Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...