Homeಕರ್ನಾಟಕಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ?

- Advertisement -
- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2023ರಲ್ಲಿ 84 ಕೋಮು ಹಿಂಸಾಚಾರದ ಪ್ರಕರಣ ವರದಿಯಾಗಿದೆ ಎಂದು ಪಿಯುಸಿಎಲ್ ಸದಸ್ಯ ಸುರೇಶ್ ಭಟ್ ಬಾಕ್ರಬೈಲ್ ಅವರ ವರದಿ ಹೇಳುತ್ತಿದೆ. ಈ ಶಾಕಿಂಗ್‌ ಅಂಕಿ- ಅಂಶಗಳು ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಮತೀಯ ಗೂಂಡಾಗಿರಿಯ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಎಂಬ ಪ್ರಶ್ನೆ ಮೂಡಿಸಿದೆ. ದ್ವೇಷಭಾಷಣ, ರಾಜಕಾರಣಿಗಳ ಹೇಳಿಕೆಗಳು, ಪೊಲೀಸ್‌ ವೈಫಲ್ಯಗಳು ಕೋಮು ಹಿಂಸಾಚಾರ, ಮತೀಯ ಗೂಂಡಾಗಿರಿಗೆ ಕಾರಣಗಳಾಗಿ ಕಂಡು ಬರುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕೋಮು-ಧ್ರವೀಕರಣವನ್ನು ವಿಫಲಗೊಳಿಸುವ ಅಗತ್ಯವನ್ನು ವರದಿಯು ಹೇಳುತ್ತಿದೆ.

ಕಳೆದ ಬೊಮ್ಮಯಿ ಅವಧಿಯ ಬಿಜೆಪಿ ಸರಕಾರದಲ್ಲಿ ಕರಾವಳಿಯಲ್ಲಿ ಹಲವು ಮತೀಯ ಗೂಂಡಾಗಿರಿ ಪ್ರಕರಣಗಳು ನಡೆದಿದ್ದವು. ಬಸವರಾಜ ಬೊಮ್ಮಯಿ ಕಳೆದ ಬಿಜೆಪಿ ಸರಕಾರದ ಸಿಎಂ ಆಗಿದ್ದಾಗ ಖುದ್ದು ಮತೀಯ ಗೂಂಡಾಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂಬಂತಹ ಬೇಜವಾಬ್ಧಾರಿ ಹೇಳಿಕೆ ಕೊಟ್ಟಿದ್ದರು. ಇದು ಮತೀಯ ಗೂಂಡಾಗಿರಿಯನ್ನು ಪ್ರಚೋಧಿಸಿದೆ ಎಂದು ಆರೋಪ ಕೇಳಿಬಂದಿತ್ತು. ಕಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಮತೀಯ ಗೂಂಡಾಗಿರಿ ನಡೆಸಲಾಗಿತ್ತು. ಜವಳಿ ವ್ಯಾಪರಕ್ಕೆ ಹೋದ ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಅಮಾನವೀಯವಾಗಿ ಥಳಿಸಲಾಗಿತ್ತು.  ಇಬ್ಬರು ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಮಾರಣಾಂತಿಕ ಹಲ್ಲೆ ನಡೆಸಿ ಬೈಕ್ ಹತ್ತಿಸಿ ಕೊಲೆಗೆ ಯತ್ನಿಸಿದ್ದರು.

