Homeಮುಖಪುಟಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

- Advertisement -
- Advertisement -

ಲೆಸ್ಬಿಯನ್‌‌ ಜೋಡಿಯೊಂದು ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ‘ಫೆಮ್ ಸ್ಕಿನ್‌ಕೇರ್‌’ ಕಂಪೆನಿಯ ಜಾಹಿರಾತಿನ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕಂಪೆನಿಯು ತನ್ನ ಜಾಹಿರಾತನ್ನು ವಾಪಾಸು ಪಡೆದಿದೆ. ಈ ಮೂಲಕ ತನ್ನ ಉತ್ಪನ್ನಗಳ ಜಾಹಿರಾತನ್ನು ಆಕ್ರೋಶಕ್ಕೆ ಮಣಿದು ವಾಪಾಸು ಪಡೆಯುತ್ತಿರುವ ಕಂಪೆನಿಗಳ ಪಟ್ಟಿಗೆ ಡಾಬರ್‌ ಮಾಲಿಕತ್ವದ ಫೆಮ್ ಸ್ಕಿನ್‌ಕೇರ್‌ ಸೇರಿಕೊಂಡಿತು.

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಇದರ ವಿರುದ್ದ ನರೋತ್ತಮ್ ಮಿಶ್ರಾ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಇಂದು ಅವರು ಲೆಸ್ಬಿಯನ್ನರು ತಮ್ಮ ಕರ್ವಾ ಚೌತ್‌ ಉಪವಾಸವನ್ನು ಮುರಿಯುವುದನ್ನು ತೋರಿಸುತ್ತಿದ್ದಾರೆ …ನಾಳೆ ಅವರು ಇಬ್ಬರು ಹುಡುಗರು ಮದುವೆಯಾಗುವುದನ್ನು ತೋರಿಸಬಹುದು. ಇದು ಅಪಾಯಕಾರಿ ಆಗಿದೆ. ಜಾಹೀರಾತನ್ನು ಪರಿಶೀಲಿಸಲು ನಾನು ಡಿಜಿಪಿಗೆ ನಿರ್ದೇಶನ ನೀಡಿದ್ದೇನೆ. ಅದನ್ನು ತೆಗೆದುಹಾಕಲು ಕಂಪನಿಯನ್ನು ಕೇಳುತ್ತೇನೆ” ಎಂದು ನರೋತ್ತಮ್‌ ಹೇಳಿದ್ದಾರೆ.

ಇದನ್ನೂ ಓದಿ: ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್‌’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

‘ಕರ್ವಾ ಚೌತ್‌’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡ ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ನರೋತ್ತಮ್‌ ಅವರ ಎಚ್ಚರಿಕೆಯ ನಂತರ ಡಾಬರ್ ಜಾಹೀರಾತನ್ನು ಹಿಂತೆಗೆದುಕೊಳ್ಳುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಅದು “ಜನರ ಭಾವನೆಗಳನ್ನು ಘಾಸಿಗೊಳಿಸುವ ಯಾವುದೆ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದು, ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ಹೇಳಿದೆ.

