Homeಕರ್ನಾಟಕದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ವಿದ್ಯಾರ್ಥಿಗಳ ಗುಂಪೊಂದು ಜಿಲ್ಲೆಯ ಕಾರಿಂಜಕ್ಕೆ ತೆರಳಿದ್ದಾಗ ಆರೋಪಿಗಳು ಅವರನ್ನು ತಡೆದು ಕಿರುಕುಳ ನೀಡಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು, ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ವರದಿಯಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಆಗಸ್ಟ್ 26 ರ ಗುರುವಾರ ಸಂಜೆ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು, ಅವರನ್ನು ಪ್ರಶ್ನಿಸಿ ಪೊಲೀಸ್‌ಗಿರಿ ನಡೆಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರಾಗಿದ್ದು, ಕಾರಿಂಜ ದೇವಾಲಯದ ಬಳಿ ತೆರಳಿದ್ದ ಅಂತರ್ ಧರ್ಮೀಯ ವಿದ್ಯಾರ್ಥಿಗಳ ಗುಂಪನ್ನು ಅಡ್ಡಿಪಡಿಸಿದ್ದಕ್ಕಾಗಿ ಮತ್ತು ಅವರನ್ನು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ್ದಕ್ಕೆ ಬಂಧಿಸಲಾಯಿತು ಎಂದು ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನವಾನೆ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ಕೆಲವು ಆರೋಪಿಗಳು ಹಿಂದೂ ಜಾಗರಣ ವೇದಿಕೆ (ಎಚ್‌ಜೆವಿ) ಯವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ಓದುತ್ತಿದ್ದ ಆರು ವಿದ್ಯಾರ್ಥಿಗಳು ಗುರುವಾರ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ದೇವಾಸ್ಥಾನದ ಪರಿಸರದಲ್ಲಿ ಪೋಟೋ ತೆಗೆದು ಮರಳುತ್ತಿದ್ದಾಗ, ಐವರು ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ತಡೆದು ಪ್ರಶ್ನಿಸಿದೆ.

“ವಿದ್ಯಾರ್ಥಿಗಳನ್ನು ಕೆಲಕಾಲ ತಡೆದು ನಿಲ್ಲಿಸಿ ಪ್ರಶ್ನಿಸಲಾಗಿದೆ. ಇದು ಕಾನೂನು ಬಾಹಿರ ಕೃತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಒಬ್ಬರು ಬುರ್ಖಾ ಧರಿಸಿದ್ದರು. ಈ ಬಗ್ಗೆ ಆರೋಪಿಗಳು ಸ್ಥಳೀಯರಿಂದ ಮಾಹಿತಿ ಪಡೆದಿರುವ ಸಾಧ್ಯತೆಯಿದೆ. ನಾವು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಎಸ್‌ಪಿ ಹೃಷಿಕೇಶ್ ಸೋನಾವಾನೆ ಹೇಳಿದ್ದಾರೆ.

“ಈ ರೀತಿಯಾಗಿ ಯಾವುದೆ ಕಾರಣವಿಲ್ಲದೆ ತೊಂದರೆ ನೀಡುವುದಕ್ಕೆ ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಪ್ರಜ್ಞಾವಂತಿಕೆಯಿಂದ ವರ್ತಿಸಬೇಕು, ಅಪರಾಧದಲ್ಲಿ ತೊಡಗಿಸಿಕೊಳ್ಳದ ಹೊರತು ಯಾರನ್ನೂ ತಡೆಯುವ ಹಾಗಿಲ್ಲ” ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 341 (ತಪ್ಪಾದ ನಿರ್ಬಂಧ) ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಪೋಲೀಸ್‌ಗಿರಿ ಹೆಚ್ಚುತ್ತಿದೆ. ಇಂತಹ ಘಟನೆ ಜಿಲ್ಲೆಯಲ್ಲಿ ಹಲವಾರು ಬಾರಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ವಾರವವಷ್ಟೇ, ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ಜಿಲ್ಲೆಯಲ್ಲಿ ವರದಿಯಾಗಿತ್ತು. ಬಸ್ಸಿನಲ್ಲಿದ್ದ ಯುವಕ ಮತ್ತು ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ್ದ ದುಷ್ಕರ್ಮಿಗಳು, ಅವರಿಬ್ಬರಿಗೂ ಯಾವುದೆ ಸಂಬಂಧವಿಲ್ಲ ಎಂದು ತಿಳಿದು ಬಂದ ನಂತರ ಬಿಟ್ಟು ಕಳುಹಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...