ಮೂಡಬಿದಿರೆಯ 2023ರ ಆಗಸ್ಟ್‌ನಲ್ಲಿ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ಸಹಪಾಠಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿದ್ಯಾರ್ಥಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. 2023ರ ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿತ್ತು. ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ ಮೇಲೆ ಗುಂಪೊಂದು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಇಂತಹ ಹಲವು ಪ್ರಕರಣಗಳು ಕರಾವಳಿಯಲ್ಲಿ ವರದಿಯಾಗಿತ್ತು. ಬಿಜೆಪಿ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳು ನಡೆದಿದೆ, ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಇದಕ್ಕೆ ಬ್ರೇಕ್‌ ಬೀಳುತ್ತದೆ ಎಂಬ ನಿರೀಕ್ಷೆ ಇದ್ದರೂ ನಂತರದ ದಿನಗಳಲ್ಲಿ ನಡೆದ ಘಟನೆಗಳು ಜನರಲ್ಲಿ ನಿರಾಶೆ ಮೂಡಿಸಿತ್ತು. ಬಂಟ್ವಾಳದಲ್ಲಿ ಪೊಲೀರ್ಸ ಮೇಲೆಯೇ ಮತೀಯ ಗೂಂಡಾಗಿರಿ ನಡೆದಿತ್ತು. ಬಿ.ಸಿ.ರೋಡ್ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಪೊಲೀಸ್ ಸಿಬ್ಬಂದಿ ಕುಟುಂಬವನ್ನು ಮನೆಗೆ ಮುಟ್ಟಿಸಿ, ಬಳಿಕ ಮತ್ತೆ ಕೇಸ್ ಒಂದರ ವಿಚಾರಕ್ಕೆ ಮನೆಯಿಂದ ಹೊರಕ್ಕೆ ಹೊರಡುತ್ತಿದ್ದಂತೆ, ಮನೆಯ ಅಂಗಳದಲ್ಲಿ ನಿಂತಿದ್ದ ಇಬ್ಬರು ಯುವಕರು ಮಾತಿಗಿಳಿದಿದ್ದಾರೆ. ಅವಾಚ್ಯವಾಗಿ ನಿಂದಿಸಿ, ಹುಡುಗಿಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದೀಯಾ? ಇಲ್ಲಿನ ವಿಚಾರ ನಿನಗೆ ಗೊತ್ತಲ್ಲ ಎಂದು ಬೆದರಿಸಿ ಹಲ್ಲೆ ನಡೆಸಿದ್ದರು.

ಏಪ್ರಿಲ್ 4  2023ರಂದು ಬೆಳ್ತಂಗಡಿಯ ಉಜಿರೆಯಲ್ಲಿ 22ವರ್ಷದ ಯುವಕ ಶಾಹಿಲ್‌ ಮೇಲೆ ಹಿಂದೂ ಯುವತಿಯ ಜೊತೆ ಪ್ರಯಾಣಿಸುತ್ತಿದ್ದ ಎಂಬ ಆರೋಪದಲ್ಲಿ ಬಜರಂಗದಳದ ಕಾರ್ಯಕರ್ತರ ಗುಂಪು ಬಸ್‌ ತಡೆದು ಹಲ್ಲೆ ನಡೆಸಿದ್ದಾರೆ. ವಾಹನವನ್ನು ಅಡ್ಡಗಟ್ಟಿ ಶಾಹಿಲ್‌ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸದಸ್ಯ ಸುರೇಶ್ ಭಟ್ ಬಾಕ್ರಬೈಲ್ ಅವರ ವರದಿಯ ಪ್ರಕಾರ, 2023ರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ನಡೆದ 20 ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ಈ ಪ್ರಕರಣವೂ ಒಂದಾಗಿದೆ.

ಕಳೆದ ವರ್ಷ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ 84 ಕೋಮು ವೈಷಮ್ಯದ ಪ್ರಕರಣಗಳು, ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ನಡೆದಿದೆ. ಇವುಗಳಲ್ಲಿ 44 ಪ್ರಕರಣಗಳಿಗೆ ದ್ವೇಷದ ಭಾಷಣ ಕಾರಣವಾಗಿದೆ. ಗೋರಕ್ಷಣೆ ಯತ್ನ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿ ಎರಡು ಆರೋಪಗಳು ಮತ್ತು 10 ಇತರ ಕೋಮು ಘಟನೆಗಳು ವರದಿಯಾಗಿವೆ.

ದ್ವೇಷ ಭಾಷಣದ ಪ್ರಕರಣಗಳಲ್ಲಿ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಫೆಬ್ರವರಿಯಲ್ಲಿ ‘ಒಬ್ಬ ಹಿಂದೂ ಹುಡುಗಿಯನ್ನು ಕಳೆದುಕೊಂಡರೆ 10 ಮುಸ್ಲಿಂ ಹುಡುಗಿಯರನ್ನು ಕರೆತರುವಂತೆ’ ಹಿಂದೂ ಯುವಕರಿಗೆ ಸೂಚಿಸಿದ್ದಾರೆ. ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಂಘಟನೆಗಳು ಮುಸ್ಲಿಂ ಮಾರಾಟಗಾರರಿಗೆ ಅವಕಾಶ ನಿರಾಕರಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿತ್ತು.