ಜೊತೆಗೆ ಕಂಪೆನಿ ತನ್ನ ಮತ್ತೊಂದು ಹೇಳಿಕೆಯಲ್ಲಿ, “ಡಾಬರ್ ಮತ್ತು ಫೆಮ್ ಒಂದು ಬ್ರ್ಯಾಂಡ್ ಆಗಿ ವೈವಿಧ್ಯತೆ, ಒಳಗೊಳ್ಳುವಿಕೆ ಮತ್ತು ಸಮಾನತೆಗಾಗಿ ಶ್ರಮಿಸುತ್ತದೆ. ನಮ್ಮ ಸಂಸ್ಥೆಯಲ್ಲಿ ಮತ್ತು ನಮ್ಮ ಸಮುದಾಯಗಳಲ್ಲಿ ಈ ಮೌಲ್ಯಗಳನ್ನು ನಾವು ಹೆಮ್ಮೆಯಿಂದ ಬೆಂಬಲಿಸುತ್ತೇವೆ. ನಮ್ಮ ಅಭಿಯಾನಗಳು ಕೂಡ ಅದನ್ನೇ ಪ್ರತಿಬಿಂಬಿಸುತ್ತವೆ. ಎಲ್ಲರೂ ನಮ್ಮ ನಿಲುವನ್ನು ಒಪ್ಪುವುದಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಜೊತೆಗೆ ವಿಭಿನ್ನ ದೃಷ್ಟಿಕೋನವನ್ನು ಹೊಂದುವ ಅವರ ಹಕ್ಕನ್ನು ನಾವು ಗೌರವಿಸುತ್ತೇವೆ. ನಮ್ಮ ಉದ್ದೇಶವು ಯಾವುದೇ ನಂಬಿಕೆಗಳು, ಆಚಾರಗಳು ಮತ್ತು ಸಂಪ್ರದಾಯಗಳನ್ನು, ಧಾರ್ಮಿಕತೆ ಅಥವಾ ಇನ್ಯಾವುದೇ ರೀತಿಯ ವಿಷಯಗಳಲ್ಲಿ ನೋಯಿಸುವುದಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಇಷ್ಟೆ ಅಲ್ಲದೆ ಕಂಪನಿಯು ತನ್ನ ಹೇಳಿಕೆಯಲ್ಲಿ “ಬ್ರ್ಯಾಂಡ್ ಮತ್ತು ಪ್ರಚಾರಕ್ಕಾಗಿ ತಮ್ಮ ಬೆಂಬಲವನ್ನು ನೀಡಿದ ಪ್ರತಿಯೊಬ್ಬರಿಂದ ವಿನಮ್ರರಾಗಿದ್ದೇವೆ” ಎಂದು ಹೇಳಿದೆ.

‘ಕರ್ವಾ ಚೌತ್‌’ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್‌ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಈ ತಿಂಗಳ ಆರಂಭದಲ್ಲಿ ಖ್ಯಾತ ಬಟ್ಟೆ ಬ್ರಾಂಡ್ ಫ್ಯಾಬ್‌ಇಂಡಿಯಾ ತನ್ನ ಜಾಹಿರಾತನ್ನು ವಾಪಾಸು ಪಡೆದುಕೊಂಡಿತ್ತು. ಅದು ದೀಪಾವಳಿ ಆಚರಣೆಯನ್ನು ಪರ್ಶಿಯನ್‌ ಭಾಷೆಯಲ್ಲಿ ‘ಜಶ್ನ್-ಎ-ರಿವಾಜ್’ ಎಂದು ಕರೆದಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಕಳೆದ ವರ್ಷ ಟಾಟಾ ಗ್ರೂಪ್‌ನ ಆಭರಣ ಬ್ರ್ಯಾಂಡ್ ‘ತನಿಷ್ಕ್’ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ಅದರ ಜಾಹಿರಾತಿನಲ್ಲಿ ಮುಸ್ಲಿಂ ಕುಟುಂಬವು ತಮ್ಮ ಹಿಂದೂ ಸೊಸೆಗಾಗಿ ‘ಸೀಮಂತ’ ಮಾಡುವುದನ್ನು ತೋರಿಸಿತ್ತು. ನಂತರ ಟಾಟಾ ಈ ಜಾಹಿರಾತನ್ನು ವಾಪಾಸು ಪಡೆದಿತ್ತು.

ಅದಕ್ಕೂ ಮೊದಲು 2019 ರಲ್ಲಿ ಹಿಂದೂಸ್ತಾನ್ ಯೂನಿಲಿವರ್‌ನ ‘ಸರ್ಫ್ ಎಕ್ಸೆಲ್’ ಸಹ ಮಕ್ಕಳು ಹೋಳಿ ಆಡುವ ಜಾಹೀರಾತನ್ನು ಬಿಡುಗಡೆ ಮಾಡಿ ನಂತರ ಹಿಂಪಡೆಯಿತು. ಅದರಲ್ಲಿ, ಚಿಕ್ಕ ಹುಡುಗಿಯೊಬ್ಬರು, ತನ್ನ ಮುಸ್ಲಿಂ ಸ್ನೇಹಿತನಿಗೆ ಹೋಳಿಯ ಯಾವುದೆ ಬಣ್ಣಗಳು ತಾಗದಂತೆ ಮಸೀದಿಗೆ ತಲುಪಲು ಸಹಾಯ ಮಾಡುತ್ತಾರೆ.

ಇದನ್ನೂ ಓದಿ: ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....