Homeಕರ್ನಾಟಕಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ

- Advertisement -
- Advertisement -

ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಹಿಂದಿನಿಂದಲೂ ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದು, ಪ್ರತಿ ಬಾರಿಯು ಸಿಎಂ ವಿರುದ್ದ ಬಹಿರಂಗವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ. ಅವರು ಈ ಹಿಂದೆಯೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿ ಯಡಿಯೂರಪ್ಪ ವಿರುದ್ದ ತನ್ನ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌, “ಮೇ 2 ರ ನಂತರ ಯಡಿಯೂರಪ್ಪ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ. ಪಕ್ಷ ಉಳಿಯಬೇಕು ಎಂದರೆ ಮೇ 2 ರ ನಂತರ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ತೆಗೆಯಲೇಬೇಕು. ಇಲ್ಲ ಅಂದರೆ ಪಕ್ಷ ಎಲ್ಲಿ ಉಳಿಯುತ್ತೆ?’’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

“ಇನ್ನೂ ಸ್ವಲ್ಪ ದಿನಗಳಲ್ಲೇ ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ. ವಿಜಯೇಂದ್ರ ಎಷ್ಟು ಲೂಟಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತೆ. ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರ ಅವರನ್ನು ಜಾರಿ ನಿರ್ದೇಶನಾಲಯದವರು ಕರೆದುಕೊಂಡು ಹೋಗಿಲ್ಲ ಎಂದು ಹೇಳಲಿ. ನಾನು ಅವರಿಗೆ ಚಾಲೆಂಜ್ ಮಾಡುತ್ತೇನೆ. ಡಿಕೆಶಿಯನ್ನು ಇಡಿಯವರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದರಲ್ಲ. ಅಲ್ಲಿಗೆ ವಿಜಯೇಂದ್ರರನ್ನು ಕರೆದುಕೊಂಡು ಹೋಗಿ ಇಡಿಯವರು ವಿಚಾರಣೆ ಮಾಡಿದ್ದಾರೆ. ಸೂಟು- ಬೂಟು ಹಾಕೊಂಡು ಹೋಗಿದ್ರು. ಅದೆನ್ನೆಲ್ಲಾ ಬಿಚ್ಚಿಸಿ, ಡಿಕೆಶಿ ತರನೇ ವಿಜಯೇಂದ್ರರನ್ನು ವಿಚಾರಣೆ ಮಾಡಿದ್ದಾರೆ. ಇದೆಲ್ಲೆವೂ ಸ್ವಲ್ಪ ದಿನಗಳಲ್ಲೇ ಗೊತ್ತಾಗಲಿದೆ. ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ” ಎಂದು ಯತ್ನಾಳ್ ಹೇಳಿದ್ದಾರೆ.

ಯಾರೋ ಒಬ್ಬರು ಚಿಲ್ಲರೆ ಪಲ್ಲರೆಗಳ ಕೈಯಲ್ಲಿ ಮಾತನಾಡಿಸುತ್ತಾರೆ. ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ- ಮಗ ಮಾತಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ.

ಯಾರ ಯಾರ ನಾಯಕತ್ವ ಎಷ್ಟೆಷ್ಟು ಅನ್ನೋದು ಗೊತ್ತಾಗುತ್ತೆ. ಈಶ್ವರಪ್ಪ ಈಲ್ಡ್ ಆಗಿಲ್ಲ ಅನಿಸ್ತದೆ. ಈಶ್ವರಪ್ಪ ರಾಜ್ಯಪಾಲರ ಭೇಟಿ ಮಾಡಿದ್ದು ನನಗೇನೂ ಗೊತ್ತಿರಲಿಲ್ಲ ಎಂದರು. ಪಕ್ಷದ ಒಳಗೆ ಮಾತನಾಡುವಂತೆ ಯತ್ನಾಳ್ ಗೆ ಈಶ್ವರಪ್ಪ ಬುದ್ದಿ ಮಾತು ಹೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಪಕ್ಷದ ವೇದಿಕೆ ಅನ್ನೋದು ಏನು ರಾಜ್ಯಪಾಲರ ಕಚೇರಿಯಾ? ಎನ್ನುವ ಮೂಲಕ ಪರೋಕ್ಷವಾಗಿ ನೀವು ಪಕ್ಷ ವಿರೋಧಿಯಾಗಿ ನಡೆದುಕೊಂಡಿಲ್ವಾ ಎಂದು ಈಶ್ವರಪ್ಪಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಇನ್ನೂ ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಏಪ್ರಿಲ್ 17 ರ ನಂತರಶಾಸಕರು ಸಚಿವರು ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪನವರೇ ಸಿಎಂ ಅಂದ್ರೆ ಏನರ್ಥ?. ಯಡಿಯೂರಪ್ಪ ಫ್ಯಾಮಿಲಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ..? ಪಕ್ಷದ ಸಿದ್ದಾಂತದ ಹಿನ್ನೆಲೆಯಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದೇ ದೊಡ್ಡದ್ದು ಎಂದು ಹೇಳಿದರು.

ಯತ್ನಾಳ್ ಹೇಳಿಕೆಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರತಿಕ್ರಿಯಿಸಿದ್ದು, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...