44 ದ್ವೇಷ ಭಾಷಣಗಳಲ್ಲಿ ಹೆಚ್ಚಿನ ಭಾಷಣಗಳು ಹಿಂದುತ್ವ ಸಂಘಟನೆಗಳ ಕಾರ್ಯಕ್ರಮದಲ್ಲಿ ಮಾಡಲ್ಪಟ್ಟಿದ್ದರೆ, ಮೂರು ಮುಸ್ಲಿಂ ಸಂಘಟನೆಗೆ ಸೇರಿದ ಕಾರ್ಯಕ್ರಮದಲ್ಲಿ ಮಾಡಲಾಗಿದೆ. ಉಡುಪಿಯ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಂತಕ ಪ್ರವೀಣ್‌ ಚೌಗಲೆಯನ್ನು ಉದ್ದೇಶಿಸಿ  ಆತನನ್ನು “ಮುಗಿಸುವ” ಅವಕಾಶ ಕಳೆದುಹೋಗಿದೆ ಎಂದು ಸ್ಟೇಟಸ್‌ ಹಾಕಿದ್ದ ಆರೋಪದಲ್ಲಿ ಹಫೀಜ್ ಮುಹಮ್ಮದ್ ಎಂಬಾತನ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಪೋಸ್ಟ್ ಮಾಡಿದ 21 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಸುರೇಶ್ ಅವರು 2010ರಿಂದ ಕೋಮು ಹಿಂಸಾಚಾರದ ಕುರಿತ ಈ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ.

ದ್ವೇಷದ ಹೇಳಿಕೆಗಳನ್ನು ನೀಡಿದರೂ ಹಿಂದುತ್ವ ನಾಯಕರು ಯಾವುದೇ ಬಂಧನವಿಲ್ಲದೆ ರಾಜಾರೋಷವಾಗಿ ತಿರುಗುತ್ತಿದ್ದಾರೆ ಎಂಬುವುದನ್ನು ವರದಿಯು ಬೆಳಕು ಚೆಲ್ಲಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ವಿಎಚ್‌ಪಿಯ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಹಮ್ಮದ್ ಫಾಝಿಲ್ ಹತ್ಯೆಯಲ್ಲಿ ತಮ್ಮ ಕಾರ್ಯಕರ್ತರ ಕೈವಾಡವಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ. 2002ರ ಗುಜರಾತ್ ಗಲಭೆಯನ್ನು ನೆನಪಿಸಿಕೊಳ್ಳುವ ಮೂಲಕ ಪಂಪ್‌ವೆಲ್ ಪ್ರೇಕ್ಷಕರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ‘ಯಾವುದೇ ಹಿಂದೂಗಳು ತಮ್ಮ ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಅವರು ಬೀದಿಗೆ ಬಂದು ಪ್ರತಿ ಮನೆಯನ್ನು  ನುಗ್ಗಿದರು. ಗುಜರಾತ್‌ನಲ್ಲಿ 58 ಕರಸೇವಕರ ಹತ್ಯೆಗೆ ಬಲಿಯಾದವರು ಎಷ್ಟು? ಗುಜರಾತ್‌ನಲ್ಲಿ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ’ ಎಂದು ಹೇಳಿದ್ದರು.

