Homeಮುಖಪುಟದಾದ್ರ & ನಗರ ಹವೇಲಿ ಸಂಸದನ ಅಸಹಜ ಸಾವು: ತನಿಖೆಗೆ SIT ರಚಿಸಿದ ಮಹಾರಾಷ್ಟ್ರ ಸರ್ಕಾರ‌‌

ದಾದ್ರ & ನಗರ ಹವೇಲಿ ಸಂಸದನ ಅಸಹಜ ಸಾವು: ತನಿಖೆಗೆ SIT ರಚಿಸಿದ ಮಹಾರಾಷ್ಟ್ರ ಸರ್ಕಾರ‌‌

ಮೆರಿನ್ ಡ್ರೈವ್ ಪೊಲೀಸರು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಮತ್ತು ಇತರ ಆರು ಜನರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ.

- Advertisement -
- Advertisement -

ಮುಂಬೈನ ದಾದ್ರಾ ಮತ್ತು ನಗರ ಹವೇಲಿಯ ಸಂಸದ ಮೋಹನ್ ಡೆಲ್ಕರ್ ಅವರ ಮರಣದ ಎರಡು ವಾರಗಳ ನಂತರ, ಮೆರಿನ್ ಡ್ರೈವ್ ಪೊಲೀಸರು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಮತ್ತು ಇತರ ಆರು ಜನರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ.

ಫೆಬ್ರವರಿ 22 ರಂದು ಮೆರಿನ್ ಡ್ರೈವ್‌ನ ಹೋಟೆಲ್ ಸೀ ಗ್ರೀನ್ ಸೌತ್‌‌‌ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಡೆಲ್ಕರ್ ಪತ್ತೆಯಾಗಿದ್ದರು.

ಅವರು 15 ಪುಟಗಳಷ್ಟು ಡೆತ್‌ ನೋಟ್‌ ಅನ್ನು ಬರೆದಿದ್ದರು, ಇದರಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌ ಹೆಸರನ್ನು ಉಲ್ಲೇಖಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಇದರ ಜೊತೆಗೆ ಪತ್ರದಲ್ಲಿ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರನ್ನು ಸಹ ಹೆಸರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಡೆಲ್ಕರ್‌ ಅವರ ಮಗ ಅಭಿನವ್ ಅವರು ಪೊಲೀಸರಿಗೆ ಹೇಳಿಕೆ ನೀಡಿದ ನಂತರ ಈ ಪ್ರಕರಣ ದಾಖಲಿಸಲಾಗಿದೆ.

“ಮುಂಬೈಗೆ ಬಂದು ಮಹಾರಾಷ್ಟ್ರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದು, ನನ್ನ ಕುಟುಂಬಕ್ಕೆ ನ್ಯಾಯ ಒದಗಿಸಲು ಅವರು ಸಹಾಯ ಮಾಡುತ್ತಾರೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ” ಎಂದು ಅಭಿನವ್ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಾಗಿ ಮಂಗಳವಾರ ಸಂಜೆ 5 ಗಂಟೆಗೆ ಮೆರಿನ್ ಡ್ರೈವ್ ಪೊಲೀಸ್ ಠಾಣೆಗೆ ಹೋಗಿ, ಅಲ್ಲಿ ಅವರ ಹೇಳಿಕೆಯನ್ನು ರಾತ್ರಿ 10 ರವರೆಗೆ ಸಹಾಯಕ ಪೊಲೀಸ್ ಆಯುಕ್ತ ಪಾಂಡುರಂಗ್ ಶಿಂಧೆ ದಾಖಲಿಸಿದ್ದಾರೆ ಮತ್ತು ಅಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಂಸದನ ಆತ್ಮಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವುದಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...