Homeಕರ್ನಾಟಕದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ವಿದ್ಯಾರ್ಥಿಗಳ ಗುಂಪೊಂದು ಜಿಲ್ಲೆಯ ಕಾರಿಂಜಕ್ಕೆ ತೆರಳಿದ್ದಾಗ ಆರೋಪಿಗಳು ಅವರನ್ನು ತಡೆದು ಕಿರುಕುಳ ನೀಡಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು, ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ವರದಿಯಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಆಗಸ್ಟ್ 26 ರ ಗುರುವಾರ ಸಂಜೆ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು, ಅವರನ್ನು ಪ್ರಶ್ನಿಸಿ ಪೊಲೀಸ್‌ಗಿರಿ ನಡೆಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರಾಗಿದ್ದು, ಕಾರಿಂಜ ದೇವಾಲಯದ ಬಳಿ ತೆರಳಿದ್ದ ಅಂತರ್ ಧರ್ಮೀಯ ವಿದ್ಯಾರ್ಥಿಗಳ ಗುಂಪನ್ನು ಅಡ್ಡಿಪಡಿಸಿದ್ದಕ್ಕಾಗಿ ಮತ್ತು ಅವರನ್ನು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ್ದಕ್ಕೆ ಬಂಧಿಸಲಾಯಿತು ಎಂದು ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನವಾನೆ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ಕೆಲವು ಆರೋಪಿಗಳು ಹಿಂದೂ ಜಾಗರಣ ವೇದಿಕೆ (ಎಚ್‌ಜೆವಿ) ಯವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ಓದುತ್ತಿದ್ದ ಆರು ವಿದ್ಯಾರ್ಥಿಗಳು ಗುರುವಾರ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ದೇವಾಸ್ಥಾನದ ಪರಿಸರದಲ್ಲಿ ಪೋಟೋ ತೆಗೆದು ಮರಳುತ್ತಿದ್ದಾಗ, ಐವರು ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ತಡೆದು ಪ್ರಶ್ನಿಸಿದೆ.

“ವಿದ್ಯಾರ್ಥಿಗಳನ್ನು ಕೆಲಕಾಲ ತಡೆದು ನಿಲ್ಲಿಸಿ ಪ್ರಶ್ನಿಸಲಾಗಿದೆ. ಇದು ಕಾನೂನು ಬಾಹಿರ ಕೃತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಒಬ್ಬರು ಬುರ್ಖಾ ಧರಿಸಿದ್ದರು. ಈ ಬಗ್ಗೆ ಆರೋಪಿಗಳು ಸ್ಥಳೀಯರಿಂದ ಮಾಹಿತಿ ಪಡೆದಿರುವ ಸಾಧ್ಯತೆಯಿದೆ. ನಾವು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಎಸ್‌ಪಿ ಹೃಷಿಕೇಶ್ ಸೋನಾವಾನೆ ಹೇಳಿದ್ದಾರೆ.

“ಈ ರೀತಿಯಾಗಿ ಯಾವುದೆ ಕಾರಣವಿಲ್ಲದೆ ತೊಂದರೆ ನೀಡುವುದಕ್ಕೆ ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಪ್ರಜ್ಞಾವಂತಿಕೆಯಿಂದ ವರ್ತಿಸಬೇಕು, ಅಪರಾಧದಲ್ಲಿ ತೊಡಗಿಸಿಕೊಳ್ಳದ ಹೊರತು ಯಾರನ್ನೂ ತಡೆಯುವ ಹಾಗಿಲ್ಲ” ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 341 (ತಪ್ಪಾದ ನಿರ್ಬಂಧ) ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಪೋಲೀಸ್‌ಗಿರಿ ಹೆಚ್ಚುತ್ತಿದೆ. ಇಂತಹ ಘಟನೆ ಜಿಲ್ಲೆಯಲ್ಲಿ ಹಲವಾರು ಬಾರಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ವಾರವವಷ್ಟೇ, ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ಜಿಲ್ಲೆಯಲ್ಲಿ ವರದಿಯಾಗಿತ್ತು. ಬಸ್ಸಿನಲ್ಲಿದ್ದ ಯುವಕ ಮತ್ತು ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ್ದ ದುಷ್ಕರ್ಮಿಗಳು, ಅವರಿಬ್ಬರಿಗೂ ಯಾವುದೆ ಸಂಬಂಧವಿಲ್ಲ ಎಂದು ತಿಳಿದು ಬಂದ ನಂತರ ಬಿಟ್ಟು ಕಳುಹಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...