ವರದಿಯನ್ನು ಸಿದ್ಧಪಡಿಸಿದ ಪಿಯುಸಿಎಲ್ ಸದಸ್ಯ ಸುರೇಶ್ ಭಟ್ ಮಾತನಾಡುತ್ತಾ, 2006ರ ಸುರತ್ಕಲ್ ಗಲಭೆಯ ನಂತರ ಹೆಚ್ಚಾಗಿ ಇಂತಹ ಮಾಹಿತಿ ಸಂಗ್ರಹಿಸಲು ಮುಂದಾದೆ. ನನ್ನನ್ನೂ ಒಳಗೊಂಡ ಪಿಯುಸಿಎಲ್‌ನ ಸತ್ಯಶೋಧನಾ ತಂಡವು ಆ ಸಮಯದಲ್ಲಿ ಆ ಪ್ರದೇಶಕ್ಕೆ ಭೇಟಿ ನೀಡಿತ್ತು. ಕೋಮು ಘಟನೆಗಳ ಬಗ್ಗೆ ಯಾರೂ ದತ್ತಾಂಶವನ್ನು ಸಂಗ್ರಹಿಸುತ್ತಿಲ್ಲ ಎಂದು ನಾನು ಅರಿತುಕೊಂಡೆ. ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆರೆಸ್ಸೆಸ್‌ ದಕ್ಷಿಣ ಕನ್ನಡದಲ್ಲಿ ಜನರನ್ನು ವ್ಯವಸ್ಥಿತವಾಗಿ ಧ್ರುವೀಕರಿಸುತ್ತಿದೆ ಮತ್ತು 1992ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಆ ಪ್ರಯತ್ನಗಳು ವೇಗವನ್ನು ಪಡೆದುಕೊಂಡವು. ಆರೆಸ್ಸೆಸ್‌ ಶಾಖಾಗಳು ಜನರ ಮನಸ್ಸಿನಲ್ಲಿ ದ್ವೇಷವನ್ನು ಬಿತ್ತಿದೆ. ವರದಿ ಸಿದ್ದಪಡಿಸಲು ಮೊದಲು  ಮುದ್ರಣ ಮಾಧ್ಯಮವನ್ನು ಅವಲಂಬಿಸಿದ್ದೆ, ಈಗ ಡಿಜಿಟಲ್ ಮಾಧ್ಯಮವನ್ನು ಕೂಡ ಅವಲಂಬಿಸಿದ್ದೇನೆ ಎಂದು ಸುರೇಶ್ ಹೇಳಿದ್ದಾರೆ.

ರಾಜ್ಯದ ಇತರ ಭಾಗಗಳಿಗಿಂತಲೂ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂತಹ ಘಟನೆ ಮೊದಲು ಆರಂಭವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್ ಹೇಳಿದ್ದಾರೆ. ಕೋಮುಗಲಭೆಯ ನಿದರ್ಶನಗಳು ಇದ್ದಕ್ಕಿದ್ದಂತೆ ಹುಟ್ಟಿಕೊಳ್ಳುವುದಿಲ್ಲ. ಇವುಗಳಲ್ಲಿ ಹಲವು ವರದಿಯಾಗುವುದಿಲ್ಲ. ದ್ವೇಷವು ಸಾರ್ವಜನಿಕರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ ಮತ್ತು ರಾಜಕೀಯ ನಾಯಕರ ಹೇಳಿಕೆಗಳು ಅದನ್ನು ಉತ್ತೇಜಿಸುತ್ತವೆ ಎಂದು ಹೇಳಿದ್ದಾರೆ.

ಪಿಯುಸಿಎಲ್‌ನ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಅವರು ಈ ಬಗ್ಗೆ ಮಾತನಾಡಿದ್ದು, ಕೋಮುಗಲಭೆಯ ಘಟನೆಗಳಿಗೆ ಹಲವು ಕಾರಣಗಳಿರಬಹುದು, ಅವುಗಳಲ್ಲಿ ಒಂದು ಪೊಲೀಸರ ವಿಫಲತೆ ಇದೆ. ಪ್ರತಿಯೊಂದು ಧರ್ಮದಲ್ಲೂ ಮೂಲಭೂತವಾದಿಗಳು ಮತ್ತು ಪ್ರಗತಿಪರರು ಇದ್ದಾರೆ. ರಾಜ್ಯವು ಅವರಿಗೆ ಪ್ರೋತ್ಸಾಹ ನೀಡಿದಾಗ ಮತ್ತು ಅವರು ಬಯಸಿದ್ದನ್ನು ಮಾಡಲು ಅವಕಾಶ ನೀಡಿದಾಗ ಸಮಸ್ಯೆ ಉದ್ಭವಿಸುತ್ತದೆ, ಎಂದು ಹೇಳಿದ್ದಾರೆ.

ಇದನ್ನು ಓದಿ: ಕೌಟುಂಬಿಕ ಪ್ರಕರಣ: ಮನುಸ್ಮೃತಿ ಉಲ್ಲೇಖಿಸಿ ತೀರ್ಪು ನೀಡಿದ ಜಾರ್ಖಂಡ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...