Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...