Homeಕರ್ನಾಟಕದಕ್ಷಿಣ ಕನ್ನಡ ಅನೈತಿಕ ಪೊಲೀಸ್‌ಗಿರಿ: ಸಹಪಾಠಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿಗೆ ಥಳಿತ

ದಕ್ಷಿಣ ಕನ್ನಡ ಅನೈತಿಕ ಪೊಲೀಸ್‌ಗಿರಿ: ಸಹಪಾಠಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿಗೆ ಥಳಿತ

- Advertisement -
- Advertisement -

ಹಿಂದೂ ಸಮುದಾಯದ ಸಹಪಾಠಿ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ 8 ಮಂದಿ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ಥಳಿಸಿ, ಕೊಲೆ ಬೆದರಿಕೆ ಹಾಕಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸರ್ಕಾರಿ ಕಾಲೇಜ್‌ನಲ್ಲಿ ನಡೆದಿದೆ. ಘಟನೆಯು ಸುಳ್ಯದ ಕೊಡಿಯಾಲ್‌ಬೈಲ್‌‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಹಲ್ಲೆ ನಡೆಸಿರುವ 8 ಮಂದಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಹಲ್ಲೆಗೀಡಾದ ವಿದ್ಯಾರ್ಥಿಯನ್ನು ಸುಳ್ಯದ ಜಾಲ್ಸೂರ್ ಗ್ರಾಮದ ನಿವಾಸಿ ಮೊಹಮ್ಮದ್‌ ಸನೀಫ್‌ (19) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆ ನಡೆಸಿದ ದುಷ್ಕರ್ಮಿಗಳಾದ ದೀಕ್ಷಿತ್‌, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್‌ ಹಾಗೂ ಇತರರ ವಿರುದ್ಧ 143, 147, 148, 323, 324, 506 ಜೊತೆಗೆ 149 ಐಪಿಸಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವಕ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ದಕ್ಷಿಣ: ಅನೈತಿಕ ಪೊಲೀಸ್ ಪಹರೆಯಲ್ಲಿ ಹಿಂದುತ್ವ-ಬಂಧುತ್ವ ಹೋರಾಟ!

“ವಿದ್ಯಾರ್ಥಿನಿಯು ನನ್ನ ಸ್ನೇಹಿತೆಯಾಗಿದ್ದು ಆಕೆಯೊಂದಿಗೆ ಮಾತನಾಡುವುದು ಕೆಲವರಿಗೆ ಇಷ್ಟವಿಲ್ಲದ ಕಾರಣ ನನ್ನನ್ನು ಕಾಲೇಜಿನ ಗ್ರೌಂಡ್‌ಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಜೊತೆಗೆ ಮುಂದಕ್ಕೆ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದರೆ ಜೀವ ಸಹಿತ ಬಿಡುವುದಿಲ್ಲ” ಎಂದು ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ಹೇಳಿದ್ದಾರೆ ಎಂದು ವಾರ್ತಾಭಾರತಿ ವರದಿ ಹೇಳಿದೆ.

ಸನೀಫ್ ನೀಡಿದ ದೂರಿನಂತೆ ಪೋಲೀಸರು ದೀಕ್ಷಿತ್, ಧನುಷ್ , ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಬೇರೆ ಕಾಲೇಜಿನ ವಿದ್ಯಾರ್ಥಿಯಾಗಿದ್ದು ಉಳಿದವರು ಸುಳ್ಯ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳೆಂದು ಪೊಲೀಸರು ತಿಳಿಸಿದ್ದಾರೆ ಎಂದು ವಾರ್ತಾಭಾರತಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಮಾನುಷವಾಗಿ ತಳಿಸಿರುವ ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

  2. ಪೊಲೀಸ್ ಗಿರಿಯನ್ನು ಕೈಗೆತ್ತಿಕೊಳ್ಳುವುದು ತಪ್ಪು ಆದರೆ ಈ ಸಂಬಂಧವಾಗಿ ದೂರು ದಾಖಲು ಮಾಡಬಹುದು ಇತ್ತು ಕಾನೂನು ಹದಗೆಟ್ಟಿ ಹೋಗಿದೆ ಆದರೆ ಎಷ್ಟೋ ಕಡೆ ಲವ್ ಜಿಹಾದಿ ನಡಿತಾ ಇರುವುದನ್ನು ಖಂಡಿಸಬೇಕು

  3. ಮುಸ್ಲಿಂ ಹುಡುಗಿ ಹಿಂದೂ ಯುವಕನ ಜೊತೆ ಮದುವೆ ಆದ್ರೆ ಅದು ಯಾವ ಜಿಹಾದ್? ಪರಸ್ಪರ ಪ್ರೀತಿಸಿ ಮದುವೆಯಾದ ಮೇಲೆ ಯಾವ ಜಿಹಾದ್?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...