Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...