹೋಳಿ ಆಡುವ ಜಾಹೀರಾತನ್ನು ಬಿಡುಗಡೆ ಮಾಡಿ ನಂತರ ಹಿಂಪಡೆಯಿತು. ಅದರಲ್ಲಿ, ಚಿಕ್ಕ ಹುಡುಗಿಯೊಬ್ಬರು, ತನ್ನ ಮುಸ್ಲಿಂ ಸ್ನೇಹಿತನಿಗೆ ಹೋಳಿಯ ಯಾವುದೆ ಬಣ್ಣಗಳು ತಾಗದಂತೆ ಮಸೀದಿಗೆ ತಲುಪಲು ಸಹಾಯ ಮಾಡುತ್ತಾರೆ.

ಇದನ್ನೂ ಓದಿ: ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...