Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...